
ಮಡಿಕೇರಿ ಆ.15 NEWS DESK : ಕಾಟಕೇರಿಯ ಕೂರನಬಾಣೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ನಳಿನಿ ಧ್ವಜಾರೋಹಣ ನೆರವೇರಿ ದಿನದ ಮಹತ್ವ ತಿಳಿಸಿದರು. ಮದೆ ಗ್ರಾ.ಪಂ ಮಾಜಿ ಉಪಾಧ್ಯಕ್ಷೆ ಪಿ.ಎ.ಚಂದ್ರಾವತಿ, ಶ್ರೀದೇವಿ, ಶ್ರೀ ಲಕ್ಷ್ಮಿ ಸ್ವಸಾಹ ಸಂಘದ ಪದಾಧಿಕಾರಿಗಳು, ಸ್ವಯಂ ಸೇವಾ ಸಂಘ ಮತ್ತು ಗ್ರಾಮಸ್ಥರು, ಪುಟಾಣಿ ಮಕ್ಕಳು ಹಾಜರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿ ಹಂಚಲಾಯಿತು.










