Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ದುಷ್ಟ ಶಕ್ತಿಗಳಿಂದ ಮುಕ್ತಿ ಪ್ರಸಾದಿಸುವ ಗಾಲಿ ಆಂಜನೇಯ ಸ್ವಾಮಿ*
ಮಹಾದೇಗುಲ

*ದುಷ್ಟ ಶಕ್ತಿಗಳಿಂದ ಮುಕ್ತಿ ಪ್ರಸಾದಿಸುವ ಗಾಲಿ ಆಂಜನೇಯ ಸ್ವಾಮಿ*

August 28, 20252 Mins Read
Share
Facebook Twitter LinkedIn Pinterest WhatsApp Email

ಗಾಳಿ ಆಂಜನೇಯ ದೇವಸ್ಥಾನ ಬೆಂಗಳೂರು ನಗರದ ಅತಿ ಶ್ರೇಷ್ಠ ಹಾಗೂ ಪವಿತ್ರವಾದ ಸ್ಥಳ. ಇದು ಬೆಂಗಳೂರಿನ ಹಳೆಯ ದೇವಸ್ಥಾನಗಳಲ್ಲಿ ಒಂದು. ಈ ದೇವಾಲಯವನ್ನು ಮೊದಲು ದಿಗಂಬರ ದೇವಸ್ಥಾನ ಎಂದು ಕರೆಯಲಾಗುತ್ತಿತ್ತು. ಗಾಳಿ ಆಂಜನೇಯ ದೇವಸ್ಥಾನ ಬೆಂಗಳೂರಿನ ಮೈಸೂರು ರಸ್ತೆಯ ಬ್ಯಾಟರಾಯನಪುರದ ಬಳಿ ಇದೆ. ಈ ದೇವಾಲಯದ ದೇವರು ತುಂಬಾ ಶಕ್ತಿಶಾಲಿಯಾಗಿರುವುದರಿಂದ ತಮ್ಮ ಎಲ್ಲಾ ಕೋರಿಕೆಗಳು ಈಡೇರುತ್ತವೆ ಎಂದು ಅನೇಕ ಭಕ್ತರು ನಂಬುತ್ತಾರೆ. ಇಡೀ ವರ್ಷ ದೇವಾಲಯದಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಗುತ್ತದೆ ಹಾಗೂ ಧಾರ್ಮಿಕ ಹಬ್ಬಗಳನ್ನು ಆಚರಿಸಲಾಗುತ್ತದೆ. ಗಾಳಿ ಆಂಜನೇಯ ದೇವರ ಆಶೀರ್ವಾದ ಪಡೆಯಲು ಮತ್ತು ತಮ್ಮ ಜೀವನದ ತೊಂದರೆಗಳನ್ನು ನಿವಾರಿಸಿಕೊಳ್ಳಲು ಜನರು ಇಲ್ಲಿಗೆ ಭೇಟಿ ನೀಡುತ್ತಾರೆ. ಆಂಜನೇಯನ ಆಶೀರ್ವಾದ ಪಡೆಯಲು ಭಕ್ತರು ಬೇರೆ ಬೇರೆ ಊರುಗಳು ಹಾಗೂ ರಾಷ್ಟ್ರಗಳಿಂದೆಲ್ಲಾ ಬರುತ್ತಾರೆ.

ಇತಿಹಾಸ ::  ಈ ದೇವಾಲಯವನ್ನು 1425ರಲ್ಲಿ ನಿರ್ಮಿಸಲಾಗಿದ್ದು ಇದು ಸುಮಾರು 600 ವರ್ಷಗಳ ಇತಿಹಾಸವನ್ನು ಹೊಂದಿದೆ. ವೃಷಭಾವತಿ ಮತ್ತು ಪಶ್ಚಿಮಾವತಿ ನದಿಗಳ ಸಂಗಮವಾದದ್ದರಿಂದ ವ್ಯಾಸರಾಜನು ಇಲ್ಲಿ ಪ್ರತಿಮೆಯನ್ನು ಸ್ಥಾಪಿಸಿದನೆಂದು ಪುರಾಣ ಹೇಳುತ್ತದೆ. ಇಲ್ಲಿರುವ ಆಂಜನೇಯನ ವಿಗ್ರಹವನ್ನು ಹಿಂದೂ ಸಂತ ಶ್ರೀ ವ್ಯಾಸರಾಜ ಸ್ಥಾಪಿಸಿದ್ದಾರೆ. ಅವರು 732 ಹನುಮಂತನ ವಿಗ್ರಹಗಳನ್ನು ಸ್ಥಾಪಿಸಿದ್ದಾರೆ ಎಂದು ಹೇಳಲಾಗುತ್ತದೆ, ಇವುಗಳಲ್ಲಿ ಗಾಳಿ ಆಂಜನೇಯ ದೇವಸ್ಥಾನ ಕೂದ ಒಂದು. ಬೆಂಗಳೂರು ನಗರ ಉದಿಸುವ ಮುನ್ನ ಸ್ವಾಮಿಯ ಮೂರ್ತಿ ಬಯಲಿನಲ್ಲಿ ಇದ್ದ ಕಾರಣ ಗಾಳಿ ಆಂಜನೇಯ ಎಂಬ ಹೆಸರು ಬಂದಿದೆ. ಗಾಳಿ ಎಂದರೆ ದುಷ್ಟಶಕ್ತಿ ಎಂದರ್ಥ. ದುಷ್ಟಶಕ್ತಿಗಳ ಅಧಿಪತಿಯಾದ ರಾವಣನ ಪುತ್ರ ಅಕ್ಷಾಸುರನನ್ನು ಮೆಟ್ಟಿ ನಿಂತಿದ್ದರಿಂದ ಈ ಹೆಸರು ಬಂದಿದೆ.

