
ಮಡಿಕೇರಿ ಅ.13 NEWS DESK : ಬಸವನಹಳ್ಳಿ ಪ್ರೌಢ ಶಾಲೆಯ ಮೈದಾನದಲ್ಲಿ ಸ್ಥಳೀಯ ಯುವಕರಿಂದ ಸ್ವಚ್ಛತಾ ಶ್ರಮದಾನ ನಡೆಯಿತು. ಕುಶಾಲನಗರದ ಬಸವನಹಳ್ಳಿ ಪ್ರೌಢ ಶಾಲೆಯ ಮೈದಾನ ನಿರ್ವಹಣೆ ಇಲ್ಲದೆ ಮೈದಾನದ ತುಂಬಾ ಹುಲ್ಲು ಗಿಡಗಂಟಿಗಳು ಬೆಳೆದು ಶಾಲಾ ಮಕ್ಕಳು ಮೈದಾನದಲ್ಲಿ ಆಟವಾಡಲು ಸಾಧ್ಯವಾಗುತ್ತಿರಲಿಲ್ಲ. ಇದನ್ನು ಮನಗಂಡ ಗ್ರಾಮದ ಯುವಕರು ಸುಮಾರು 3 ಏಕರೆ ಗಿಂತ ಅಧಿಕವಿರುವ ಮೈದಾನದಲ್ಲಿ ಬೆಳೆದಿದ್ದ ಹುಲ್ಲು ಮತ್ತು ಗಿಡ ಗಂಟಿಗಳನ್ನು ತಮ್ಮ ಸ್ವಂತ ಖರ್ಚಿನಿಂದ ವೀಡ್ ಕಟರ್ ಮೂಲಕ ಸ್ವಚ್ಛಗೊಳಿಸಿದರು. ಸ್ಥಳೀಯ ಯುವಕರ ಉತ್ತಮ ಕಾರ್ಯಕ್ಕೆ ಶಾಲಾ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.









