
ಮಡಿಕೇರಿ ಆ.19 NEWS DESK : ಕುಶಾಲನಗರದ ಜ್ಞಾನಗಂಗಾ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಹೆಚ್.ಪ್ರೇಕ್ಷಾಳಿಗೆ ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭೆ ಪ್ರಶಸ್ತಿ ಲಭಿಸಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ನೀಡುವ ನಾವೀನ್ಯತೆ ಕ್ಷೇತ್ರದ ಪ್ರಶಸ್ತಿಗೆ ಪ್ರೇಕ್ಷಾ ಭಾಜನಳಾಗಿದ್ದು, ರೂ.10 ಸಾವಿರ ನಗದು ಹಾಗೂ ಪಾರಿತೋಷಕ ಪಡೆದಿದ್ದಾಳೆ. ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ಹೆಸರು ದಾಖಲಿಸಿದ, ತಾಲೂಕು ಮಟ್ಟದ ಪ್ರಬಂಧ, ಅಬಾಕಸ್ ಇಂಟರ್ ನ್ಯಾಷನಲ್ ಸ್ಪರ್ಧೆಯಲ್ಲಿ ಪ್ರಶಸ್ತಿ ಗಳಿಸಿದ ಹೆಗ್ಗಳಿಕೆಯ ಪ್ರೇಕ್ಷಾ, ಸೋಮವಾರಪೇಟೆ ಸಮೀಪದ ಅಬ್ಬೂರುಕಟ್ಟೆ ಗ್ರಾಮದ ಗುತ್ತಿಗೆದಾರ ಟಿ.ಕೆ.ಹರೀಶ್ ಹಾಗೂ ವಿ.ಎಸ್.ಸಿಂಧುಜ ದಂಪತಿಯ ಪುತ್ರಿ.









