
ಮಡಿಕೇರಿ ಆ.16 NEWS DESK : ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ಯುವಮೋರ್ಚಾದಿಂದ ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ಅವರು ವಿದ್ಯಾರ್ಥಿಗಳಿಗಾಗಿ ಕೊಡುಗೆಯಾಗಿ ನೀಡಿದ ಸ್ವೆಟರ್ ಅನ್ನು ಮದೆ ಗ್ರಾ.ಪಂ ವ್ಯಾಪ್ತಿಯ ತಾಳತ್ತಮನೆ, ಕಾಟಕೇರಿ, ಮೊಣ್ಣಂಗೇರಿ, ಜೋಡುಪಾಲ, ದೇವರಕೊಲ್ಲಿ ಗ್ರಾಮಗಳ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಹಾಗೂ ಅಂಗನವಾಡಿ ಮಕ್ಕಳಿಗೆ ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ಯುವಮೋರ್ಚಾ ಅಧ್ಯಕ್ಷರಾದ ಚೇತನ್ ಬಂಗೇರ ವಿತರಿಸಿದರು. ಈ ಸಂದರ್ಭ ಯುವ ಮೋರ್ಚಾದ ಸದಸ್ಯರಾದ ದೀಕ್ಷಿತ್ ಸುವರ್ಣ, ಗ್ರಾಮಗಳ ಪಕ್ಷದ ಪ್ರಮುಖರು, ಪಂಚಾಯತ್ ಸದಸ್ಯರು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಪೋಷಕರಗಳು ಉಪಸ್ಥಿತರಿದ್ದರು.








