
ವಿರಾಜಪೇಟೆ ಸೆ.27 NEWS DESK : ಆಧಿಶಕ್ತಿ ಟ್ಯುಟೋರಿಯಲ್ಸ್ ನಲ್ಲಿ ಎತ್ನಿಕ್ ಡೇ ಹಾಗೂ ಪ್ರತಿಭಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಮುಖ್ಯಸ್ಥರಾದ ಕರಣ್ ಕುಮಾರ್, ವಿದ್ಯಾರ್ಥಿಗಳು ಪ್ರತಿನಿತ್ಯ ತರಗತಿಗೆ ಹಾಜರಾಗುವ ಮೂಲಕ ಶ್ರದ್ಧೆಯಿಂದ ಓದಬೇಕು. ಸಂಸ್ಥೆಯಲ್ಲಿ ಮೌಲ್ಯಯುತ ಶಿಕ್ಷಣವನ್ನು ನೀಡುತ್ತಿದ್ದು, ವಿದ್ಯಾರ್ಥಿಗಳು ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ತರಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯನ್ನು ಕಲ್ಪಿಸಲಾಗಿದೆ ಎಂದರು. ವಿದ್ಯಾರ್ಥಿಗಳು ಉತ್ತಮವಾಗಿ ಓದಿ ಸಂಸ್ಥೆಗೆ ಉತ್ತಮ ಫಲಿತಾಂಶವನ್ನು ನೀಡಿ ಎಂದು ಕರೆ ನೀಡಿದರು. ಈ ಸಂದರ್ಭ ಎಂ.ಎಚ್.ಸಮಿನ, ಜೀಸ್ಮ ಎಂ.ಎಸ್., ಗಗನ್, ಗೀತಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.









