
ಕುಶಾಲನಗರ ಸೆ.16 NEWS DESK : ಕುಶಾಲನಗರದ ಶ್ರೀ ಅಮರ ನಾರಾಯಣ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸ್ಥಳೀಯ ಟಿಟಿಡಿ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಟಿ.ಬಿ. ಸತೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಳೆದ ಸಾಲಿನ ವಾರ್ಷಿಕ ವಹಿವಾಟಿನ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ನೂತನ ನಿರ್ದೇಶಕರಾಗಿ ಟಿ.ಎ ಪ್ರಕಾಶ್, ಸುಬ್ರಮಣಿಯವರನ್ನು ಸೇರ್ಪಡೆಗೊಳಿಸಲಾಯಿತು. ಸಭೆಯಲ್ಲಿ ಕುಶಾಲನಗರ ಕೈವಾರ ತಾತಯ್ಯ ಬಲಿಜ ಸಮಾಜದ ಅಧ್ಯಕ್ಷ ಬಾಬಣ್ಣ, ಕೊಡಗು ಬಲಿಜ ಸಮಾಜದ ಅಧ್ಯಕ್ಷ ಗಣೇಶ್ ನಾಯ್ಡು, ಶ್ರೀ ಅಮರ ನಾರಾಯಣ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಲೋಕೇಶ್, ನಿರ್ದೇಶಕರಾದ ವೆಂಕಟೇಶಲು, ಮದನ್, ರಮ್ಯಾ, ಶ್ವೇತ, ಜಯರಾಮ್ , ಎಂ.ಆರ್.ಗಣೇಶ್, ಟಿ.ಆರ್.ಜಗದೀಶ್, ಕಾರ್ಯನಿರ್ವಹಣಾಧಿಕಾರಿ ಎಸ್.ಎಸ್.ಸುಪ್ರೀತಾ ಹಾಜರಿದ್ದರು.









