
ಮಡಿಕೇರಿ ಸೆ.23 NEWS DESK : ಆರು ದಶಕಗಳ ಕಾಲ ಉಳ್ಳಾಲವನ್ನು ಕೇಂದ್ರೀಕರಿಸಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಪ್ರಗತಿಗೆ ನಾಯಕತ್ವ ನೀಡಿದ್ದ ಅಧ್ಯಾತ್ಮ ಗುರು ತಾಜುಲ್ ಉಲಮಾ ಸೈಯದ್ ಅಬ್ದುಲ್ ರಹ್ಮಾನ್ ಅಲ್ ಬುಖಾರಿ ಉಳ್ಳಾಳ್ ತಙಳ್ ಅವರ 12ನೇ ಉರೂಸ್ ಕಾರ್ಯಕ್ರಮ ಸೆ.23 ರಿಂದ 25 ವರೆಗೆ ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂ ದರ್ಗಾ ಶರೀಫಿನಲ್ಲಿ ಹಲವಾರು ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಹಲವಾರು ಉಲಮಾ, ಉಮರಾ ನೇತಾರರು ಭಾಗವಹಿಸುವ ಈ ಉರೂಸ್ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಲು ಕೊಡಗು ಜಿಲ್ಲಾ ಮದನೀಸ್ ಅಸೋಸಿಯೇಷನ್ ಕರೆ ನೀಡಿದೆ.









