Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಂದನೆ, ಸ್ನೇಹ ಸಮ್ಮಿಲನ ಕಾರ್ಯಕ್ರಮ : ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಲು‌ ಪ್ರೇಮಕುಮಾರ್ ಮನವಿ
ಇತ್ತೀಚಿನ ಸುದ್ದಿಗಳು

ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಂದನೆ, ಸ್ನೇಹ ಸಮ್ಮಿಲನ ಕಾರ್ಯಕ್ರಮ : ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಲು‌ ಪ್ರೇಮಕುಮಾರ್ ಮನವಿ

August 5, 20252 Mins Read
Share
Facebook Twitter LinkedIn Pinterest WhatsApp Email

ಕುಶಾಲನಗರ, ಆ.5 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯ 2002-03, 2005-06 ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಮತ್ತು ಗುರುವಂದನೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್,  ಶಾಲೆಯ ಹಳೆಯ ವಿದ್ಯಾರ್ಥಿಗಳು ಒಟ್ಟಾಗಿ ಸೇರಿ ಅಂದಿನಿಂದ ಸೇವೆ ಸಲ್ಲಿಸಿದ ಗುರುಗಳಿಗೆ ಅಭಿನಂದನೆ ಸಲ್ಲಿಸುವ ಮೂಲಕ ವಿದ್ಯಾರ್ಥಿ ಜೀವನದ ನೂರಾರು ನೆನಪುಗಳು ಕಣ್ಣು ಮುಂದೆ ಬರುವಂತೆ ಮಾಡಿದೆ. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ತಮ್ಮ ಶಾಲೆಯನ್ನು ಮರೆಯದೆ, ತಮ್ಮಿಂದಾಗುವ ಸಹಕಾರವನ್ನು ಶಾಲೆಗಳ ಅಭಿವೃದ್ಧಿಗೆ ನೀಡುವುದು ಉತ್ತಮ ಬೆಳವಣಿಗೆ ಎಂದರು. ಗುರುವಿನ ಶ್ರೇಷ್ಠತೆ ವಿದ್ಯಾರ್ಥಿ ಜೀವನದಲ್ಲಿ ತಿಳಿಯುವುದಕ್ಕಿಂತ ವೃತ್ತಿ ಜೀವನದ ಪಯಣದಲ್ಲಿ ತಿಳಿಯುವುದು ಹೆಚ್ಚು. ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಶಾಲೆಯ ಹಳೆಯ ನೆನಪುಗಳು, ಕಲಿಕೆಯ ಪರಿಶ್ರಮ, ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ’ ಎಂದರು. ಕಲಿಸಿದ ಶಾಲೆ ಮತ್ತು ಕಲಿಸಿದ ಗುರುವಿಗೆ ನಮಿಸುವ ಹಳೇ ವಿದ್ಯಾರ್ಥಿಗಳ ಔದಾರ್ಯ ಮೆಚ್ಚುಗೆ ತಂದಿದ್ದು, ಇದು ಮಾದರಿ ಕಾರ್ಯಕ್ರಮವಾಗಿದೆ ಎಂದು ಪ್ರೇಮಕುಮಾರ್ ಪ್ರಶಂಸಿದರು. ಶಾಲೆಯ ಹಿರಿಯ ವಿದ್ಯಾರ್ಥಿಗಳು ಒಂದು ಶಿಕ್ಷಣ ಸಂಸ್ಥೆಗಳ ಅತ್ಯುತ್ತಮ ಶೈಕ್ಷಣಿಕ ರಾಯಭಾರಿಗಳು. ಇಂತಹ ಕಾರ್ಯಕ್ರಮಗಳು “ಹಳೇ ವಿದ್ಯಾರ್ಥಿಗಳ ನಡಿಗೆ ಮರಳಿ ಸರ್ಕಾರಿ ಶಾಲೆಯೆಡೆಗೆ” ಎಂಬ ಕಲ್ಪನೆಯೊಂದಿಗೆ ಶಾಲೆಯ ಹಳೇ ವಿದ್ಯಾರ್ಥಿಗಳು ತಾವು ಕಲಿತ ಶಾಲೆಯನ್ನು ನನ್ನ ಶಾಲೆ, ನಮ್ಮೂರ ಶಾಲೆ ಎಂಬ ಧ್ಯೇಯದೊಂದಿಗೆ ಸರ್ಕಾರಿ ಶಾಲೆಗಳನ್ನು ಎತ್ತರಕ್ಕೆ ಕೊಂಡೊಯ್ಯಲು ಸಾಧ್ಯವಾಗುತ್ತದೆ ಎಂದು ಮುಖ್ಯ ಶಿಕ್ಷಕ ಪ್ರೇಮಕುಮಾರ್ ಹೇಳಿದರು. ಉಪನ್ಯಾಸಕ ಫಿಲಿಪ್ ವಾಸ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಸಂಪನ್ಮೂಲ ಹೆಚ್ಚಿಸಿದರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಸೌಲಭ್ಯ ಕಲ್ಪಿಸಲು ಸಹಕಾರಿಯಾಗುತ್ತದೆ’ ಎಂದರು. ನಿವೃತ್ತ ಶಿಕ್ಷಕಿ ಬಿ.ಪಿ.ಅನಿತ ಮಾತನಾಡಿ, ಕಾರ್ಯಕ್ರಮವು ಗುರು- ಶಿಷ್ಯರ ನಡುವೆ ಉತ್ತಮ ಬಾಂಧವ್ಯ ಬೆಳೆಸಲು ಸಹಕಾರಿಯಾಗಿದೆ ಎಂದರು. ಶಿಕ್ಷಕಿ ಮಂಜುಳ ಮಾತನಾಡಿ, ಗುರುಗಳ ಮಾರ್ಗದರ್ಶನದಲ್ಲಿ
ನಡೆದಾಗ ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು. ಸನ್ಮಾನಿತರಾದ ಡಿ.ರಮೇಶ್ ಮಾತನಾಡಿ, ಹಳೇ ವಿದ್ಯಾರ್ಥಿಗಳು ಗುರುಗಳು ಮತ್ತು ಶಾಲೆಯ ಮೇಲೆ ಅಭಿಮಾನವಿಟ್ಟು ಇಂತಹ ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು. ಮಹೇಶ್ ಮಾತನಾಡಿ, ಗುರುಗಳ ಮಾರ್ಗದರ್ಶನದಲ್ಲಿ ನಾವು ವಿದ್ಯೆ, ಸಂಸ್ಕಾರವನ್ನು ಕಲಿತು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಿರುವುದರಿಂದ ಸಮಾಜದಲ್ಲಿ ದೊಡ್ಡಮಟ್ಟದಲ್ಲಿ ಬೆಳೆದಿದ್ದೇವೆ ಎಂದರು. ಅನಿಸಿಕೆ ವ್ಯಕ್ತಪಡಿಸಿದ ವೇಡಿವೇಲು ಮಾತನಾಡಿ, ಗುರುಗಳು ನಮ್ಮ ಪಾಲಿಗೆ ದೇವರಿದ್ದಂತೆ ಎಂದರು. ಗುರುವಂದನಾ ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರಾದ ಫಿಲಿಪ್ ವಾಸ್, ಡಿ.ರಮೇಶ್, ಮಂಜುಳ, ಸುಚಿತ್ರ,ನಿವೃತ್ತ ಶಿಕ್ಷಕಿ ಬಿ.ಪಿ.ಅನಿತಾ,
