ಮಡಿಕೇರಿ NEWS DESK ಅ.1 : ಸೋಮವಾರಪೇಟೆ ಕಡೆಯಿಂದ ಬರುವ ವಾಹನಗಳು ಸಂಪಿಗೆ ಕಟ್ಟೆ ಕಡೆಯಿಂದ ಎ.ವಿ.ಶಾಲೆ, ಮುತ್ತಪ್ಪ ದೇವಸ್ಥಾನ ಮುಂದೆ ಸೆಂಟ್ ಜೋಸೆಫ್ ಕಾನ್ವೆಂಟ್ ಮೈದಾನದಲ್ಲಿ ವಾಹನ ನಿಲುಗಡೆಗೊಳಿಸುವುದು. ಎಸ್.ಪಿ ಕಚೇರಿ ಜಂಕ್ಷನ್, ಮುಂದೆ ಐಟಿಐ ಜಂಕ್ಷನ್ ಕಡೆಯಿಂದ ಎಫ್.ಎಂ.ಸಿ ಕಾಲೇಜು ಮೈದಾನದಲ್ಲಿ ವಾಹನಗಳನ್ನು ನಿಲುಗಡೆಗೊಳಿಸುವುದು. ಮೈಸೂರು ರಸ್ತೆ ಮತ್ತು ಸಿದ್ದಾಪುರ ಕಡೆಯಿಂದ ದಸರಾಕ್ಕೆ ಬರುವ ವಾಹನಗಳು ಚೈನ್ಗೇಟ್ ಮುಖಾಂತರ ತೆರಳಿ ಮ್ಯಾನ್ಸ್ ಕಾಂಪೌAಡ್ ಮೈದಾನದಲ್ಲಿ ನಿಲುಗಡೆಗೊಳಿಸುವುದು. ವಿರಾಜಪೇಟೆ, ಮೂರ್ನಾಡು ಕಡೆಯಿಂದ ದಸರಾಕ್ಕೆ ಬರುವ ವಾಹನಗಳು ಮೇಕೇರಿ ಶಾಲಾ ಮೈದಾನದಲ್ಲಿ ನಿಲುಗಡೆಗೊಳಿಸುವುದು. ಮಂಗಳೂರು ಕಡೆಯಿಂದ ದಸರಾಕ್ಕೆ ಬರುವ ವಾಹನಗಳು ತಾಳತ್ ಮನೆ ನೇತಾಜಿ ಮೈದಾನ ಮತ್ತು ದುರ್ಗ ಭಗವತಿ ದೇವಸ್ಥಾನ ಮೈದಾನದಲ್ಲಿ ನಿಲುಗಡೆಗೊಳಿಸುವುದು. ಗಾಳಿಬೀಡು ಅಬ್ಬಿಪಾಲ್ಸ್, ಕಾಲೂರು ಕಡೆಯಿಂದ ಬರುವ ವಾಹನಗಳು ಎಫ್.ಎಂ.ಸಿ ಕಾಲೇಜು ಮೈದಾನದಲ್ಲಿ ನಿಲುಗಡೆಗೊಳಿಸುವುದು. ಭಾಗಮಂಡಲ ಕಡೆಯಿಂದ ದಸರಾಕ್ಕೆ ಬರುವ ವಾಹನಗಳು ತಾಳತ್ ಮನೆ ಪಪ್ಪೀಸ್ ಗ್ಲಾಸ್ ಹೌಸ್ ಮೈದಾನದಲ್ಲಿ ನಿಲುಗಡೆಗೊಳಿಸುವುದು. ಮೈಸೂರು, ಸಿದ್ದಾಪುರ ಕಡೆಯಿಂದ ಬರುವ ದ್ವಿಚಕ್ರ ವಾಹನಗಳ ನಿಲುಗಡೆಗೆ ಮೈಸೂರು ರಸ್ತೆಯ ಈಸ್ಟ್ ಎಂಡ್ ಹೋಟೆಲ್ ಮುಂಭಾಗದಲ್ಲಿರುವ ಶಾಂತಿ ಚರ್ಚ್ ಮೈದಾನದಲ್ಲಿ ನಿಲುಗಡೆ ಮಾಡುವುದು. ನಗರದಲ್ಲಿರುವ ಗಣಪತಿ ಬೀದಿ, ಮಹದೇವಪೇಟೆ, ಕಾಲೇಜು ರಸ್ತೆ, ಕೊಹಿನೂರು ರಸ್ತೆ ಮತ್ತು ನಗರದ ಮದ್ಯಭಾಗದಲ್ಲಿರುವ ಸಾರ್ವಜನಿಕರು ತಮ್ಮ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸದೇ ತಮ್ಮ ವಾಹನಗಳನ್ನು ಕ್ರೆಸೆಂಟ್ ಶಾಲೆ ಮೈದಾನ, ಹಿಂದೂಸ್ಥಾನ್ ಸ್ಕೂಲ್ ಮೈದಾನ, ಅಥವಾ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ನಿಲುಗಡೆಗೊಳಿಸುವುದು. ದಿನಾಂಕ 02-10-2025 ರಂದು ಸಮಯ ಸಂಜೆ 4 ಗಂಟೆಯಿಂದ ದಿನಾಂಕ 03-10-2025ರ ಬೆಳಿಗ್ಗೆ 10 ಗಂಟೆಯವರೆಗೆ ನಗರದೊಳಗೆ ಇರುವ ಎಲ್ಲಾ ರಸ್ತೆಗಳು ನಿಲುಗಡೆ ರಹಿತ ರಸ್ತೆಗಳು ಆಗಿರುತ್ತದೆ. ಸಂಪಿಗೆ ಕಟ್ಟೆಯಿಂದ ಉಕ್ಕುಡ ಮಹದೇವಪೇಟೆ, ಎ.