Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಜಾತಿ ಜನಗಣತಿ ಸಂದರ್ಭ ಕೊಡವ ಎಂದು ನಮೂದಿಸಲು ಸಿಎನ್‌ಸಿ ಮನವಿ*
ಇತ್ತೀಚಿನ ಸುದ್ದಿಗಳು

*ಜಾತಿ ಜನಗಣತಿ ಸಂದರ್ಭ ಕೊಡವ ಎಂದು ನಮೂದಿಸಲು ಸಿಎನ್‌ಸಿ ಮನವಿ*

September 11, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.11 : ರಾಜ್ಯ ಸರಕಾರದ ವತಿಯಿಂದ ನಡೆಯುವ ಜಾತಿ ಜನಗಣತಿ ಸಂದರ್ಭ ನಗಣ್ಯ ಆ್ಯನಿಮಿಸ್ಟೆಕ್ ಏಕ-ಜನಾಂಗೀಯ ಆದಿಮಸಂಜಾತ ಕೊಡವರ ಸಮಗ್ರ ಸಬಲೀಕರಣಕ್ಕಾಗಿ ಜಾತಿ, ಭಾಷೆ, ಮಾತೃಭಾಷೆ ಮತ್ತು ಧರ್ಮದ ಕಾಲಂ ನಲ್ಲಿ ಸರ್ವ ಕೊಡವರು “ಕೊಡವ” ಎಂದು ನಮೂದಿಸುವಂತೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಅಧ್ಯಕ್ಷ ಎನ್.ಯು.ನಾಚಪ್ಪ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯ ಸರಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ಇದೇ ಸೆ.22 ರಿಂದ ನಡೆಸುವ ಜಾತಿ ಜನಗಣತಿಯಲ್ಲಿ ಉತ್ತಮ ನಾಳೆಗಾಗಿ ಮತ್ತು ಕೊಡವರ ಸಮಗ್ರ ಸಬಲೀಕರಣಕ್ಕಾಗಿ “ಕೊಡವ” ಎಂದು ನಮೂದಿಸುವುದು ಅತ್ಯವಶ್ಯಕವಾಗಿದೆ. ಆದಿಮಸಂಜಾತ ಏಕ-ಜನಾಂಗೀಯ ಕೊಡವರ ಹಕ್ಕುಗಳು ಖಾತ್ರಿಯಾಗಬೇಕಾದಲ್ಲಿ ಕೊಡವ ಎಂದು ದಾಖಲಿಸಿ ಎಂದು ಕರೆ ನೀಡಿದ್ದಾರೆ. ಕೊಡವರು ಯಾವುದೇ ಪಂಥಗಳು ಅಥವಾ ಉಪಪಂಗಡಗಳಿಲ್ಲದ ಏಕೈಕ, ಏಕ-ಜನಾಂಗೀಯ ಗುಂಪಾಗಿದ್ದಾರೆ. ವಿಭಿನ್ನ ಗುರುತು, ಭಾಷೆ ಮತ್ತು ಸಂಸ್ಕöÈತಿಯನ್ನು ಹೊಂದಿರುವ ವಿಶಿಷ್ಟ ಜನಾಂಗೀಯ ಸಮುದಾಯವಾಗಿದ್ದಾರೆ. ಜನಗಣತಿದಾರರು ನಿಮ್ಮ ಮನೆ ಮನೆಗೆ ಭೇಟಿ ನೀಡುವಾಗ, ಪ್ರತಿಯೊಬ್ಬ ಕೊಡವರೂ ಜಾತಿ, ಭಾಷೆ, ಧರ್ಮದ ಕಾಲಂನಲ್ಲಿ “ಕೊಡವ” ಎಂದೇ ನಮೂದಿಸಬೇಕು. ಇದು ರಾಜಕೀಯ, ಆರ್ಥಿಕ ಸಬಲೀಕರಣ ಮತ್ತು ಸಾಂಸ್ಕೃತಿಕ ಜಾನಪದ ಉನ್ನತಿಯನ್ನು ಸಾಧಿಸಲು ನಿರ್ಣಾಯಕವಾಗಿದೆ. ಅಲ್ಲದೆ ನಮ್ಮ ಸೂಕ್ಷ್ಮಾತಿಸೂಕ್ಷ್ಮ ಡೇಟಾವನ್ನು ದೃಢೀಕರಿಸುತ್ತದೆ. ಈ ಪ್ರಕ್ರಿಯೆಯು ಕೇಂದ್ರ ಸರಕಾರದ 2026-27 ರ ರಾಷ್ಟ್ರೀಯ ಜನಸಂಖ್ಯಾ ಗಣತಿಯ ಪ್ರಸ್ತಾವಿತ ಅನುಷ್ಠಾನಕ್ಕೆ ಮತ್ತು ಅಖಿಲ ಭಾರತ ಜಾತಿ ಗಣತಿಗೆ ಆಧಾರವಾಗಿ ಸಾಂವಿಧಾನಿಕ ಖಾತರಿಯನ್ನು ಪಡೆಯಲು ಮತ್ತಷ್ಟು ಆಧಾರವಾಗಲಿದೆ ಎಂದು ಎನ್.