
ಮಡಿಕೇರಿ ಆ.25 NEWS DESK : ಮಡಿಕೇರಿ ನಗರದ ಚೈನ್ ಗೇಟ್ ನ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಳಿಯ 18ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಹಿರಿಯರಿಗೆ ಹಾಗೂ ಕಿರಿಯರಿಗೆ ಕ್ಯಾರಮ್ ಬೋರ್ಡ್ ಹಾಗೂ ಚೆಸ್ ಪಂದ್ಯಾವಳಿ ನಡೆಯಿತು. ಡಾ.ಕೆ.ಬಿ.ಸೂರ್ಯ ಕುಮಾರ್ ಅವರು ಪಂದ್ಯಾವಳಿಯನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಈ ಸಂದರ್ಭ ಮಡಿಕೇರಿ ಮೂಡ ಸದಸ್ಯ ಆರ್.ಪಿ.ಚಂದ್ರಶೇಖರ್, ಸಂಘದ ಅಧ್ಯಕ್ಷರಾದ ರಾಹುಲ್, ರಾಘವೇಂದ್ರ, ಮಧುಗೌಡ, ಸಚಿನ್, ಸುನಿಲ್, ಲೋಕೇಶ್ ಎಸ್, ಆರ್.ಸಿ.ಗೌರವ್, ಬಿ.ಬಿ.ದರ್ಶನ್ , ಪ್ರಶಾಂತ್, ಪುನೀತ್ ಕುಮಾರ್, ಯತೀಶ್ ರಂಜಿತ್ ಹಾಗೂ ರಾಜೇಶ್ ಮತ್ತು ಸಂಘದ ಸದಸ್ಯರು ಹಾಜರಿದ್ದರು.









