Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾ*
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಅರೆಭಾಷೆ ಗೌಡರು ಗಣತಿ ಸಂದರ್ಭ GOWDA (ಗೌಡ) ಎಂದು ನಮೂದಿಸಲು ಯಲಹಂಕ ಗೌಡ ಸಮಾಜ ಮನವಿ*
ಇತ್ತೀಚಿನ ಸುದ್ದಿಗಳು

*ಅರೆಭಾಷೆ ಗೌಡರು ಗಣತಿ ಸಂದರ್ಭ GOWDA (ಗೌಡ) ಎಂದು ನಮೂದಿಸಲು ಯಲಹಂಕ ಗೌಡ ಸಮಾಜ ಮನವಿ*

September 25, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.25 : ಪ್ರಸ್ತುತ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರಕಾರದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಗಣತಿಯಲ್ಲಿ ಹಾಗೂ ಮುಂದೆ ನಡೆಯಲಿರುವ ಕೇಂದ್ರ ಸರಕಾರದ ಜಾತಿ ಗಣತಿಯ ಸಂದರ್ಭ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು, ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ, ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ಸರ್ವ ಅರೆಭಾಷೆ ಗೌಡರು ನಮೂದಿಸಬೇಕೆಂದು ಯಲಹಂಕ ಗೌಡ ಸಮಾಜದ ಅಧ್ಯಕ್ಷ ಕುಂಞಳಿಯನ ಅಜಿತ್ ಕುಮಾರ್ ಅವರು ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ ಕಾಲಂನಲ್ಲಿ ಸೇರಿಸಬೇಕೆಂದು ಕೊಡಗು ಗೌಡ ಸಮಾಜಗಳ ಒಕ್ಕೂಟ ಸಲ್ಲಿಸಿದ ಮನವಿಗೆ ಸರಕಾರ ಸ್ಪಂದಿಸಿದೆ. ಉಪಜಾತಿ ಎನ್ನುವ ಕಾಲಂನಲ್ಲಿ ಅರೆಭಾಷೆ ಗೌಡ ಎಂದು ಸೂಚಿಸಬೇಕು. ಅರೆಭಾಷೆ ಗೌಡ ಸಮುದಾಯ ಬಾಂಧವರು ಈ ಎಲ್ಲಾ ವಿವರಗಳನ್ನು ಗಮನದಲ್ಲಿರಿಸಿಕೊಂಡು ಕಡ್ಡಾಯವಾಗಿ ರಾಜ್ಯ ಮತ್ತು ಕೇಂದ್ರದ ಗಣತಿಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಮೂಲತಃ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ. ಆದರೆ ಅರೆಭಾಷೆ ಗೌಡರ ಶೈಕ್ಷಣಿಕ ಮತ್ತು ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ಗೌಡ ಎಂದೇ ನಮೂದಾಗಿರುವುದರಿಂದ ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಮುದಾಯದ ಸಭೆಗಳನ್ನು ನಡೆಸಿ, ಕೊಡಗಿನ ಎಲ್ಲಾ ಗೌಡ ಸಮಾಜಗಳೊಂದಿಗೆ ಚರ್ಚಿಸಿ ಗಣತಿ ಸಂದರ್ಭ GOWDA (ಗೌಡ) ಎಂದು ನಮೂದಿಸಲು ಕೊಡಗು ಗೌಡ ಸಮಾಜಗಳ ಒಕ್ಕೂಟ ನಿರ್ಣಯ ಕೈಗೊಂಡಿದೆ. ಇದಕ್ಕೆ ಯಲಹಂಕ ಗೌಡ ಸಮಾಜ ಸಂಪೂರ್ಣ ಬೆಂಬಲ ಸೂಚಿಸಿದೆ ಎಂದು ತಿಳಿಸಿದ್ದಾರೆ. ಗಣತಿಯಲ್ಲಿ ತಮ್ಮ ಜಾತಿಗೆ ಇರುವ ಇನ್ನೊಂದು ಹೆಸರು ಎಂಬ ಕಾಲಂ ಸಹ ಇದ್ದು, ಅಲ್ಲಿ ಒಕ್ಕಲಿಗ, ಕೊಡಗು ಗೌಡ, ಅರೆಭಾಷೆ ಒಕ್ಕಲಿಗ ಎಂದು ನಮೂದಿಸಲು ಅವರು ಕೇಳಿ ಕೊಂಡಿದ್ದಾರೆ. ಹಾಗೆಯೇ ಎಲ್ಲಾ ಮೂಲ ದಾಖಲೆಗಳನ್ನು ಒಕ್ಕಲಿಗ ಎಂದು ಹೊಂದಿರುವ ಅರೆಭಾಷೆ ಗೌಡ ಸಮುದಾಯದವರು ಇದ್ದಲ್ಲಿ ಅವರುಗಳು ಜಾತಿ ಒಕ್ಕಲಿಗ, ಉಪಜಾತಿ ಅರೆಭಾಷೆ ಗೌಡ, ಅರೆಭಾಷೆ ಒಕ್ಕಲಿಗ ಮತ್ತು ಮಾತೃಭಾಷೆ ಅರೆಭಾಷೆ ಎಂದು ನಮೂದಿಸಲು ಯಾವುದೇ ಅಭ್ಯಂತರವಿರುವುದಿಲ್ಲವೆಂದು ಕುಂಞಳಿಯನ ಅಜಿತ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ದೊಡ್ಡ ಧಾರ್ಮಿಕ ಗುಂಪಿನೊಂದಿಗೆ ಗುರುತಿಸಿಕೊಂಡರೆ ಹಕ್ಕುಗಳಿಗೆ ಹಾನಿ : ಕೊಡವರೇ ಜನಗಣತಿಯಲ್ಲಿ ಎಚ್ಚರದಿಂದಿರಿ : ಸಿಎನ್‌ಸಿ ಕರೆ*
Next Article *ಸಿದ್ದಾಪುರ ಶೀ ಸಿದ್ಧಿವಿನಾಯಕ ಮಿತ್ರ ಮಂಡಳಿಯಿಂದ ಅದ್ದೂರಿ ಗೌರಿ ಗಣೇಶ ಮೂರ್ತಿಗಳ ಶೋಭಾಯಾತ್ರೆ* 

Related Posts

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

ವಿರಾಜಪೇಟೆ NEWS DESK ಫೆ.12 : ವಿದ್ಯಾರ್ಥಿಗಳಲ್ಲಿ “ವಿವಿಧತೆಯಲ್ಲಿ ಏಕತೆ”ಯ ಮಹತ್ವವನ್ನು ಬೆಳೆಸುವ ಉದ್ದೇಶದಿಂದ ವಿರಾಜಪೇಟೆಯ ಕಾವೇರಿ ಶಾಲೆಯಲ್ಲಿ ನರ್ಸರಿ…

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.