ಯು.ನಾಚಪ್ಪ ಅಭಿಪ್ರಾಯಪಟ್ಟಿದ್ದಾರೆ. ಸಿಎನ್‌ಸಿ ಸಂಘಟನೆ ತನ್ನ ನಿರಂತರ ಹೋರಾಟದ ಪ್ರಯಾಣದಲ್ಲಿ ಕರ್ನಾಟಕ ಹಿಂದುಳಿದ ವರ್ಗ ಆಯೋಗದ ಅಧ್ಯಕ್ಷರಾಗಿದ್ದ ಡಾ.ದ್ವಾರಕನಾಥ್ ಆಯೋಗವನ್ನು ಭೇಟಿಯಾಗಿ ಕೊಡವರ ಹಕ್ಕುಗಳ ಕುರಿತು ಪ್ರತಿಪಾದಿಸುತ್ತಿತ್ತು. “ಕೊಡಗರು” ಎಂದು ಇದ್ದ ‘ಕೊಡವ’ ಪದದ ಬಗ್ಗೆ 2008 ರಲ್ಲಿ ಅವರಿಗೆ ಮನವರಿಕೆ ಮಾಡಿದ ಹಿನ್ನೆಲೆಯಲ್ಲಿ ಕೊಡವರ ನೈಜ ಹಕ್ಕೊತ್ತಾಯಕ್ಕೆ ಸ್ಪಂದಿಸಿದರು. ಗಂಭೀರ ದೋಷವನ್ನು ವಿವೇಚನಾಯುಕ್ತ ಮನಸ್ಸಿನಿಂದ ಸರಿಪಡಿಸಲು ಮುಂದಾದರು. ಇದಲ್ಲದೆ, 2010 ರಲ್ಲಿ “ಕೊಡಗರು” ಎನ್ನುವ ವಿಚಿತ್ರವಾದ ಪದವನ್ನು ಕಿತ್ತೊಗೆದು “ಕೊಡವ” ಎನ್ನುವ ಜಾನಪದ-ಶಾಸ್ತ್ರೀಯ ಪದವನ್ನು ಪುರಸ್ಕರಿಸಿ ತಿದ್ದುಪಡಿ ಮಾಡಲು ಶಿಫಾರಸ್ಸು ಮಾಡಿದರು. ಆದರೆ ನಿಯಮಗಳ ಉಲ್ಲಂಘನೆಯ ಮೂಲಕ ಆಡಳಿತ ವ್ಯವಸ್ಥೆ ನಮ್ಮ ಕಾನೂನುಬದ್ಧ ಹಕ್ಕುಗಳನ್ನು ನಿರಾಕರಿಸಿತು. ಮತ್ತೆ ಸಿಎನ್‌ಸಿ ತನ್ನ ವಕೀಲ ಬಲ್ಲಚಂಡ ಬೊಳ್ಳಿಯಪ್ಪ ಅವರ ಸಹಕಾರದೊಂದಿಗೆ ರಾಜ್ಯ ಶ್ರೇಷ್ಠ ನ್ಯಾಯಾಲಯವನ್ನು ಸಂಪರ್ಕಿಸಿತು. ಸಿಎನ್‌ಸಿಯ ಸುದೀರ್ಘ ಕಾನೂನು ಹೋರಾಟದ ಫಲವಾಗಿ 2021 ಡಿ.8 ರಂದು ಕೊಡವ ಶಾಸ್ತ್ರೀಯ ನಾಮಕರಣದ ಹಕ್ಕನ್ನು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ನೀಡಿದ ಮಹತ್ವದ ಹೈಕೋರ್ಟ್ ತೀರ್ಪಿನ ಅನುಸಾರ ಎತ್ತಿಹಿಡಿಯಲಾಯಿತು. ಅಂತಿಮವಾಗಿ 2023 ರಲ್ಲಿ ಹಾಲಿ ಸರಕಾರ ತನ್ನ ಗೆಜೆಟ್ ಅಧಿಸೂಚನೆಯ ಮೂಲಕ ಎಲ್ಲಾ ಸರ್ಕಾರಿ ದಾಖಲೆಗಳಲ್ಲಿ ನಮ್ಮನ್ನು “ಕೊಡವ” ಎಂದು ದಾಖಲಿಸಿತು. 1871-72 ರಿಂದ 2031 ರವರೆಗೆ ಬ್ರಿಟಿಷ್ ರಾಜ್ ಸರ್ಕಾರ ನಡೆಸಿದ ಮೊದಲ ಜಾತಿವಾರು ಜನಗಣತಿಯಲ್ಲಿ ಕೊಡವರನ್ನು ಕೊಡವ ಜನಾಂಗ ಎಂದು ದಾಖಲಿಸಲಾಗಿದೆ. ಇದೊಂದು ಮಹತ್ವಪೂರ್ಣ ಅಧ್ಯಾಯ ಎಂಬುವುದನ್ನು ನಾವು ನಿಮ್ಮ ಗಮನಕ್ಕೆ ತರುತ್ತೇವೆ. 