ಮಡಿಕೇರಿ ಸೆ.13 NEWS DESK : ಕೊಡಗು ಜಿಲ್ಲಾ ಮಹಾಬೋಧಿ ಪತ್ತಿನ ಸಹಕಾರ ಸಂಘದ 10ನೇ ಮಹಾಸಭೆಯು ಸೆ.14 ರಂದು ಸಂಘದ ಅಧ್ಯಕ್ಷರಾದ ಎಸ್.ಸಿ.ಸತೀಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅಂದು ಪೂರ್ವಹ್ನ 10.30 ಗಂಟೆಗೆ ನಗರದ ಬಾಲ ಭವನದಲ್ಲಿ ಸಭೆ ನಡೆಯಲಿದ್ದು, ಮಹಾಸಭೆಯಲ್ಲಿ ನಿರ್ದೇಶಕರುಗಳು ಹಾಗೂ ಸರ್ವ ಸದಸ್ಯರು ಪಾಲ್ಗೊಳ್ಳುವಂತೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೇವಕ್ಕಿ ಮನವಿ ಮಾಡಿದ್ದಾರೆ. ಸಭೆಯಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆಯಾದ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು ಎಂದು ತಿಳಿಸಿದರು.