ವಿ ಸ್ಕೂಲ್ ಜಂಕ್ಷನ್, ಕಾನ್ವೆಂಟ್ ಜಂಕ್ಷನ್ ವರೆಗಿನ ರಸ್ತೆಗಳು ನಿಲುಗಡೆ ರಹಿತ ರಸ್ತೆಗಳು ಆಗಿರುತ್ತದೆ. ಹೊಸ ಖಾಸಗಿ ಬಸ್ಸು ನಿಲ್ದಾಣದಿಂದ ರೇಸ್ ಕೋರ್ಸ ರಸ್ತೆಗಾಗಿ ರಾಜಸೀಟ್ ರಸ್ತೆಯ ಮುಖಾಂತರ ಮಂಗೇರಿರಾ ಮುತ್ತಣ ರಸ್ತೆಯವರೆಗೂ ಮತ್ತು ಗಣಪತಿ ಬೀದಿ, ಮಹದೇವಪೇಟೆ, ಕಾಲೇಜು ರಸ್ತೆ, ಕೊಹಿನೂರು ರಸ್ತೆಯಲ್ಲಿ 03-10-2025 ರ ಸಂಜೆ 4 ಗಂಟೆಯವರೆಗೂ ನಿಲುಗಡೆ ರಹಿತ ರಸ್ತೆಗಳು ಆಗಿರುತ್ತದೆ. ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ತಾತ್ಕಾಲಿಕವಾಗಿ ಕೆ.ಎಸ್.ಆರ್.ಟಿ.ಸಿ ಡಿಪೋ ಮತ್ತು ಆರ್.ಎಂ.ಸಿಯನ್ನು ಬಸ್ಸು ನಿಲ್ದಾಣವಾಗಿ ಮಾರ್ಪಾಡಿಸಿಕೊಳ್ಳುವುದು ಮತ್ತು ನಗರದೊಳಗೆ ಸಂಚರಿಸದಂತೆ ವ್ಯವಸ್ಥೆ ಮಾಡಿಕೊಳ್ಳುವುದು. ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣವನ್ನು ತಾತ್ಕಾಲಿಕವಾಗಿ ಸಾರ್ವಜನಿಕರಿಗೆ ವಾಹನ ನಿಲ್ಲಿಸಲು ಅನುವು ಮಾಡಿಕೊಡುವುದು. ಖಾಸಗಿ ಬಸ್ಸುಗಳು ನಗರದೊಳಗೆ ಆಗಮಿಸದೇ ಜಿಟಿ ವೃತ್ತದಲ್ಲಿಯೇ ಪ್ರಯಾಣಿಕರನ್ನು ಇಳಿಸಿ, ಹತ್ತಿಸಿ ತೆರಳುವುದು. ಮತ್ತು ಖಾಸಗಿ ಬಸ್ಸು ನಿಲ್ದಾಣವನ್ನು ತಾತ್ಕಾಲಿಕವಾಗಿ ಸಾರ್ವಜನಿಕರಿಗೆ ವಾಹನ ನಿಲ್ಲಿಸಲು ಅನುವು ಮಾಡಿಕೊಡುವುದು. *ಪಾರ್ಕಿಂಗ್ ವ್ಯವಸ್ಥೆ ಮಾಡಿರುವ ಸ್ಥಳ* ಎಫ್.ಎಂ.ಸಿ ಕಾಲೇಜು ಮೈದಾನ, ಸೆಂಟ್ ಜೋಸೆಫ್ ಕಾನ್ವೆಂಟ್ ಮೈದಾನ, ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣ, ಐಟಿಐ ಕಾಲೇಜು ಮೈದಾನ, ಶಾಂತಿ ಚರ್ಚ್ ಮೈದಾನ (ದ್ವಿ ಚಕ್ರ ಮೋಟಾರು ಸೈಕಲ್ ಮಾತ್ರ), ಮ್ಯಾನ್ಸ್ ಕಾಂಪೌಂಡ್, ಜೂನಿಯರ್ ಕಾಲೇಜು ಮೈದಾನ, ಹೊಸ ಖಾಸಗಿ ಬಸ್ಸು ನಿಲ್ದಾಣ, ಮೇಕೇರಿ ಶಾಲಾ ಮೈದಾನ, ಕ್ರೆಸೆಂಟ್ ಶಾಲಾ ಮೈದಾನ, ತಾಳತ್ಮನೆ ನೇತಾಜಿ ಮೈದಾನ ಮತ್ತು ದುರ್ಗಾ ಭಗವತಿ ದೇವಾಲಯದ ಮೈದಾನ ಮತ್ತು ತಾಳತ್ ಮನೆ ಪಪ್ಪೀಸ್ ಗ್ಲಾಸ್ ಹೌಸ್ ಮೈದಾನ.