ನಿವೃತ್ತ ಸಿಬ್ಬಂದಿ ಚಂದ್ರಮ್ಮ ಅವರನ್ನು ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ವಿದ್ಯಾರ್ಥಿಗಳ ಪರವಾಗಿ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು. ಹಿರಿಯ ವಿದ್ಯಾರ್ಥಿಗಳಾದ ಎಸ್.ಸಕಲ ಮಹೇಶ್,ಕೆ.ಕೆ.ಚೇತನ್, ಎಂ.ಎಲ್.ಅವಿನಾಶ್, ಕೆ.ಎಚ್. ಸದ್ದಾಂ ಹುಸೇನ್, ಜಿ.ಮಧು,ಆನಂದ್, ಕೆ.ಎಂ.ಅಜರುದ್ದೀನ್, ಜಿ.ಬಿ.ಅಭಿಲಾಷ, ಎ.ಸಿ.ವಡಿವೇಲು, ಕೆ.ದಿವ್ಯ,ಮಹಾಲಕ್ಷ್ಮಿ ಮೊದಲಾವರು ತಾವು ಪ್ರೌಢಶಾಲೆಯಲ್ಲಿ ಕಳೆದ ದಿನಗಳ ಶಾಲಾ ಪರಿಸರದ ಬಗ್ಗೆ ತಮ್ಮ ನೆನಪುಗಳನ್ನು ಮೆಲುಕು ಹಾಕಿದರು. ಶಾಲಾ ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಎಂ.ಟಿ.ದಯಾನಂದ ಪ್ರಕಾಶ್, ಬಿ.ಎನ್. ಸುಜಾತ, ಬಿ.ಡಿ. ರಮ್ಯ, ಎಸ್.ಎಂ.ಗೀತಾ ಕೆ.ಟಿ.ಸೌಮ್ಯ, ಬಿ.ಎಸ್.ಅನ್ಸಿಲಾ ರೇಖಾ, ಸಿಬ್ಬಂದಿ ಎಂ.ಉಷಾ, ರಂಗಭೂಮಿ ಕಲಾವಿದ ಭರಮಣ್ಣ ಬೆಟಗೇರಿ, ಹಿರಿಯ ವಿದ್ಯಾರ್ಥಿಗಳು ಇದ್ದರು. :: ಶಾಲೆಗೆ ತಟ್ಟೆ, ಲೋಟಗಳ ಕೊಡುಗೆ :: ಸರ್ಕಾರಿ ಶಾಲೆಗಳ ಪ್ರಗತಿಗೆ ಸಮುದಾಯದ ಸಹಭಾಗಿತ್ವದಲ್ಲಿ “ನನ್ನ ಶಾಲೆ ನನ್ನ ಜವಾಬ್ದಾರಿ” ಕಾರ್ಯಕ್ರಮದಡಿ‌ ಈ ವಿದ್ಯಾರ್ಥಿಗಳು ಶಾಲೆಯ 100 ಮಕ್ಕಳಿಗೆ ಉಚಿತವಾಗಿ ಸ್ಟೀಲ್ ತಟ್ಟೆ ಮತ್ತು ಲೋಹ ಹಾಗೂ ಅವುಗಳನ್ನು ಶೇಖರಿಸಿಡಲು ಸಂಗ್ರಹಾ ಪೆಟ್ಟಿಗೆಯನ್ನು ಶಾಲೆಯ ಮುಖ್ಯ ಶಿಕ್ಷಕರಿಗೆ ಹಸ್ತಾಂತರಿಸಿದರು.

 

Share. Facebook Twitter Pinterest LinkedIn Tumblr Email WhatsApp
Previous Article*ಆ.6 ರಂದು ಮಡಿಕೇರಿಯ ವಿವಿಧೆಡೆ ವಿದ್ಯುತ್ ವ್ಯತ್ಯಯ*
Next Article *ರಾಜಿಯಾಗುವ ಪ್ರಕರಣ ಇತ್ಯರ್ಥಕ್ಕೆ ಅವಕಾಶ*

Related Posts

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

ಮಡಿಕೇರಿ, NEWS DESK ಫೆ.11:-ಹಲವು ದಶಕಗಳಿಂದ ಅರಣ್ಯ/ ಸರ್ಕಾರಿ ಭೂಮಿ ಅನುಭವಿಸಿಕೊಂಡು ಬಂದಿರುವ ಆದಿವಾಸಿಗಳಿಗೆ ಅರಣ್ಯ ಹಕ್ಕು ಕಾಯ್ದೆಯನ್ನು ಹೆಚ್ಚಿನ…

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.