ದೇವಾಲಯದ ವಿವರ ::  ದೇವಾಲಯದ ಪೂಜಾ ಮೂರ್ತಿಯ ಶಿರದ ಎರಡೂ ಬದಿಗಳಲ್ಲಿ ಶಂಖ ಚಕ್ರಗಳಿವೆ. ಸಾಮಾನ್ಯವಾಗಿ ಬಹುತೇಕ ಆಂಜನೇಯನ ವಿಗ್ರಹಗಳ ಕೈಯಲ್ಲಿ ಗದೆ ಇರುತ್ತದೆ ಆದರೆ ಇಲ್ಲಿ ಪದ್ಮಕಮಲ ಇರುವುದು ಮತ್ತೊಂದು ವಿಶೇಷತೆಯಾಗಿದೆ. ಆಂಜನೇಯನ ಬಹುತೇಕ ದೇಗುಲಗಳಲ್ಲಿ ಮೂರ್ತಿಯ ಮುಖಕ್ಕೆ ಸಿಂಧೂರ ಲೇಪಿಸಲಾಗುತ್ತದೆ ಆದರೆ ಇಲ್ಲಿ ಪ್ರತಿ ಗುರುವಾರ ಸ್ವಾಮಿಯ ಇಡೀ ದೇಹಕ್ಕೆ ಸಿಂಧೂರವನ್ನು ಲೇಪಿಸಿ ಪೂಜೆ ಮಾಡಲಾಗುತ್ತದೆ. ಪ್ರತಿ ಮಂಗಳವಾರ ಮತ್ತು ಶನಿವಾರ ವಿಶೇಷ ಪೂಜೆ ನಡೆಯುತ್ತದೆ. ಗಾಳಿ ಆಂಜನೇಯ ದೇವಸ್ಥಾನ ಎತ್ತರದ ಗೋಪುರವನ್ನು ಹೊಂದಿದ್ದು ಇಲ್ಲಿ ದೇವರು ಪಶ್ಚಿಮಕ್ಕೆ ಮುಖಮಾಡಿ ಶ್ರೀರಾಮನ ಪರಿವಾರವನ್ನು ಕಾಣುತ್ತಿದ್ದಾನೆ. ಇಲ್ಲಿ ಪವಿತ್ರ ದಾರವನ್ನು ಭಕ್ತರಿಗೆ ಪ್ರಸಾದ ಎಂದು ನೀಡಲಾಗುತ್ತದೆ. ಇಲ್ಲಿ ಭಗವಂತನ ಬಾಲದ ಕೊನೆಯಲ್ಲಿ ಒಂದು ಗಂಟೆಯನ್ನು ಕಟ್ಟಿದ್ದು ಇದು ಶ್ರೀ ವ್ಯಾಸರಾಜರ ಶಾಂತಿ ಶೈಲಿಯನ್ನು ಸೂಚಿಸುತ್ತದೆ. ಆಂಜನೇಯನ ವಿಗ್ರಹದ ಎಡಗೈ ಸೊಂಟದ ಮೇಲೆ ವಿಶ್ರಾಂತಿ ಪಡೆಯುತ್ತಾ ಹೂವನ್ನು ಹಿಡಿದಿದೆ ಹಾಗೂ ಬಲಗೈಯಲ್ಲಿ ಅಭಯ ಮುದ್ರೆಯನ್ನು ಹಿಡಿದು ತನ್ನ ಎಲ್ಲಾ ಭಕ್ತರಿಗೆ ಆಶೀರ್ವಾದ ನೀಡುತ್ತಿದೆ.

