

ಮಡಿಕೇರಿ ಸೆ.12 NEWS DESK : ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ವಿರಾಜಪೇಟೆ 2025-26 ನೇ ಸಾಲಿನ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸರ್ವದೈವತ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಥ್ರೋಬಾಲ್ನಲ್ಲಿ ಬಾಲಕ ಮತ್ತು ಬಾಲಕಿಯರ ತಂಡ, ಟೇಬಲ್ ಟೆನಿಸ್ನಲ್ಲಿ ಬಾಲಕ ಮತ್ತು ಬಾಲಕಿಯರ ತಂಡ ಹಾಗೂ ವಾಲಿಬಾಲ್ನಲ್ಲಿ ಬಾಲಕಿಯರ ತಂಡ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಟಲ್ ಬ್ಯಾಡ್ಮಿಂಟನ್ನಲ್ಲಿ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಚೆಸ್ ಸ್ಪರ್ಧೆಯಲ್ಲಿ ಅಶ್ವಿ ಮತ್ತು ವಂದನಾ ಆಯ್ಕೆಯಾಗಿದ್ದು, ಕರಾಟೆಯಲ್ಲಿ ಐಶ್ವರ್ಯಾ ಮತ್ತು ರಕ್ಷನ್ ದ್ವಿತೀಯ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ ಪ್ರಾಂಶುಪಾಲರು ಭೋದಕ ವರ್ಗ ಅಭಿನಂದನೆ ಸಲ್ಲಿಸಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಮೋದ್ ಗೌಡ ತರಬೇತಿ ನೀಡಿರುತ್ತಾರೆ.










