
ಮಡಿಕೇರಿ ಆ.8 NEWS DESK : 66/11ಕೆ.ವಿ ಕುಶಾಲನಗರ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಸುಂಟಿಕೊಪ್ಪ, ಪನ್ಯ, ಹೊಸಕೋಟೆ, ನಾಕೂರು, ಗದ್ದೆಹಳ್ಳ ಫೀಡರ್ಗಳಲ್ಲಿ ಆಗಸ್ಟ್, 11 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಾಹಕ ಬದಲಾವಣೆ ಕಾಮಗಾರಿ ಇರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಸುಂಟಿಕೊಪ್ಪ ಟೌನ್, ಪನ್ಯ ಹರದೂರು, ಉಲುಗುಲಿ, ನಾರ್ಗಾಣೆ, ಬೆಟ್ಟಗೇರಿ, ನಾಕೂರು, ಹೆರೂರು, ಅಂದಗೋವೆ, ಕೊಡಗರಹಳ್ಳಿ, ಹೊಸಕೋಟೆ, ಕಂಬಿಬಾಣೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.








