ಸುಂಟಿಕೊಪ್ಪ ಸೆ.4 NEWS DESK : ಜನಸಾಮಾನ್ಯರು ಕೇಂದ್ರ ಸರಕಾರದ ಜನ ಸುರಕ್ಷಾ ಯೋಜನೆಗಳ ಗರಿಷ್ಠ ಪ್ರಯೋಜನಗಳನ್ನು ಪಡೆದುಕೊಳ್ಳುವಂತೆ ಸುಂಟಿಕೊಪ್ಪ ಕೆನಾರ ಬ್ಯಾಂಕಿನ ವ್ಯವಸ್ಥಾಪಕರಾದ ಅನಿಕೆತ್ ಕರೆ ನೀಡಿದರು. ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಸಹಯೋಗದೊಂದಿಗೆ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಗ್ರಾಮದಲ್ಲಿ, ಕೇಂದ್ರ ಸರಕಾರದ ಆದೇಶದಂತೆ ಆಯಾ ಗ್ರಾಮದ ಬ್ಶಾಂಕ್ ಶಾಖೆ ಮುಖಾಂತರ ಪ್ರತಿ ವರ್ಷವೂ ನಡೆಸುವ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮವನ್ನು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು ವಾರ್ಷಿಕ 20ರೂ ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 2 ಲಕ್ಷ ರೂಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ಹಾಗೂ ವಾರ್ಷಿಕವಾಗಿ 436 ರೂಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 2 ಲಕ್ಷ ರೂಗಳ ವಿಮಾಮೊತ್ತ ಸಿಗುವುದಾಗಿ ತಿಳಿಸಿದರು .ಎರಡನ್ನೂ ಮಾಡಿಸಿಕೊಂಡಲ್ಲಿ 4 ಲಕ್ಷ ರೂಗಳ ವರೆಗಿನ ವಿಮಾಮೊತ್ತ ಸಿಗುವುದಾಗಿ ಮಾಹಿತಿ ನೀಡಿದರು. ಅಲ್ಲದೆ 60ವಯಸ್ಸು ಆದನಂತರದಲ್ಲಿ ಪಿಂಚಣಿರೂಪದಲ್ಲಿ 1000ರೂ ಗಳಿಂದ 5000ರೂ ಗಳ ವರೆಗಿನ ಪಿಂಚಣಿ ಹಣಸಿಗಬೇಕಾದರೆ ಈಗಾಲೇ ಅಟಲ್ ಪಿಂಚಣಿ ಯೋಜನೆಯನ್ನು ಮಾಡಿಸುವಂತೆ ತಿಳಿಸಿದರು. ಆರ್ಥಿಕ ಸಮಾಲೋಚಕರದ ನಬಿ ಅವರು ಮಾತನಾಡಿ ಪ್ರತಿಯೊಬ್ಬರು ರೀ ಕೆವೈಸಿ ಕಡ್ಡಾಯವಾಗಿ ಮಾಡಿಸುವಂತೆ ತಿಳಿಸಿದರು ಎಲ್ಲರೂ ನಿಮ್ಮ ಖಾತೆ ಇರುವ ಬ್ಯಾಂಕ್ ಗಳಿಗೆ ತೆರಳಿ ತಮ್ಮ ಗುರುತಿನ ಚೀಟಿ ಆಧಾರ್ ಕಾರ್ಡನ್ನು ನೀಡಿ ಮರುಕೆವೈಸಿ ಮಾಡಿಸುವಂತೆ ಗ್ರಾಹಕರಿಗೆ ಸಲಹೆ ನೀಡಿದರು ಯೂನಿಯನ್ ಬ್ಯಾಂಕ್ ಆಫ್ಇಂಡಿಯಾ ಇವರ ಸಹಯೋಗದಲ್ಲಿ ನಬಾರ್ಡ್ನ ಆರ್ಥಿಕನೆರವಿನೊಂದಿಗೆ ಕೊಡಗು ಜಿಲ್ಲೆಯಲ್ಲಿ ಅವಾರ್ಡ್ಸಂಸ್ಥೆಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪ್ರತೀ ತಾಲೂಕುಗಳಲ್ಲಿ ಮಾಡುತ್ತಿದ್ದು ಇದರ ಮುಖ್ಯ ಉದ್ದೇಶವೂ ಕೂಡ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದು ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಡಿಜಿಟಲ್ ಪೇಮೆಂಟ್ಗಳ ಬಗ್ಗೆ ಮಾಹಿತಿ ನೀಡುವುದೇ ಆಗಿದೆ ಎಂದು ಆರ್ಥಿಕ ಸಮಾಲೋಚಕರಾದ ಸಿ.ಜಿ.ಹರೀಶ್ ತಿಳಿಸಿದರು. ಕೊನೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಮಾತನಾಡಿ, ಈ ಒಂದು ಕಾರ್ಯಕ್ರಮವು ಅತ್ಯಂತ ಉಪಯುಕ್ತವಾದ ಕಾರ್ಯಕ್ರಮವಾಗಿದ್ದು, ಜನತೆಯು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಅವರು ಕರೆ ನೀಡಿದರು. ವೇದಿಕೆಯಲ್ಲಿ ಬ್ಯಾಂಕ್ ಸಿಬ್ಬಂದಿಗಳು ಹಾಗೂ ಗ್ರಾಹಕರು ಉಪಸ್ಥಿತರಿದ್ದರು. ಹರೀಶ್ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.










