
ಸುಂಟಿಕೊಪ್ಪ ಆ.5 NEWS DESK : ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರು ಆರಂಭಿಸಿರುವ ಮುಷ್ಕರ ಜನಜೀವನದ ಮೇಲೆ ಭಾರಿ ಪರಿಣಾಮ ಬೀರಿದ್ದು, ಸೂಕ್ತ ಸಂಚಾರ ವ್ಯವಸ್ಥೆ ಇಲ್ಲದೇ ಸಾರ್ವಜನಿಕರೂ ಪರದಾಡುವಂತಾಯಿತು. ಸುಂಟಿಕೊಪ್ಪದಲ್ಲಿ ಸರ್ಕಾರಿ ಬಸ್ಸನ್ನೇ ಅವಲಂಭಿತರಾಗಿದ್ದ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ಕಛೇರಿಗೆ ತೆರಳುವ ಸಿಬ್ಬಂದಿಗಳು ಹಾಗೂ ಜನಸಾಮಾನ್ಯರು ಸರ್ಕಾರಿ ಬಸ್ ಪ್ರಯಾಣಿಕರು ಬಸ್ ಸಿಗದೆ ಸಮಸ್ಯೆ ಎದುರಿಸಿದ್ದರು. ಸರ್ಕಾರಿ ಬಸ್ ಸಂಚಾರ ಸ್ಥಗಿತಗೊಂಡ ಹಿನ್ನಲೆಯಲ್ಲಿ ಮಡಿಕೇರಿ-ಕುಶಾಲನಗರ ಭಾಗಗಳಿಗೆ ತೆರಳುವ ಪ್ರಯಾಣಿಕರು ಖಾಸಗಿ ವಾಹನಗಳಲ್ಲಿ ತೆರಳುವಂತಾಯಿತು. ಮುಷ್ಕರವು ಮುಂದುವರಿದಲ್ಲಿ ಸರ್ಕಾರಿ ಬಸ್ಸನ್ನೇ ಅವಲಂಭಿತರಾಗಿರುವ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ಕಛೇರಿ ಸಿಬ್ಬಂದಿಗಳು ಹಾಗೂ ಜನಸಾಮಾನ್ಯರಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದರು.







