
ಸುಂಟಿಕೊಪ್ಪ,ಆ.14 NEWS DESK : ಮಾದಾಪುರ ರಸ್ತೆಯ ಶ್ರೀ ವೃಕ್ಷೋದ್ಭವ ಶಕ್ತಿ ಗಣಪತಿ ದೇವಾಲಯದಲ್ಲಿ ಆ.26 ರಂದು ಗೌರಿ ಪ್ರತಿಷ್ಠಾಪನೆ ನಡೆಯಲಿದೆ. ಪೂರ್ವಾಹ್ನ 9.45 ರಿಂದ 10.40 ರವರೆಗೆ ಸಲ್ಲುವ ತುಲ ಲಗ್ನದಲ್ಲಿ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪನೆ ಪೂಜಾ ನಡೆಯಲಿದೆ. ಆ.27 ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಶಕ್ತಿ ಗಣಪತಿಗೆ ವಿಶೇಷ ಪೂಜೆ ಹಾಗೂ ಮಹಾ ಮಂಗಳಾರತಿ ನಡೆಯಲಿದೆ. ಅಂದು ಸಂಜೆ 5 ಗಂಟೆಗೆ ವಿವಿಧ ಪೂಜಾ ವಿಧಿವಿಧಾನಗಳ ನಂತರ ಹರದೂರು ಹೊಳೆಯಲ್ಲಿ ಗೌರಿಯನ್ನು ವಿಸರ್ಜಿಸಲಾಗುವುದೆಂದು ಶ್ರೀ ವೃಕ್ಷೋದ್ಭವ ಶಕ್ತಿ ಗಣಪತಿ ದೇವಸ್ಥಾನದ ಟ್ರಸ್ಟ್ ಕಾರ್ಯದರ್ಶಿ ಎ.ಲೋಕೇಶ್ಕುಮಾರ್ ತಿಳಿಸಿದ್ದಾರೆ. ಕೊಡಗರಹಳ್ಳಿಯ ಶ್ರೀ ವಿಘ್ನೇಶ್ವರ ಸೇವಾ ಸಮಿತಿ ವತಿಯಿಂದ 7ನೇ ವರ್ಷದ ಉತ್ಸವ ಗೌರಿ ಗಣೇಶೋತ್ಸವದ ಮೂರ್ತಿಯನ್ನು ಪ್ರತಿಷ್ಠಾಪಿಸಿ 3 ದಿನಗಳ ಕಾಲ ವಿಶೇಷಪೂಜಾ ಕೈಂಕರ್ಯಗಳು ನಡೆಯಲಿದೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಪ್ರತಿ ವರ್ಷವೂ ಅಯೋಜಿಸಿಕೊಂಡು ಬರಲಾಗುತ್ತಿರುವ ಕೊಡಗರಹಳ್ಳಿಯ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎನ್.ಡಿ.ದೇವಯ್ಯ ಅವರು ದಾನವಾಗಿ ನೀಡಿರುವ ಜಾಗದಲ್ಲಿ 3 ದಿನಗಳ ಕಾಲ ಗೌರಿ ಗಣೇಶೋತ್ಸವ ಆ.27 ರಂದು ಉತ್ಸವ ಮೂರ್ತಿಯನ್ನು ಪ್ರತಿಸ್ಠಾಪಿಸುವ ಮೂಲಕ ಸಂಜೆ 6 ಗಂಟೆಗೆ ಶ್ರೀ ಬೈತೂರಪ್ಪ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ, ಆ.28 ರಂದು 6 ಗಂಟೆಗೆ ಮಕ್ಕಳು ಹಾಗೂ ಸಾರ್ವಜನಿಕರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಅನ್ನ ಸಂತರ್ಪಣೆ, ಆ.29 ರಂದು ಪೂಜೆಯ ನಂತರ ಮಹಾ ಮಂಗಳಾರತಿ, ಅನ್ನ ಸಂತರ್ಪಣೆ ನಡೆಯಲಿದ್ದು, ಸಂಜೆ 3 ಗಂಟೆಗೆ ಶ್ರೀ ಗೌರಿ ಗಣೆಶ ಉತ್ಸವ ಮೂರ್ತಿಯನ್ನು ಭವ್ಯ ಮಂmಪದಲ್ಲಿರಿಸಿ ಮೆರವಣಿಗೆ ನಂತರ ಕೊಡಗರಹಳ್ಳಿ ಸಮೀಪದ ಕೆರೆಯಲ್ಲಿ ವಿಸರ್ಜಿಸಲಾಗುವುದೆಂದು ಶ್ರೀ ವಿಘ್ನೇಶ್ವರ ಸೇವಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಪತ್ರಿಕಾ ಪ್ರಟಣೆಯಲ್ಲಿ ತಿಳಿಸಿದ್ದಾರೆ. ಕೆದಕಲ್ ಗ್ರಾಮ ಪಂಚಾಯಿತಿಯ ಹೊರೂರು ಮಠ ಗೌರಿ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಹೊರೂರು ಮಠದಲ್ಲಿ ಆ.27 ರಂದು ಬೆಳಿಗ್ಗೆ 6 ಗಂಟೆಗೆ ಗಣಪತಿ ಹೋಮದ ನಂತರ ಗೌರಿ ಗಣೇಶ ಉತ್ಸವ ಮೂರ್ತಿಗಳನ್ನು ಪ್ರತಿಸ್ಠಾಪಿಸಿ ಆ.30ರ ವರೆಗೆ ಮಾಹಾ ಪೂಜೆ ಮಂಗಳಾರತಿ ಪ್ರಸಾದ ವಿತರಣೆ ಕಾರ್ಯವು ನಡೆಯಲಿದೆ. ಆ.31 ರಂದು ವಿಶೇಷ ಪೂಜೆ, ಮಹಾಪೂಜೆ, ಮಂಗಳಾರತಿ, ಅನ್ನದಾನ, ನಂತರ ಸಂಜೆ ಮೂರು ಗಂಟೆಯ ನಂತರ ವಿದ್ಯುತ್ ಅಲಂಕೃತ ಭವ್ಯ ಮಂಟಪದಲ್ಲಿ ಶ್ರೀ ಗೌರಿ ಗಣೇಶ ಉತ್ಸವ ಮೂರ್ತಿಗಳನ್ನು ಮೆರವಣಿಗೆ ಮೂಲಕ ಹೊರೂರು ಮಠದ ಕೆರೆಯಲ್ಲಿ ವಿಸರ್ಜಿಸಲಾಗುವುದೆಂದು ಗೌರಿ ಗಣೇಶೋತ್ಸವ ಸೇವಾ ಸಮಿತಿಯ ದೇವಿಪ್ರಸಾದ್ ಕಾಯರ್ಮಾರ್, ಬಿ.ಕೆ.ನಾಗಪ್ಪ, ಕೃಷ್ಣಪ್ಪ, ಭರತ್ ಸೇರಿದಂತೆ ಆದ್ಯಕ್ಷರು ಪಧಾದಿಕಾರಿಗಳು ತಿಳಿಸಿದ್ದಾರೆ.








