
ಮಡಿಕೇರಿ ಸೆ.10 NEWS DESK : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಡಾ|| ಬಿ.ಆರ್ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಯಾತ್ರೆಗೆ ತೆರಳುವ ಅರ್ಹ ಯಾತ್ರಾರ್ಥಿಗಳು ಇಲಾಖಾ ವೆಬ್ಸೈಟ್ www.swd.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 15 ರವರೆಗೆ ವಿಸ್ತರಿಸಲಾಗಿದೆ. ಅರ್ಹ ಯಾತ್ರಾರ್ಥಿಗಳು ಅರ್ಜಿ ಸಲ್ಲಿಸಿ ದಾಖಲಾತಿಗಳನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿಗೆ ಸೆ.15 ರ ಸಂಜೆ 5.30 ರೊಳಗೆ ತಪ್ಪದೆ ಸಲ್ಲಿಸುವುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ದೀಕ್ಷಾ ಭೂಮಿ ನಾಗಪುರಕ್ಕೆ ಹೋಗ ಬಯಸುವ ಯಾತ್ರಾರ್ಥಿಗಳು ಜಂಟಿ/ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಇವರಿಗೆ ಸೆಪ್ಟೆಂಬರ್ 15 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು. ಜಿಲ್ಲಾವಾರು ನಿಗದಿತ ಗುರಿಗಿಂತ ಹೆಚ್ಚು ಅರ್ಜಿಗಳು ಸ್ವೀಕೃತಗೊಂಡಲ್ಲಿ ವಯಸ್ಸಿನ ಶ್ರೇಷ್ಠತೆ ಆಧಾರದ ಮೇಲೆ ಆಯ್ಕೆ ಮಾಡುವುದು. ಯಾತ್ರಾರ್ಥಿಗಳು ಕನಿಷ್ಠ 18 ವರ್ಷ ಮೇಲ್ಪಟ್ಟವರಾಗಿಬೇಕು. ಬಿ.ಪಿ.ಎಲ್ಕಾರ್ಡ್ ಹೊಂದಿರಬೇಕು. ಸಮಾಜ ಕಲ್ಯಾಣ ಇಲಾಖಾ ವೆಬ್ಸೈಟ್: www.swd.karnataka.gov.in ನಲ್ಲಿ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕಡ್ಡಾಯವಾಗಿ ಆಧಾರ್ ಕಾರ್ಡ್ ಹೊಂದಿರಬೇಕು. ಮೊದಲು ಅರ್ಜಿ ಸಲ್ಲಿಸಿದವರಿಗೆ ಮೊದಲ ಆದ್ಯತೆ, ನಿಗದಿ ಪಡಿಸಿದ ಗುರಿಗಳಿಗಿಂತ ಹೆಚ್ಚಿನ ಅರ್ಜಿ ಪರಿಗಣಿಸಲಾಗುವುದಿಲ್ಲ. ಆಧಾರ್ ಕಾರ್ಡ್/ರೇಷನ್ ಕಾರ್ಡ್ಗಳ ಪ್ರತಿಗಳನ್ನು ಅರ್ಜಿಯೊಂದಿಗೆ ಅಪ್ಲೋಡ್ ಮಾಡುವುದು. ಯಾತ್ರಾರ್ಥಿಗಳು ಎಸ್.ಸಿ/ಎಸ್.ಟಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಇತರೆ ಸಮುದಾಯದ ಜನರು ಬಾಬಾ ಸಾಹೇಬ್ ಡಾ|| ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ಸಹ ಯಾತ್ರೆ ಕೈಗೊಳ್ಳಬಹುದು. ಆಯ್ಕೆಯಾದ ಯಾತ್ರಾರ್ಥಿಗಳು ಒಂದು ವೇಳೆ ಸ್ವಂತ ವಾಹನದಲ್ಲಿ ಪ್ರಯಾಣ ಮಾಡಿದ್ದಲ್ಲಿ ಈ ಪ್ರಯಾಣ ಕೈಗೊಂಡಂತೆ ದೃಢೀಕರಿಸಿ ಅಫಿಡವಿಟ್ ಸಲ್ಲಿಸಬೇಕು ಹಾಗೂ ಪೆಟ್ರೋಲ್/ಡೀಸಲ್ ಬಿಲ್ಲುಗಳನ್ನು ಸಹ ಸಲ್ಲಿಸತಕ್ಕದ್ದು ಹಾಗೂ ಅಲ್ಲಿಗೆ ಪ್ರಯಾಣ ಮಾಡಿದ್ದಕ್ಕೆ ಸೂಕ್ತ ದಾಖಲಾತಿ ಸಲ್ಲಿಸುವುದು. ಡಾ|| ಬಿ.ಆರ್.ಅಂಬೇಡ್ಕರ್ರವರ ಚಿಂತನೆಗಳ ಬಗ್ಗೆ ಅರಿವು ಹೊಂದಿದ್ದು, ಸಮಾಜ ಸೇವೆ ಮಾಡಿದ ಅನುಭವ ಹೊಂದಿರಬೇಕು. ಈಗಾಗಲೇ ಸರ್ಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರದ ದೀಕ್ಷಾ ಭೂಮಿಗೆ ಪ್ರವಾಸ ಮಾಡಿದವರು 2 ನೇ ಬಾರಿ ಈ ಸೌಲಭ್ಯಕ್ಕೆ ಅರ್ಹರಲ್ಲ. ಸರ್ಕಾರಿ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಸೇವೆಯಲ್ಲಿರುವವರು ಅರ್ಹರಲ್ಲ. ರಾಜ್ಯದಲ್ಲಿ ಆಯಾಯ ಜಿಲ್ಲೆಗಳಿಂದಲೇ ನಾಗಪುರಕ್ಕೆ ಹೋಗಿ ಬರಲು ತಗಲುವ ಪ್ರಯಾಣದ ವೆಚ್ಚವನ್ನು ಮಾತ್ರ ಸರ್ಕಾರದಿಂದ ಭರಿಸಲಾಗುವುದು. ವಸತಿ ಮತ್ತು ಭೋಜನಾ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸತಕ್ಕದ್ದು. ಯಾತ್ರಾರ್ಥಿಗಳು ತಮ್ಮ ಹೆಸರಿನಲ್ಲಿರುವ ಉಳಿತಾಯ ಖಾತೆಯ ಸಂಖ್ಯೆ ಬ್ಯಾಂಕಿನ ಹೆಸರು, ವಿಳಾಸ ಮತ್ತು ಐಎಫ್ಎಸ್ಸಿ ಕೋಡ್ನ್ನು ಕಡ್ಡಾಯವಾಗಿ ಆನ್ಲೈನ್ನಲ್ಲಿ ಭರ್ತಿ ಮಾಡತಕ್ಕದ್ದು.
ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ-08272-225531 ಹಾಗೂ 9480843037, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ 9480843155, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ-9480843156 ಹಾಗೂ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ 9480843157 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ತಿಳಿಸಿದ್ದಾರೆ.








