Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿಶ್ವ ಬುಡಕಟ್ಟು ದಿನಾಚರಣೆ : ಶಿಕ್ಷಣದೊಂದಿಗೆ ಸಂಸ್ಕೃತಿ ಮತ್ತು ಪರಿಸರವನ್ನು ಉಳಿಸಿ ಬೆಳೆಸಬೇಕು : ಈರಮಂಡ ಹರಿಣಿ ವಿಜಯ್ ಕರೆ*
ಇತ್ತೀಚಿನ ಸುದ್ದಿಗಳು

*ವಿಶ್ವ ಬುಡಕಟ್ಟು ದಿನಾಚರಣೆ : ಶಿಕ್ಷಣದೊಂದಿಗೆ ಸಂಸ್ಕೃತಿ ಮತ್ತು ಪರಿಸರವನ್ನು ಉಳಿಸಿ ಬೆಳೆಸಬೇಕು : ಈರಮಂಡ ಹರಿಣಿ ವಿಜಯ್ ಕರೆ*

August 11, 20252 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಆ.11 NEWS DESK : ಇಂದಿನ ಆಧುನಿಕ ಯುಗದಲ್ಲಿ ಶಿಕ್ಷಣವೊಂದಿದ್ದರೆ ಸಾಕು ಎನ್ನುವ ಮನೋಭಾವ ಬೆಳೆಯುತ್ತಿದೆ. ಇದು ಸರಿಯಲ್ಲ, ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಮತ್ತು ಪರಿಸರವನ್ನು ಉಳಿಸಿ ಬೆಳೆಸಿದರೆ ಮಾತ್ರ ನಮಗೆ ಭವಿಷ್ಯವಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್ ಅಭಿಪ್ರಾಯಪಟ್ಟಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆ ವತಿಯಿಂದ ಪಾಲೇಮಾಡು ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಬುಡಕಟ್ಟು ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರತಿಯೊಬ್ಬರಿಗೆ ಶಿಕ್ಷಣದ ಅಗತ್ಯವಿದೆ, ಆದರೆ ಶಿಕ್ಷಣದ ಜೊತೆ ಜೊತೆಯಲ್ಲಿ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗಾಗಿ ಬೆಳೆಸಿಕೊಂಡು ಹೋಗಬೇಕು ಎಂದರು. ಬುಡಕಟ್ಟು ಜನರು ಈ ಪರಿಸರದ ಅವಿಭಾಜ್ಯ ಅಂಗವಾಗಿದ್ದಾರೆ, ಅವರಿದ್ದರೆ ಪರಿಸರ ಉಳಿಯುತ್ತದೆ. ನಾವು ಕೂಡ ಪರಿಸರದ ಬಗ್ಗೆ ಕಾಳಜಿ ವಹಿಸಬೇಕಾಗಿದೆ. ಕೊಡಗಿನ ಗದ್ದೆ ಮತ್ತು ತೋಟಗಳು ಇಂದು ಮರೆಯಾಗುತ್ತಿದ್ದು, ಕಾಂಕ್ರೀಟ್ ಕಟ್ಟಡಗಳು ತಲೆ ಎತ್ತುತ್ತಿವೆ. ಸುತ್ತಮುತ್ತಲ ಹಸಿರ ಪರಿಸರ ಅಭಿವೃದ್ಧಿಯ ಹೆಸರಿನಲ್ಲಿ ನಾಶವಾಗುತ್ತಿದೆ. ಇಂದು ಪರಿಸರ ನಾಶವಾದರೆ ಮುಂದೊಂದು ದಿನ ಮನುಷ್ಯರು ಕೂಡ ನಾಶವಾಗಬೇಕಾಗುತ್ತದೆ ಎಂದು ಎಚ್ಚರಿಕೆಯ ಮಾತುಗಳನ್ನಾಡಿದರು. ಮುಖ್ಯ ಭಾಷಣ ಮಾಡಿದ ಚೊಟ್ಟೆಪಾರೆ ಹಾಡಿಯ ಬುಡಕಟ್ಟು ಜನಾಂಗದ ಮುಖಂಡ ಜೆ.ಕೆ.