ದೇವಾಲಯದ ಮಹತ್ವ ;:  ಗಾಳಿ ಆಂಜನೇಯ ದೇವಾಲಯದ ಅನನ್ಯತೆಯೆಂದರೆ ರಥ ಯಾತ್ರೆ. ಇದು ಕಳೆದ 120 ವರ್ಷಗಳಿಂದ ನಡೆಯುತ್ತಿದೆ. ಈ ಸಮಯದಲ್ಲಿ ಬಹಳಷ್ಟು ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಇಲ್ಲಿ 135 ವರ್ಷಗಳಿಂದ ಶ್ರೀ ರಾಮ ನವಮಿ ಸಂದರ್ಭದಲ್ಲಿ 9 ದಿನಗಳ ಕಾಲ ಶ್ರೀ ಪಾಂಚರಾತ್ರಾಗಮ ಬ್ರಹ್ಮರಥೋತ್ಸವ ವಿಜ್ರಂಭಣೆಯಿಂದ ನಡೆಯುತ್ತದೆ. ಹನುಮ ಜಯಂತಿ ಹಾಗೂ ಭೀಮನ ಅಮಾವಾಸ್ಯೆಯಂದು ವಿಶೇಷ ಪೂಜೆ ನಡೆಯುತ್ತದೆ. ದೇವಸ್ಥಾನದಲ್ಲಿ ಪ್ರತಿ ಶನಿವಾರ ವಿಶೇಷ ಅಭಿಷೇಕ, ಪೂಜೆ, ಸಂಗೀತ, ಭಜನೆ, ಪ್ರಸಾದ ವಿಸ್ತರಣೆ ಮುಂತಾದವು ಇರುತ್ತದೆ. ಅಗಸ್ಟ್ ತಿಂಗಳಲ್ಲಿ ಈ ದೇವಸ್ಥಾನದ ದೇವರಿಗೆ ಬೆಣ್ಣೆ ಅಲಂಕಾರವನ್ನು ನಡೆಸಲಾಗುತ್ತದೆ. ಈ ಸಮಯದಲ್ಲಿ ದೈತ್ಯಾಕಾರದ ವಿಗ್ರಹವನ್ನು ಬೆಣ್ಣೆಯಿಂದ ಅಲಂಕರಿಸಲಾಗುತ್ತದೆ. ಬೆಣ್ಣೆಯನ್ನು ಸಾವಿರಾರು ಭಕ್ತರು ದಾನ ಮಾಡುತ್ತಾರೆ. ಹನುಮಾನ್ ಜಯಂತಿ ಸಮಯದಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಕೋತಿಗಳಿಗೆ ಹಣ್ಣುಗಳನ್ನು ನೀಡಲಾಗುತ್ತದೆ. ಗಾಳಿ ಆಂಜನೇಯ ದೇವಸ್ಥಾನದಲ್ಲಿ ಶ್ರೀ ವೇಣುಗೋಪಾಲಸ್ವಾಮಿ, ಶ್ರೀರಾಮ, ಗಣಪತಿ ಮತ್ತು ನವಗ್ರಹ ದೇವಾಲಯಗಳಿವೆ. ಈ ದೇವಾಲಯದಲ್ಲಿ ಸಾಕಷ್ಟು ರಾಜಕಾರಣಿ ಭಕ್ತರಿದ್ದಾರೆ. ಭಕ್ತರು ಅವರ ಕೆಲಸದ ಕ್ಷೇತ್ರಗಳಲ್ಲಿ ತಮ್ಮ ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ ಮತ್ತು ಮಕ್ಕಳಿಗೆ ಕಾಯಿಲೆಗಳನ್ನು ಗುಣಪಡಿಸಲು ಇಲ್ಲಿ ಭೇಟಿನೀಡುತ್ತಾರೆ.

 

 

Share. Facebook Twitter Pinterest LinkedIn Tumblr Email WhatsApp
Previous Article*ರುಚಿಕರವಾದ ಗಾರ್ಲಿಕ್ ಮಶ್ರೂಮ್ ಮಾಡುವ ವಿಧಾನ*
Next Article *ರೋಷನ್ ಜೊತೆ ಸಪ್ತಪದಿ ತುಳಿದ ನಿರೂಪಕಿ ಅನುಶ್ರೀ*

Related Posts

*ಐತಿಹಾಸಿಕ ಕುನ್ನತ್ತೂರು ಪಾಡಿ ಶ್ರೀ ಮುತ್ತಪ್ಪನ್ ಕ್ಷೇತ್ರ*

December 22, 2025

*ಪರಮ ಪವಿತ್ರ ಕ್ಷೇತ್ರ ಬಾರ್ದಿಲ ಶ್ರೀ ಸಾಂಬಸದಾಶಿವ ದೇವಸ್ಥಾನ*

November 29, 2025

*ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ದೀಪಾವಳಿ ‘ದೀಪೋತ್ಸವ’ : ಸಹಸ್ರ ಸಹಸ್ರ ದೀಪಗಳನ್ನು ಹಚ್ಚಿ ಪುನೀತರಾದ ಭಕ್ತರು*

October 22, 2025

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.