
ಮಡಿಕೇರಿ ಆ.5 NEWS DESK : ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕೊಡಗಿನ ಏಳು ಕಡೆಗಳಲ್ಲಿ ಆ.8 ರಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ರಂಜನ್ ಗೌಡ (ಬೋಜೇಗೌಡ) ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲಾ ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜಿಲ್ಲೆಯ ಏಳು ಕಡೆಗಳಲ್ಲಿ ಅಖಂಡ ಭಾರತದ ಸಂಕಲ್ಪ ದಿನ ಕಾರ್ಯಕ್ರಮ, ಪಂಜಿನ ಮೆರವಣಿಗೆ ಹಾಗೂ ವಾಹನ ಜಾಥ ನಡೆಯಲಿದೆ ಎಂದರು. ಆ.8 ರಂದು ಸಂಜೆ 6 ಗಂಟೆಗೆ ಮಡಿಕೇರಿ ನಗರದ ಮಹದೇವಪೇಟೆಯ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಪ್ರಜೆ ಸಲ್ಲಿಸುವುದರ ಮೂಲಕ ಪಂಜಿನ ಮೆರವಣಿಗೆ ಆರಂಭಗೊಂಡು ಇಂದಿರಾ ಗಾಂಧಿ ವೃತ್ತ, ಅಂಚೆ ಕಚೇರಿ, ಜನರಲ್ ತಿಮ್ಮಯ್ಯ ವೃತ್ತಕ್ಕಾಗಿ ಹಾದು ಹೋಗಿ ಕೊಡವ ಸಮಾಜ ಸಭಾಂಗಣದಲ್ಲಿ ಸಂಜೆ 7.30 ಗಂಟೆಗೆ ಸಭಾ ಕಾರ್ಯಕ್ರಮ ಜರುಗಲಿದೆ. ರಾತ್ರಿ 9.30 ಗಂಟೆಗೆ 2 ಕಿ.ಮೀ. ಮುಕ್ತಾಯ ಮೆರವಣಿಗೆ ನಡೆಯಲಿದ್ದು, ಸುಮಾರು 500ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು. ಆ.9 ರಂದು ಸಂಜೆ 6 ಗಂಟೆಗೆ ಜಂಬೂರು ಎಫ್.ಎಂ.ಸಿ ಬಡಾವಣೆಯಿಂದ ಪಂಜಿನ ಮೆರವಣಿಗೆ ಹೊರಟು ಮಾದಾಪುರ ಪಟ್ಟಣಕ್ಕಾಗಿ ಶ್ರೀ ಗಣಪತಿ ದೇವಾಯದಲ್ಲಿ 7.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಆ.10 ರಂದು ಸಂಜೆ 4 ಗಂಟೆಗೆ ಕೊಯನಾಡು ಶ್ರೀ ಮಹಾಗಣಪತಿ ದೇವಾಲಯ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಂಜೆ 6.30ಕ್ಕೆ ಮುಕ್ತಾಯ ಮೆರವಣಿಗೆ ನಡೆಯಲಿದೆ. ಸುಮಾರು 300ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು. ಸಂಜೆ 6 ಗಂಟೆಗೆ ಕೊಡ್ಲಿಪೇಟೆಯ ಆರ್.ಎಂ.ಸಿ ಮಾರುಕಟ್ಟೆ ಸಮೀಪದ ಶ್ರೀ ಗಣಪತಿ ದೇವಾಲಯದಿಂದ ಪಂಜಿನ ಮೆರವಣಿಗೆ ಹೊರಟು ಮುಖ್ಯ ರಸ್ತೆಗಾಗಿ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಂಜೆ 7.30 ಗಂಟೆಗೆ 1.5 ಕಿಮ.ಮೀ ಮೆರವಣಿಗೆ ನಡೆಯಲಿದೆ. ಆ.11 ರಂದು ಬೆಳಿಗ್ಗೆ 10 ಗಂಟೆಗೆ ಗೋಣಿಕೊಪ್ಪ ಆರ್.ಎಂ.ಸಿ ಆವರಣದಿಂದ ಗೋಣಿಕೊಪ್ಪ ಖಾಸಗಿ ಬಸ್ ನಿಲ್ದಾಣದ ಮೂಲಕ ಬೈಪಾಸ್ ರಸ್ತೆಗಾಗಿ ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಸುಮಾರು 100 ವಾಹನಗಳಲ್ಲಿ 10 ಕಿ.ಮೀ ನಷ್ಟು ವಾಹನ ಜಾಥಾ ನಡೆಯಲಿದೆ ಎಂದರು. ಆ.13 ರಂದು ವಿರಾಜಪೇಟೆಯಲ್ಲಿ ಸಂಜೆ 6 ಗಂಟೆಗೆ ತೆಲುಗರ ಬೀದಿ ಶ್ರೀ ಮಾರಿಯಮ್ಮ ದೇವಾಲಯದಿಂದ ಪಂಜಿನ ಮೆರವಣಿಗೆ ಹೊರಟು ಕ್ಲಾಕ್ ಟವರ್ ಖಾಸಗಿ ಬಸ್ ನಿಲ್ದಾಣ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಕ್ಲಾಕ್ ಟವರ್ ರಸ್ತೆಗಾಗಿ ವಿರಾಜಪೇಟೆ ಮಹಿಳಾ ಸಮಾಜದಲ್ಲಿ ಸಂಜೆ 7.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, 3 ಕಿ.ಮೀ ದೂರ ಮೆರವಣಿಗೆ ನಡೆಯಲಿದೆ. ಆ.14 ರಂದು ಕುಶಾಲನಗರದಲ್ಲಿ ಸಂಜೆ 6 ಗಂಟೆಗೆ ಬೈಚನಹಳ್ಳಿ ಶ್ರೀ ಮಾರಿಯಮ್ಮ ದೇವಾಲಯದಿಂದ ಪಂಜಿನ ಮೆರವಣಿಗೆ ಹೊರಟು ಆ್ಯಕ್ಸಿಸ್ ಬ್ಯಾಂಕ್ ರಸ್ತೆಗಾಗಿ ರಥಬೀದಿ ಐ.ಬಿ. ರಸ್ತೆ ಮೂಲಕ ರೈತಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಸಂಜೆ 7.30 ಗಂಟೆಗೆ ಸುಮಾರು 2.ಕಿ.ಮೀ ನಷ್ಟು ದೂರ ಪಂಜಿನ ಮೆರವಣಿಗೆ ನಡೆಯಲಿದೆ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಹಿಂದು ಬಾಂಧವರು ಹೆಚ್ಚಿನ ಸಂಖ್ಯೆಲ್ಲಿ ಪಾಲ್ಗೊಳ್ಳುವಂತೆ ರಂಜನ್ ಗೌಡ ಮನವಿ ಮಾಡಿದರು. ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಸಂಯೋಜಕ ಸುನಿಲ್, ಸಹ ಸಂಯೋಜಕ ಚೇತನ್, ಅಲ್ಲಮಾಡ ಶರತ್, ತಿಮ್ಮಯ್ಯ ಹಾಗೂ ಅಪ್ಪು ರೈ ಉಪಸ್ಥಿತರಿದ್ದರು.








