
ಮಡಿಕೇರಿ ಸೆ.20 NEWS DESK : ಮಡಿಕೇರಿ ನಗರ ದಸರಾ ಅಲಂಕಾರ ಸಮಿತಿಗೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ. ನಗರದ ದಸರಾ ಸಮಿತಿ ಕಚೇರಿಯಲ್ಲಿ ಅಲಂಕಾರ ಸಮಿತಿಯ ಅಧ್ಯಕ್ಷರಾದ ಎಂ.ಎ.ಮುನೀರ್ ಮಾಚರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವ ಸಲಹೆಗಾರರಾಗಿ ಪಿ.ಜಿ.ಮಂಜುನಾಥ್, ಉಪಾಧ್ಯಕ್ಷರಾಗಿ ರವಿಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಕೋಚನ ಎಂ.ಚೇತನ್, ಕಾರ್ಯದರ್ಶಿಯಾಗಿ ಜಿ.ಎನ್.ಭಾರತ್, ಸಹ ಕಾರ್ಯದರ್ಶಿಯಾಗಿ ಜಿ.ಎನ್.ಪುನೀತ್, ಖಜಾಂಚಿಯಾಗಿ ರಫೀಕ್ (ದಾದಾ), ಸಹ ಖಜಾಂಚಿಯಾಗಿ ಲಿಲ್ಲಿ ಗೌಡ, ಸಂಘಟನಾ ಕಾರ್ಯದರ್ಶಿ ಹರ್ಷಿತ್ ಕುಮಾರ್, ಸಂಚಾಲಕರುಗಳಾಗಿ ಬಿ.ಕೆ.ನವೀನ್ ಹಾಗೂ ಕಲಿಲ್ ಭಾಷಾ ಆಯ್ಕೆಯಾಗಿದ್ದಾರೆ.








