Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಾನ್ ಬೈಲ್ ನಲ್ಲಿ ಸಂಭ್ರಮದ ಓಣಂ ಆಚರಣೆ : ಗಮನ ಸೆಳೆದ ಚಂಡೆವಾದ್ಯ, ಮೆರವಣಿಗೆ*
ಇತ್ತೀಚಿನ ಸುದ್ದಿಗಳು

*ಕಾನ್ ಬೈಲ್ ನಲ್ಲಿ ಸಂಭ್ರಮದ ಓಣಂ ಆಚರಣೆ : ಗಮನ ಸೆಳೆದ ಚಂಡೆವಾದ್ಯ, ಮೆರವಣಿಗೆ*

October 13, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕಣಿವೆ ಅ.13 NEWS DESK : ಓಣಂ ಆಚರಣೆ ಕೇರಳೀಯರ ಪ್ರಮುಖ ಹಬ್ಬವಾಗಿದ್ದು, ಎಲ್ಲರೂ ಒಂದೆಡೆ ಸೇರಿ ಸಂಭ್ರಮಿಸಿ ಸಾಮರಸ್ಯ ಬೆಸೆಯುವ ಹಾಗೂ ಸಂಬಂಧಗಳನ್ನು ಉದ್ದೀಪನಗೊಳಿಸುವ ಆಚರಣೆಯಾಗಿದೆ ಎಂದು ಮಾಜಿ ಸಚಿವ ಅಪ್ಪಚ್ಚು ರಂಜನ್ ಹೇಳಿದರು. ನಾಕೂರು ಶಿರಂಗಾಲ ಗ್ರಾಪಂ ವ್ಯಾಪ್ತಿಯ ಹಿಂದೂ ಮಲೆಯಾಳಿ ಸಮಾಜದ ವತಿಯಿಂದ ಕಾನ್ ಬೈಲ್ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಮೂರನೇ ವರ್ಷದ ಓಣಂ ಆಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿನ ಯಾವುದೇ ಜಾತಿ ಜನಾಂಗದ ಆಚರಣೆಗಳು ಅವರ ಸಂಪ್ರದಾಯಗಳನ್ನು ಬಿಂಬಿಸುವಂತಿರಬೇಕು. ಮನುಷ್ಯ ಮನುಷ್ಯರಲ್ಲಿ ಉತ್ತಮ ಸಂಬಂಧಗಳ ಉದ್ದೀಪನದ ಜೊತೆಗೆ ದೇಶಭಕ್ತಿ ಹಾಗೂ ದೇಶ ಪ್ರೇಮ ಮೊಳಗಿಸಲು ಇಂತಹ ಅಚರಣೆಗಳು ಕಾರಣೀಭೂತವಾಗುತ್ತವೆ ಎಂದರು. ನಾಕೂರು ಶಿರಂಗಾಲ ಗ್ರಾಪಂ ಅಧ್ಯಕ್ಷ ಮಂದೋಡಿ ಜಗನ್ನಾಥ್ ಮಾತನಾಡಿ ಓಣಂ ಆಚರಣೆ ಹಿಂದೂ ಧರ್ಮೀಯ ಎಲ್ಲರನ್ನು ಒಂದೆಡೆ ಸೇರಿಸುವ ಹಾಗೂ ಸಾಮರಸ್ಯ ಉಂಟುಮಾಡುವ ಆಚರಣೆಯಾಗಿದೆ ಎಂದರು. ಹಿಂದೂ ಮಲೆಯಾಳಿ ಸಮಾಜದ ಸಲಹೆಗಾರ ಟಿ.ಆರ್.ವಾಸುದೇವನ್ ಮಾತನಾಡಿ, ಓಣಂ ಆಚರಣೆಯ ಮೂಲಕ ಮಲೆಯಾಳಿ ಭಾಷಿಗರು ಒಂದೆಡೆ ಸೇರಿ ನಮ್ಮ ಆಚಾರ, ವಿಚಾರಗಳು, ಕಲೆ, ಸಂಸ್ಕೃತಿಗಳನ್ನು ಬಿಂಬಿಸುವ ಕೆಲಸವಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಹಿಂದೂ ಮಲೆಯಾಳಿ ಸಮಾಜದ ಅಧ್ಯಕ್ಷ ಕೆ.ಬಿ.ರಾಜ, ಉಪಾಧ್ಯಕ್ಷ ಬಿ.ಇ.ಸತೀಶ್, ಸದಸ್ಯರಾದ ಪ್ರೇಮ, ಅರುಣಕುಮಾರಿ, ಸೀತೆ, ಪಿಡಿಒ ಅಸ್ಮಾ, ಕಾನ್ ಬೈಲ್ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಕೆ.ಮೂರ್ತಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶಾಂತಿ ಬಾಲಕೃಷ್ಣರೈ, ಸೋಮವಾರಪೇಟೆ ತಾಲ್ಲೂಕು ಹಿಂದೂ ಮಲೆಯಾಳಿ ಸಮಾಜದ ಸ್ಥಾಪಕ ಅಧ್ಯಕ್ಷ ಕೆ.ಡಿ.