
ವಿರಾಜಪೇಟೆ ಆ.12 NEWS DESK : ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದ ಕಲ್ಲುಬಾಣೆಯಲ್ಲಿರುವ ರಹ್ಮ ಚಾರಿಟೇಬಲ್ ಟ್ರಸ್ಟ್ನ ನೂತನ ಅಧ್ಯಕ್ಷರಾಗಿ ಪಿ.ಸಂಶುದ್ದೀನ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕೆ.ಪಿ.ಫಾರೂಕ್, ಕಾರ್ಯದರ್ಶಿಗಳಾಗಿ ಎಂ.ಎಂ.ನೌಫಲ್, ಜಂಟಿ ಕಾರ್ಯದರ್ಶಿಯಾಗಿ ಕೆ.ಕೆ.ರಹಿಮ್, ಖಜಾಂಚಿಯಾಗಿ ಪಿ.ಆಲಿ ಮತ್ತು ನಿರ್ದೇಶಕರುಗಳಾಗಿ ಕೆ.ಪಿ.ರಫೀಕ್, ಇ.ಕೆ.ಫನ್ಸಿರ್, ಪಿ.ಬಿ.ಫೈಸಲ್, ಕೆ.ಐ.ಅಶ್ರಫ್ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ಪಿ.ಶಾಪಿ ಕಾರ್ಯ ನಿರ್ವಹಿಸುತ್ತಿದ್ದಾರೆ.









