
ಮಡಿಕೇರಿ ಆ.14 NEWS DESK : ಸಮರ್ಥ ಕನ್ನಡಿಗರು ಸಂಸ್ಥೆಯ ವತಿಯಿಂದ ಉಚಿತವಾಗಿ ತ್ರಿವರ್ಣ ಧ್ವಜ ವಿತರಣೆ ಮಾಡಲಾಗುತ್ತಿದ್ದು, ಆಸಕ್ತರು ಸಂಪರ್ಕಿಸುವಂತೆ ಸಂಸ್ಥೆಯ ಪ್ರಮುಖರು ತಿಳಿಸಿದ್ದಾರೆ. ಹರ್ ಘರ್ ತಿರಂಗ ಎನ್ನುವ ಭಾರತೀಯ ಅಂಚೆ ಕಚೇರಿಯ ಪರಿಕಲ್ಪನೆಯಡಿಯಲ್ಲಿ ಸಮರ್ಥ ಕನ್ನಡಿಗರು ಸಂಸ್ಥೆಯ ಸಂಸ್ಥಾಪಕ ಲಿಂಗೇಶ್ ಹುಣಸೂರು ಅವರು ಅಂಚೆ ಕಛೇರಿಯಿಂದ 100 ( ನೂರು )ತ್ರಿವರ್ಣ ಧ್ವಜಗಳನ್ನು ಖರೀದಿಸಿ ಅದನ್ನು ಉಚಿತವಾಗಿ ನೀಡುತ್ತಿದ್ದು, ಆಸಕ್ತರು ಸಮರ್ಥ ಕನ್ನಡಿಗರು ಕೊಡಗು ಜಿಲ್ಲಾ ಘಟಕದ ಪ್ರಧಾನ ಸಂಚಾಲಕರಾದ ಜಯಲಕ್ಷ್ಮಿ ಕೆ ಇವರಿಂದ ಪಡೆದುಕೊಳ್ಳಬೇಕಾಗಿ ಸಮರ್ಥ ಕನ್ನಡಿಗರು ಸಂಸ್ಥೆ ವಿನಂತಿಸಿಕೊಂಡಿದೆ.








