ವಿರಾಜಪೇಟೆ ಸೆ.9 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಿರಾಜಪೇಟೆ ತಾಲ್ಲೂಕು ವತಿಯಿಂದ ಕೃಷಿ ಕಾರ್ಯಕ್ರಮದಡಿಯಲ್ಲಿ ಅಮ್ಮತಿ ವಲಯದ, ಕಣ್ಣಂಗಾಲ ಕಾರ್ಯಕ್ಷೇತ್ರದ ಅಮ್ಮತಿ ಒಂಟಿಅಂಗಡಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು. ಕಣ್ಣಂಗಾಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಜನಿ ಕುಟ್ಟಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಗಿಡಮರಗಳನ್ನು ಬೆಳೆಸಬೇಕು, ನೆಟ್ಟ ಗಿಡಗಳನ್ನು ಪೋಷಣೆ ಮಾಡಬೇಕು, ಪರಿಸರ ಸಂರಕ್ಷಣೆಯಿಂದ ಶುದ್ಧವಾದ ಗಾಳಿ ನೀರು ಸಿಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ತಮ್ಮ ಮನೆಯ ಪರಿಸರದಲ್ಲಿ ಗಿಡ ನಾಟಿ ಮಾಡಿ ಪರಿಸರ ಸಂರಕ್ಷಿಸಬೇಕು ಎಂದರು. ಸಂಪನ್ಮೂಲ ವ್ಯಕ್ತಿ ರೇಖಾ ಬಿ.ಎಸ್ ಮಾತನಾಡಿ, ಪರಿಸರ ಸಂರಕ್ಷಣೆಯಲ್ಲಿ ನಮ್ಮ ಕರ್ತವ್ಯದ ಬಗ್ಗೆ ಮತ್ತು ಮಾಲಿನ್ಯ, ಜಲ ಮಾಲಿನ್ಯ, ಶಬ್ದ ಮಾಲಿನ್ಯದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಪ್ರಬಂದ ಹಾಗೂ ಚಿತ್ರಕಲೆ ಎಲೆಗಳನ್ನು ಗುರುತಿಸುವ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕ ವಸಂತ್, ವಲಯ ಮೇಲ್ವಿಚಾರಕ ದಾನೇಶ್, ಶಾಲಾ ಮುಖ್ಯಶಿಕ್ಷಕರಾದ ರೀನಾ ಕುಮಾರಿ, ಶಾಲಾ ಶಿಕ್ಷಕರಾದ ಮಂಜುನಾಥ, ಅಶ್ವಿನಿ, ಸೌಮ್ಯ ಹಾಗೂ ಒಕ್ಕೂಟದ ಉಪಾಧ್ಯಕ್ಷರಾದ ಭಾನುಮತಿ, ಸೇವಾಪ್ರತಿನಿಧಿ ಸವಿತಾ, ಸಿಎಸ್ಸಿ ಸೇವಾದಾರರು ಕಾವ್ಯ, ಕಣ್ಣಂಗಾಲದ ಕೃಷಿ ಸಖಿ ರತಿ ಬಿ.ಯು ಶಾಲಾ ಮಕ್ಕಳು ಇದ್ದರು. ಶಾಲಾ ಆವರಣದಲ್ಲಿ ವಿವಿಧ ರೀತಿಯ ಹಣ್ಣಿನ ಗಿಡಗಳನ್ನು ನಾಟಿ ಮಾಡಲಾಯಿತು.