18ನೇ ಶತಮಾನದಲ್ಲಿ ಕೊಡವ ಲ್ಯಾಂಡ್‌ನ ಹೊರ ಪ್ರದೇಶದ ಆಡಳಿತಗಾರ ಲಿಂಗರಾಜ ಕೂಡ ತನ್ನ “ಹುಕುಮ್ನಾಮ” ದಲ್ಲಿ ಕೊಡವರನ್ನು ಪ್ರತ್ಯೇಕ ಅಸ್ತಿತ್ವವೆಂದು ಎಣಿಸಿ ದಾಖಲಿಸಿದ್ದಾರೆ. 1941 ರ ಜನಗಣತಿಯ ನಂತರ ಕೊಡವರನ್ನು ಇತರ ಬಹುಸಂಖ್ಯಾತ ಗುಂಪುಗಳೊಂದಿಗೆ ವಿಲೀನಗೊಳಿಸಲಾಯಿತು. ಇದರಿಂದಾಗಿ ನಾವು ಸರ್ಕಾರಿ ದಾಖಲೆಗಳಲ್ಲಿ ನಮ್ಮ ವಿಶಿಷ್ಟ ಗುರುತನ್ನು ಕಳೆದುಕೊಂಡಿದ್ದರಿಂದ ನಮ್ಮ ಭವಿಷ್ಯವು ಕತ್ತಲೆಯಾಯಿತು ಎಂದು ಎನ್.ಯು.ನಾಚಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಈ ಮಹಾನ್ ಐತಿಹಾಸಿಕ ಅನ್ಯಾಯವನ್ನು ಸರಿಪಡಿಸಲು, ಜನಗಣತಿ ಪಟ್ಟಿಯ ಎಲ್ಲಾ ಕಾಲಂಗಳಲ್ಲಿ ಕೊಡವ ಎಂದು ನಮೂದಿಸಬೇಕಾಗಿದೆ. ಈ ಸಮೀಕ್ಷೆ ಸೆ.22 ರಿಂದ ಅ.7 ರವರೆಗೆ 15 ದಿನಗಳ ಕಾಲ ನಡೆಯಲಿದೆ. ಈಗ ನಾವು ಸಾಂವಿಧಾನಿಕ ರಕ್ಷಣೆಗಾಗಿ ಸರಕಾರಿ ದಾಖಲೆಗಳನ್ನು ಸರಿಯಾಗಿ ನಮೂದಿಸಬೇಕು. ನಾಗರಿಕ ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ನಾವು ಕೊಡವರು ಎಂದು ರಾಜ್ಯ ದಾಖಲೆಯಲ್ಲಿ ನಮೂದಿಸಲಾಗದ ಹೊರತು ನಮ್ಮ ಸಮಗ್ರ ಸಬಲೀಕರಣಕ್ಕಾಗಿ ನಾವು ಅಪೇಕ್ಷೆಪಡಲು ಸಾಧ್ಯವಾಗುವುದಿಲ್ಲ.
ಆದ್ದರಿಂದ, 2025 ರ ಜಾತಿವಾರು ಜನಗಣತಿಗಾಗಿ ಕರ್ನಾಟಕ ಹಿಂದುಳಿದ ವರ್ಗ ಆಯೋಗವು ಸೂಚಿಸಿದ ಜಾತಿ-ಭಾಷಾ-ಧರ್ಮದ ಎಲ್ಲಾ ಅಂಕಣಗಳಲ್ಲಿ ಕೊಡವರು ಎಂದು ನಮೂದಿಸುವಂತೆ ಎಲ್ಲಾ ಕೊಡವರು ಹಾಗೂ ಕೊಡವತಿಯರಿಗೆ ಮನವಿ ಮಾಡಿಕೊಳ್ಳುವುದಾಗಿ ಎನ್.ಯು.ನಾಚಪ್ಪ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು : ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ : ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಡಿ.ಉದಯ ಕುಮಾರ್ ಸಲಹೆ*
Next Article *ಮುಖ್ಯಮಂತ್ರಿಗಳನ್ನು ಭೇಟಿಯಾದ ಮಡಿಕೇರಿ ದಸರಾ ಸಮಿತಿ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.