ರಾಮು ಅವರು ಇಂದು ಆದಿವಾಸಿಗಳು ಕೂಡ ಉನ್ನತ ಶಿಕ್ಷಣವನ್ನು ಪಡೆಯುತ್ತಿದ್ದಾರೆ, ಆದರೆ ಬುಡಕಟ್ಟು ಸಂಪ್ರದಾಯವನ್ನು ಕಡೆಗಣಿಸದೆ ಆಚರಿಸಿಕೊಂಡು ಹೋಗುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಸುಮಾರು 52 ಆದಿವಾಸಿ ಮೂಲ ಸಮುದಾಯಗಳಿವೆ. ಈ ಸಮುದಾಯಗಳನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಯಾವುದೇ ಕಾರಣಕ್ಕೂ ಬುಡಕಟ್ಟು ಜನಾಂಗ ನಶಿಸಿ ಹೋಗಬಾರದು. ಸಾಮಾಜಿಕ ಪಿಡುಗುಗಳ ದುಷ್ಪರಿಣಾಮದ ಕುರಿತು ಆದಿವಾಸಿಗಳಲ್ಲಿ ಹೆಚ್ಚು ಹೆಚ್ಚು ಅರಿವು ಮೂಡಿಸಬೇಕಾಗಿದೆ ಎಂದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಆಯುಕ್ತ ಜಿಮ್ಮಿ ಸಿಕ್ವೆರಾ ಅವರು ಮಾತನಾಡಿ ಬುಡಕಟ್ಟು ಜನರು ಶಿಕ್ಷಣಕ್ಕೆ ಮಹತ್ವ ನೀಡಬೇಕು, ಉನ್ನತ ಶಿಕ್ಷಣವನ್ನು ಪಡೆಯಬೇಕು ಎಂದು ಕಿವಿಮಾತು ಹೇಳಿದರು. ಪ್ರತಿಯೊಬ್ಬರು ವಿದ್ಯಾವಂತರಾಗಬೇಕು ಎನ್ನುವ ಕಾರಣಕ್ಕಾಗಿ ಸರಕಾರ ಎಲ್ಲಾ ಸೌಲಭ್ಯಗಳನ್ನು ನೀಡುತ್ತಿದೆ, ಉಚಿತ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಇವುಗಳನ್ನೆಲ್ಲ ಸದುಪಯೋಗಪಡಿಸಿಕೊಳ್ಳಬೇಕು, ವಿದ್ಯೆಯನ್ನು 10ನೇ ತರಗತಿಗೆ ಮೊಟಕುಗೊಳಿಸಬಾರದು. ಹೆಚ್ಚಿನ ವಿದ್ಯಾಭ್ಯಾಸ ಪಡೆಯುವ ಮೂಲಕ ದಬ್ಬಾಳಿಕೆ ಮತ್ತು ಅಕ್ರಮಗಳನ್ನು ಧೈರ್ಯದಿಂದ ಎದುರಿಸಬೇಕು. ಹಣವೊಂದಿದ್ದರೆ ಸಾಲದು ಶಿಕ್ಷಣ ಅತಿ ಮುಖ್ಯ, ವಿದ್ಯೆಯನ್ನು ಯಾರಿಂದಲೂ ಕದಿಯಲು ಸಾಧ್ಯವಿಲ್ಲ ಎಂದರು. ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ ಅವರು ಮಾತನಾಡಿ ಆದಿವಾಸಿಗಳು ಸ್ವಂತ ಸೂರು ಹೊಂದಬೇಕು ಎನ್ನುವುದು ನಮ್ಮ ಗುರಿಯಾಗಿದೆ. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ ಮತ್ತು ಹೋರಾಟಗಳಿಗೆ ಸ್ಪಂದಿಸಲಾಗುತ್ತಿದೆ. ಬಡವರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದರು. ಮೂರ್ನಾಡು ಪೊಲೀಸ್ ಉಪ ಠಾಣೆಯ ಸಹಾಯಕ ಉಪ ನಿರೀಕ್ಷಕ ಮೊಣ್ಣಪ್ಪ ಪಿ.ಬಿ ಮಾತನಾಡಿ ಜಿಲ್ಲೆಯಲ್ಲಿ ಗಾಂಜಾ ವ್ಯಸನಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಗಾಂಜಾ ವ್ಯಸನಿಗಳಿಂದ ಪೋಷಕರು ಅನುಭವಿಸುತ್ತಿರುವ ಕಷ್ಟವನ್ನು ವಿವರಿಸಿದ ಅವರು ಗಾಂಜಾ ಮಾರಾಟದ ವಿರುದ್ಧ ಪೊಲೀಸ್ ಇಲಾಖೆ ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿದೆ. ಬುಡಕಟ್ಟು ಜನರು ದುಶ್ಚಟಗಳಿಂದ ಮುಕ್ತರಾಗಿ ಉತ್ತಮ ಜೀವನ ಸಾಗಿಸಬೇಕು ಎಂದು ಕರೆ ನೀಡಿದರು. ಹೊದ್ದೂರು ಗ್ರಾ.