
ಸಿದ್ದಾಪುರ ಆ.13 NEWS DESK : ಸಿದ್ದಾಪುರದ ಸರ್ಕಾರಿ ಮಲಯಾಳಂ ಶಾಲೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಚುಗಳನ್ನು ವಿತರಣೆ ಮಾಡಲಾಯಿತು. ನೆಲ್ಯಹುದಿಕೇರಿಯ ಸಮಾಜ ಸೇವಕ ಕೆ.ಎಂ.ಬಶೀರ್ ಅವರ ಸಹಕಾರದೊಂದಿಗೆ ಸಮಾಜ ಸೇವಾ ಸಂಘಟನೆಯ ಯುವಕರು ನಾಲ್ಕು ಬೆಂಚುಗಳನ್ನ ಶಿಕ್ಷಕರುಗಳ ಸಮ್ಮುಖದಲ್ಲಿ ವಿತರಣೆ ಮಾಡಿದರು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿರುವ ಯುವಕರ ಸೇವಾ ಮನೊ ಭಾವನೆಗೆ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾಜ ಸೇವಾ ಸಂಘಟನೆಯ ಪ್ರಮುಖರಾದ ಮಿಥುನ್, ಅರುಣ್, ಆಶಿಕ್, ಜಮಾಲ್, ಟೋನಿ, ಶಿವಶಂಕರ, ಜಾಗು, ಕುಶ, ದಿನೇಶ್, ಶಿವ, ಕಿರಣ್ ಸೇರಿದಂತೆ ಮತ್ತು ಇತರರು ಹಾಜರಿದ್ದರು.