ಪ್ರಕಾಶ್, ಕಾಫಿ ಬೆಳೆಗಾರರಾದ ನೀಲಮ್ಮ ಪೆಮ್ಮಯ್ಯ, ಅಡಿಕೇರಿ ಧರ್ಮಪ್ಪ, ಧರ್ಮಸ್ಥಳ ಯೋಜನೆಯ ಸೇವಾ ಪ್ರತಿನಿಧಿ ಯಶೋಧ, ನಾಕೂರು ಶಿರಂಗಾಲ ಕೊಡವ ಕೂಟದ ಅಧ್ಯಕ್ಷ ಯಶು ತಮ್ಮಯ್ಯ, ಗೌಡ ಸಮಾಜದ ಅಧ್ಯಕ್ಷ ಎಂ.ಎಂ.ಕಾರ್ಯಪ್ಪ, ಬೆಳ್ಳರಿಕಮ್ಮ ದೇವಾಲಯ ಸಮಿತಿ ಅಧ್ಯಕ್ಷ ಕೆ.ಪಿ.ಬೋಪಯ್ಯ, ಮಳೂರು ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಹೆಚ್.ಬಿ.ಗಣೇಶ್, ಕಾಂಗ್ರೆಸ್ ಮುಖಂಡರಾದ ಪಿ.ಎಂ.ಬಿಜು, ಸ್ಯಾಮ್ಸನ್, ಕಾನ್ ಬೈಲ್ ರಾಮಮಂದಿರ ಅಧ್ಯಕ್ಷ ಬಿ.ಜಿ.ನರೇಂದ್ರ, ವಿ.ಕೆ.ಗಂಗಾಧರ್ ಇದ್ದರು. ಇದೇ ಸಂದರ್ಭ ಮಲೆಯಾಳಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಬಳಿಕ ಸಮಾಜದ ಮಕ್ಕಳಿಗೆ ನೃತ್ಯ ಸ್ಪರ್ಧೆ ಹಾಗೂ ಮಹಿಳೆಯರಿಗೆ ಪೂಕಳಂ ಬಿಡಿಸುವ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ತಾಪಂ ಮಾಜಿ ಸದಸ್ಯ ರಾದ ಶಂಕರನಾರಾಯಣ ಸ್ವಾಗತಿಸಿದರು. ಕೆ.ಎಂ.ವಿನೀಶ್ ನಿರೂಪಿಸಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನಾ ಬೆಳಗ್ಗೆ ಕಲ್ಲೂರು ಗ್ರಾಮದ ಬಸವೇಶ್ವರ ದೇವಾಲಯದ ಆವರಣದಿಂದ ಚಂಡೆವಾದ್ಯದೊಂದಿಗೆ ಹಮ್ಮಿಕೊಂಡಿದ್ದ ಓಣಂ ಮೆರವಣಿಗೆಯನ್ನು ಸಮಾಜದ ಅಧ್ಯಕ್ಷ ಕೆ.ಬಿ.ರಾಜ. ಹಾಗೂ ಗ್ರಾಪಂ ಸದಸ್ಯೆ ರಾಧಾಮಣಿ ಉದ್ಘಾಟಿಸಿದರು. ಕಲ್ಲೂರಿನಿಂದ ಹೊರಟ ಮೆರವಣಿಗೆ ಕಾನ್ ಬೈಲು ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ ಸಮಾಪ್ತಿಗೊಂಡಿತು. ಮೆರವಣಿಗೆಯಲ್ಲಿ ಮಲೆಯಾಳಿ ಸಮಾಜದ ಮಹಿಳೆಯರು,ಮಕ್ಕಳು ಹಾಗೂ ಪುರುಷರು ಸಾಂಪ್ರದಾಯಿಕ ಉಡುಗೆ ತೊಟ್ಟು ಹೆಜ್ಜೆ ಇಟ್ಟರು. ಕಾರ್ಯಕ್ರಮದಲ್ಲಿ ಮಾವೇಲಿ ಛದ್ಮವೇಶಧಾರಿಯಾಗಿ ಕೇರಳದ ಮಟ್ಟಾನೂರಿನ ಅಭಿ ಗಮನ ಸೆಳೆದರು. ಕಾರ್ಯಕ್ರಮಕ್ಕೂ ಮುನ್ನಾ ಶಾಲಾ ಕೊಠಡಿಯಲ್ಲಿ ಸಮಾಜದ ಮಹಿಳೆಯರು ಹಾಗೂ ಮಕ್ಕಳು ಶ್ರದ್ಧಾಭಕ್ತಿಯಿಂದ ಬಿಡಿಸಿದ್ದ ಪೂಕಳಂ ನೋಡುಗರ ಗಮನ ಸೆಳೆಯಿತು. ಕೇರಳದ ರಾಧಾಕೃಷ್ಣನ್ ತಂಡದವರು ಸಿದ್ದಪಡಿಸಿದ್ದ ಓಣಂ ಸದ್ಯ ನೆರೆದಿದ್ದ ಸಮಸ್ತರ ಬಾಯಿ ರುಚಿ ಇಮ್ಮಡಿಗೊಳಿಸಿತು.

 

Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರ ಕೊಡಗು ಹೆಗ್ಗಡೆ ಕ್ಷೇಮಾಭಿವೃದ್ಧಿ ಸಂಘದ ಮಹಾಸಭೆ : ಸಾಧಕರಿಗೆ ಸನ್ಮಾನ*
Next Article *ಶೂ ಎಸೆದ ಪ್ರಕರಣ : ಮಡಿಕೇರಿಯಲ್ಲಿ ಪ್ರಗತಿಪರರಿಂದ ಪ್ರತಿಭಟನೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.