ಪಂ ಸದಸ್ಯರುಗಳಾದ ಕೆ.ಮೊಣ್ಣಪ್ಪ, ಕುಸುಮಾವತಿ ಹಾಗೂ ಹಮೀದ್ ಅವರುಗಳು ಬುಡಕಟ್ಟು ಜನಾಂಗದ ಸಮಸ್ಯೆಗಳು ಮತ್ತು ಪ್ರಗತಿಯ ಕುರಿತು ಮಾತನಾಡಿದರು. *ಸನ್ಮಾನ* ಬುಡಕಟ್ಟು ಜನಾಂಗದ ಸಾಧಕರಾದ ಲಕ್ಷ್ಮಿ, ಜೆ.ಕೆ.ರಾಮು ಹಾಗೂ ವೈ.ಪಿ.ತಮ್ಮಯ್ಯ ಅವರುಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಚೊಟ್ಟೆಪಾರೆ ಹಾಡಿ ತಂಡದ ವತಿಯಿಂದ ನಡೆದ ಹಾಡು ಮತ್ತು ನೃತ್ಯ ಪ್ರದರ್ಶನ ಗಮನ ಸೆಳೆಯಿತು. ಬುಡಕಟ್ಟು ಜನಾಂಗದ ಹಾಡು ಹಾಡಿದ ಲಕ್ಷ್ಮಿ ಅವರು ನೆರೆದಿದ್ದವರ ಮೆಚ್ಚುಗೆಗೆ ಪಾತ್ರರಾದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಎ.ಎ.ಅಬ್ದುಲ್ಲ, ಸದಸ್ಯೆ ಲಕ್ಷ್ಮಿ, ಸ್ಕೌಟ್ ಮತ್ತು ಗೈಡ್ ಜಿಲ್ಲಾ ಕಾರ್ಯದರ್ಶಿ ವಸಂತಿ ಎಂ.ಎಂ, ಉಪಾಧ್ಯಕ್ಷರುಗಳಾದ ನೀಲಮ್ಮ, ಪಿ.ಎಂ.ರವಿ, ಅರುಣ್ ಕುಮಾರ್, ಖಜಾಂಚಿ ಶಾಂತಿ, ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಕಾರ್ಯದರ್ಶಿಗಳಾದ ನಳಿನಿ ಸುವರ್ಣ, ಸುಚಿತ, ಸೂರಜ್, ಗುಲ್ಶನ್, ವಾಟೆಕಾಡು ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯರಾದ ಕುಮಾರಸ್ವಾಮಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು. ಸ್ಕೌಟ್ ಅಂಡ್ ಗೈಡ್ಸ್ ಪ್ರಾರ್ಥಿಸಿ, ರಂಜಿತ್ ಮೌರ್ಯ ನಿರೂಪಿಸಿ, ಆರ್.ಪಿ.ಚಂದ್ರಶೇಖರ್ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಸಮಾತ್ರಾ ಉತಾರಾ ರ‍್ಯಾಲಿ : ಅಂತರರಾಷ್ಟ್ರೀಯ ರ‍್ಯಾಲಿ ಪ್ರವೇಶದಲ್ಲೇ ಅಬ್ಬಿನ್ ರೈ ಮಿಂಚು*
Next Article *ಅಬ್ಬಾ ! ಕೊಡಗಿನಲ್ಲಿ 12 ಕೆ.ಜಿ ಗೂ ಅಧಿಕ ಗಾಂಜಾ ವಶ : ಆರೋಪಿಗಳ ಬಂಧನ*

Related Posts

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

ನವದೆಹಲಿ/ಬೆಂಗಳೂರು NEWS DESK ಫೆ.11: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳು, ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಆರ್ಥಿಕ ಸುಧಾರಣೆಗಳನ್ನು…

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.