
ಮಡಿಕೇರಿ ಆ.16 NEWS DESK : ಕೊಡಗು ಪತ್ರಕರ್ತರ ಸಂಘ ಮತ್ತು ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಆ.19 ರಂದು ಮಂಗಳವಾರ ಕುಶಾಲನಗರದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಆಯೋಜಿಸಲಾಗಿದೆ. ಕುಶಾಲನಗರದ ಗೌಡ ಸಮಾಜದ ಸಭಾಂಗಣದಲ್ಲಿ ಮಂಗಳವಾರ ಬೆಳಗ್ಗೆ 10.30 ಗಂಟೆಗೆ ಆಯೋಜಿತ ವಿಶ್ವಛಾಯಾಗ್ರಹಣ ದಿನಾಚರಣೆಯನ್ನು ಕೊಡಗು ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆವರ್ತಿ ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅಧ್ಯಕ್ಷತೆಯಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ.,ಕೊಡಗು ಜಿಲ್ಲಾ ಬಿಜೆಪಿಯ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ಉದ್ಯಮಿ ಹೆನ್ರಿಕ್ ಮಾರ್ಟಿನ್, ಬಿಜೆಪಿ ಯುವ ಮುಖಂಡ ಚಂದ್ರಶೇಖರ್ ಹೇರೂರು, ಗುಡ್ಡೆಹೊಸೂರು ಪಂಚಾಯತ್ ಯೂತ್ ಮೂವ್ ಮೆಂಟ್ ಕಾರ್ಯದರ್ಶಿ ಎಂ.ಎಸ್. ರಂಜಿತ್, ಕುಶಾಲನಗರ ಗೌಡ ಸಮಾಜ ಅಧ್ಯಕ್ಷರಾದ ಸಿ.ಎಂ.ಗಣಿಪ್ರಸಾದ್, ಗುಡ್ಡೆಹೊಸೂರು ಗ್ರಾಪಂ ಸದಸ್ಯ ನಿತ್ಯಾನಂದ ಕುಡೆಕಲ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಹಿರಿಯ ಪತ್ರಕರ್ತ ಬಿ.ಜಿ. ಅನಂತಶಯನ, ಭಾರತೀಯ ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷ ನಡಿಕೇರಿಯಂಡ ಬೋಸ್ ಮಂದಣ್ಣ, ಕಾಫಿ ಬೆಳೆಗಾರರಾದ ಟಿ.ಕೆ.ಸಾಯಿಕುಮಾರ್, ಕೊರವಂಡ ವಸಂತಿ ಪೊನ್ನಪ್ಪ, ಜಿ.ಮುಕುಲ್ ಮಹೀಂದ್ರ, ಪುಲಿಯಂಡ ರಾಮ್ ದೇವಯ್ಯ ಪಾಲ್ಗೊಳ್ಳಲಿದ್ದಾರೆ. ವಿಶ್ವಛಾಯಾಗ್ರಹಣ ದಿನಾಚರಣೆ ಅಂಗವಾಗಿ ಪತ್ರಕರ್ತರ ಸಂಘದಿಂದ ಹಿರಿಯ ಛಾಯಾಗ್ರಾಹಕರಾದ ಸಂದೀಪ್ ಮತ್ತು ಮಹಮ್ಮದ್ ಹನೀಫ್ ಅವರನ್ನು ಸನ್ಮಾನಿಸಲಾಗುತ್ತದೆ. ಅಂತೆಯೇ ಪತ್ರಕತ9ರ ಸಂಘದಿಂದ ಆಯೋಜಿತ ಛಾಯಾಚಿತ್ರ, ವಿಡಿಯೋ, ರೀಲ್ಸ್ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಗುತ್ತದೆ. ಪುಲಿಯಂಡ ರಾಮ್ ದೇವಯ್ಯ ಅವರು ಜ್ಞಾನಗಂಗಾ ಶಾಲೆಯ ಹೆಸರಿನಲ್ಲಿ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಲ್ಲಿ ಹಿರಿಯ ವರದಿಗಾರರಿಗೆ ಸ್ಥಾಪಿಸಿರುವ ದತ್ತಿ ಪ್ರಶಸ್ತಿಗೆ ಸುಂಟಿಕೊಪ್ಪದ ಹಿರಿಯ ವರದಿಗಾರ ಕೆ. ಶಿವಣ್ಣ ಆಯ್ಕೆಯಾಗಿದ್ದು, ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗುತ್ತದೆ. ಸಂಘದ ನಿರ್ದೇಶಕ ನವೀನ್ ಚಿನ್ನಪ್ಪ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುತ್ತದೆ ಎಂದು ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಬಿ. ವಿನ್ಸೆಂಟ್ ಮಾಹಿತಿ ನೀಡಿದ್ದಾರೆ.








