
ಮಡಿಕೇರಿ NEWS DESK ಸೆ.23 : ಗೋಣಿಕೊಪ್ಪದ ಶ್ರೀ ಕಾವೇರಿ ದಸರಾ ಸಮಿತಿ ವತಿಯಿಂದ ನಡೆದ ಮಕ್ಕಳ ದಸರಾ ಸಂಭ್ರಮದಲ್ಲಿ ಶ್ರೀ ಕೃಷ್ಣ ಛದ್ಮವೇಷ ಸ್ಪರ್ಧೆಯಲ್ಲಿ ಸ್ಮೃತಿ ಎಸ್.ಭಾರಧ್ವಜ್ ದ್ವಿತೀಯ ಬಹುಮಾನ ಗೆದ್ದಿದ್ದಾಳೆ. 3 ರಿಂದ 5 ವರ್ಷದೊಳಗಿನ ಸ್ಪರ್ಧಾ ವಿಭಾಗದಲ್ಲಿ ಸ್ಮೃತಿ ಎಸ್.ಭಾರಧ್ವಜ್ ಆದಿಶೇಷನ ಮೇಲೆ ವಿಹರಿಸುತ್ತಿರುವ ಶ್ರೀಕೃಷ್ಣನಾಗಿ ಮಿಂಚಿದಳು. ತೀರ್ಪುಗಾರರ ಮೆಚ್ಚುಗೆಗೆ ಪಾತ್ರಳಾಗಿ ದ್ವಿತೀಯ ಬಹುಮಾನ ಪಡೆದಳು. 5 ವರ್ಷದ ಸ್ಮೃತಿ ಪೊನ್ನಂಪೇಟೆ ಸಮೀಪದ ಬೇಗೂರು ಶ್ರೀ ಪೂಳೆಮಾಡು ಈಶ್ವರ ದೇವಸ್ಥಾನದ ಅರ್ಚಕರಾದ ಸುಂದರೇಶ ಭಾರಧ್ವ್ವಜ್ ಹಾಗೂ ಆಶಿಕಾ ದಂಪತಿಯ ಪುತ್ರಿ.









