
ಮಡಿಕೇರಿ ಆ.16 NEWS DESK : ತಾಳತ್ತಮನೆಯ ನೇತಾಜಿ ಯುವಕ ಹಾಗೂ ಯುವತಿ ಮಂಡಳಿ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಾಜಿ ಸೈನಿಕರಾದ ದೊಡ್ಡೇರ ಎಂ.ತಿಮ್ಮಯ್ಯ ಧ್ವಜಾರೋಹಣ ನೆರವೇರಿಸಿದರು. ಸಮಾರಂಭದಲ್ಲಿ ನೇತಾಜಿವಕ ಮಂಡಳದ ಅಧ್ಯಕ್ಷರಾದ ಕೊಂಡಿರ ಪಿ.ಕಾರ್ಯಪ್ಪ, ಯುವಕ ಮಂಡಲದ ಸಲಹಾ ಸಮಿತಿ ಮುಖ್ಯಸ್ಥರಾದ ಚೆಟ್ಟೊಳ್ಳಿರ ಗಿರೀಶ್ ಅಪ್ಪಯ್ಯ , ಯುವತಿಮಂಡಳಿ ಅಧ್ಯಕ್ಷರಾದ ಸಿಂಧು ಸುದೇವ, ಯುವಕ ಮಂಡಲದ ಉಪಾಧ್ಯಕ್ಷರಾದ ಸುರೇಶ್ ಕುಮಾರ್, ಮಾಜಿ ಸೈನಿಕರು, ಯುವಕ ಹಾಗೂ ಯವತಿ ಮಂಡಳಿಯ ಸದಸ್ಯರು, ನಾಗರಿಕರು ಹಾಜರಿದ್ದರು.








