ಮಡಿಕೇರಿ ಆ.30 NEWS DESK : ಕೊಂಡಗೇರಿಯಲ್ಲಿ ನಡೆದ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಖೋ ಖೋ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ತಂಡದಲ್ಲಿ ಪುಚ್ಚಿಮಂಡ ಯು.ತನಿಶಾ, ಕನ್ನಂಡ ಕೃತಿಕಾ ಅಕ್ಕಮ್ಮ, ಅಮ್ಮಂಡ ಸ್ಪೂರ್ತಿ ದೇಚಮ್ಮ, ಬೊವ್ವರಿಯಂಡ ಹನ್ಸಿಕ ಪೊನ್ನಪ್ಪ, ಆಯಿಷಾ ಶಿಝ, ಕುಲ್ಲಚಂಡ ಭೂಮಿಕಾ ಭೋಜಮ್ಮ, ಕನ್ನಂಡ ಶತಕ ಕಾವೇರಮ್ಮ, ಫಾತಿಮಾತ್ ಫಿದಾ, ಪಟ್ಟಡ ಬಿ.ದೇಚಮ್ಮ, ಕಾಳಚಂಡ ಎಂ. ದೇಚಮ್ಮ ಸ್ಪರ್ಧಿಸಿದ್ದರು. ಈ ತಂಡಕ್ಕೆ ಶಾಲೆಯ ದೈಹಿಕ ಶಿಕ್ಷಕರುಗಳಾದ ಮೋನಿಕಾ ಬಿ.ಎಸ್ ಹಾಗೂ ಲಾವಣ್ಯ ಮಾರ್ಗದರ್ಶನ ನೀಡಿದ್ದಾರೆ. ತಂಡದ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಿಕಿ ಹಾಗೂ ಬೋಧಕ ಬೋಧಕೇತರ ವೃಂದದವರು, ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.











