ನಾಪೋಕ್ಲು ಸೆ.11 NEWS DESK : ಕುಂಜಿಲ ಕಕ್ಕಬೆ ಸಂಜೀವಿನಿ ಒಕ್ಕೂಟ ಹಾಗೂ ಪಂಚಾಯಿತಿ ವತಿಯಿಂದ ಕಕ್ಕಬೆ ಕೃಷಿ ಪತ್ತಿನ ಸಹಕಾರ ಸಂಘದ ವಿಎಸ್ಎಸ್ಎನ್ ಸಭಾಂಗಣದಲ್ಲಿ ಮಾದಕ ವಸ್ತು ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ ನಡೆಯಿತು. ನಾಪೋಕ್ಲು ಠಾಣಾಧಿಕಾರಿ ರಾಘವೇಂದ್ರ ಅವರು ಮಾತನಾಡಿ, ಮಾದಕ ವಸ್ತು ಸೇವನೆ ಮತ್ತು ಮಾರಾಟ ಬಗ್ಗೆ ಕಾನೂನಿನ ಅರಿವು ಮೂಡಿಸಿದರು. ಇದರ ಸಂಪೂರ್ಣ ನಿರ್ಮೂಲನೆಗೆ ಎಲ್ಲರ ಸಹಕಾರ ಅವಶ್ಯ ಎಂದರು. ಪಂಚಾಯಿತಿ ಸದಸ್ಯರು ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷರಾದ ಶಿಲ್ಪಾ ಲೋಕೇಶ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಶೋಕ್ ಕುಮಾರ್, ಆಡಳಿತ ಮಂಡಳಿಯ ಸದಸ್ಯರುಗಳಾದ ಚೋಯಮಾಡಂಡ ಹರೀಶ ಮೊಣ್ಣಪ್ಪ, ಮಹಮದ್ ಬಶೀರ್, ಭರತ್ ಚಂದ್ರ ದೇವಯ್ಯ, ಕುಂಡಂಡ ರಜಾಕ್, ಕೆ.ಡಿ.ಪಿ ಸದಸ್ಯರಾದ ರೈನಾ ಕಾರ್ಯಪ್ಪ ಮತ್ತು ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಕರ್ತಂಡ ಶೈಲಾ ಕುಟ್ಟಪ್ಪ ಹಾಗೂ ಶಿಕ್ಷಕರು ಸಂಜೀವಿನಿ ಒಕ್ಕೂಟದ ಸದಸ್ಯರುಗಳು ಶಾಲಾ ವಿದ್ಯಾರ್ಥಿಗಳು, ಆಟೋ ಚಾಲಕರು ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ : ದುಗ್ಗಳ ಸದಾನಂದ.











