
ಮಡಿಕೇರಿ ಅ.17 NEWS DESK : ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವತಿಯಿಂದ ಕೈಗೊಳ್ಳಲಾದ ಸ್ವಚ್ಛ ಕೊಡಗು – ಸುಂದರ ಕೊಡಗು ಸ್ವಚ್ಛತಾ ಅಭಿಯಾನದ ಸಂದಭ೯ ಜಿಲ್ಲೆಯಾದ್ಯಂತ 200 ಟನ್ ತ್ಯಾಜ್ಯ ಸಂಗ್ರಹವಾಗಿದ್ದು, ಮೈಸೂರಿನ ತ್ಯಾಜ್ಯ ವಿಲೇವಾರಿ ಸಂಗ್ರಹಾಗಾರ ಸೇರಿದಂತೆ ಕೊಡಗು ಜಿಲ್ಲೆಯ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಇವುಗಳನ್ನು ರವಾನಿಸಲಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾಯ೯ಪ್ಪ ಮಾಹಿತಿ ನೀಡಿದ್ದಾರೆ. ಸ್ವಚ್ಛ ಕೊಡಗು – ಸುಂದರ ಕೊಡಗು ಅಭಿಯಾನದಲ್ಲಿ ಜಿಲ್ಲೆಯ 30 ಸಾವಿರದಷ್ಟು ಸ್ವಚ್ಛತಾ ಕಾಯ೯ಕತ೯ರಿಗೆ 33,800 ಕೈಕವಚ ಮತ್ತು 9,200 ತ್ಯಾಜ್ಯ ಸಂಗ್ರಹಣಾ ಬ್ಯಾಗ್ ಗಳನ್ನು ವಿತರಿಸಲಾಗಿದೆ. ಜಿಲ್ಲೆಯ 178 ಸ್ಥಳಗಳಲ್ಲಿ 330 ಕ್ಕೂ ಅಧಿಕ ಸಂಘಸಂಸ್ಥಗಳಿಗೆ ಸೇರಿದ ಅಂದಾಜು 30 ಸಾವಿರದಷ್ಟು ಜನರು ಸ್ವಯಂ ಪ್ರೇರಣೆಯಿಂದ ಸ್ವಚ್ಛತಾ ರಾಯಬಾರಿಗಳಾಗಿ ಜಿಲ್ಲೆಯಾದ್ಯಂತ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು ಎಂದು ದಿನೇಶ್ ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಪ್ರಯತ್ನದಿಂದ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಸಹಕಾರ ಪಡೆದು 17 ಸಂಗ್ರಹ ಸಂಗ್ರಹಣ ಕೇಂದ್ರಗಳಿಂದ ಪಡೆದುಕೊಂಡ ತ್ಯಾಜ್ಯವನ್ನು ಜಿಲ್ಲೆಯ 145 ತ್ಯಾಜ್ಯ ಸಂಗ್ರಹಣಾ ಮಾಗ೯ಗಳಿಂದ ಟ್ರಕ್ ಮೂಲಕ ಪಡೆದು ಕ್ಲೀನ್ ಕೂಗ್೯ ಸಂಸ್ಥೆಯ ಸಹಕಾರದೊಂದಿಗೆ ಮೈಸೂರಿಗೆ ರವಾನಿಸಲಾಗಿದೆ. ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂಥರ್ ಗೌಡ ಅವರ ಸಹಕಾರದಲ್ಲಿ ಮೈಸೂರಿಗೆ ಕಳುಹಿಸಲಾಗಿದೆ ಎಂದು ದಿನೇಶ್ ತಿಳಿಸಿದ್ದಾರೆ. ಇದು ಕೇವಲ 1 ದಿನಕ್ಕೆ ಸೀಮಿತವಾದ ಅಭಿಯಾನ ಆಗಬಾರದು. ಸ್ವಚ್ಛ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿಯೂ ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವಿವಿಧ ಕಾಯ೯ಯೋಜನೆ ಹಮ್ಮಿಕೊಳ್ಳಲಿದೆ. ಸ್ವಚ್ಚ ಕೊಡಗು ಸುಂದರ ಕೊಡಗು ಅಭಿಯಾನಕ್ಕೆ ಜಿಲ್ಲೆಯಾದ್ಯಂತ ನಿರೀಕ್ಷೆಗೂ ಮೀರಿದ ಸ್ಪಂದನ ದೊರಕಿದ್ದು ಸಮಧಾನ ತಂದಿದೆ ಎಂದು ದಿನೇಶ್ ಹೇಳಿದರು. ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಈ ಅಭಿಯಾನದ ಮೂಲಕ ಕೊಡಗಿನಲ್ಲಿ ಜವಬ್ದಾರಿಯುತ ಪ್ರವಾಸೋದ್ಯಮಕ್ಕೆ ಮತ್ತಷ್ಟು ಒತ್ತು ನೀಡಿದೆ ಎಂದೂ ಅವರು ಹೇಳಿದರು. :: ಸ್ವಚ್ಛ ಕೊಡಗು – ಸುಂದರ ಕೊಡಗು :: ಸ್ವಚ್ಛ ಕೊಡಗು – ಸುಂದರ ಕೊಡಗು ಎಂಬ ಹೆಸರನ್ನು ಪತ್ರಕತ೯ ಅನಿಲ್ ಹೆಚ್.ಟಿ. ನೀಡಿದ್ದರು. ಅಂತೆಯೇ ಅಭಿಯಾನಕ್ಕೆ ಸಂಬಂಧಿಸಿದಂತೆ ಅನಿಲ್ ಅವರು ಸಾಮಾಜಿಕ ಜಾಲತಾಣದಲ್ಲಿ ಕೈಗೊಂಡ ಪ್ರಚಾರಕ್ಕೆ ಜಿಲ್ಲೆಯ ಹಲವೆಡೆಗಳಿಂದ ವಿವಿಧ ಭಾಷೆಗಳಲ್ಲಿ 58 ವಿಡಿಯೋಗಳನ್ನು ನಟನಟಿಯರು, ಪರಿಸರಪ್ರೇಮಿಗಳು, ಸಾವ೯ಜನಿಕರು, ವಿದ್ಯಾಥಿ೯ಗಳು ಕಳುಹಿಸಿದ್ದು ಕೂಡ ಕೇವಲ 3 ದಿನಗಳಲ್ಲಿಯೇ ರೂಪುಗೊಂಡ ಈ ಅಭಿಯಾನದ ಸಫಲತೆಗೆ ಕಾರಣಗಳಲ್ಲೊಂದಾಯಿತು ಎಂದು ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಪ್ರಧಾನ ಕಾಯ೯ದಶಿ೯ ನಾಸಿರ್ ಅಹಮ್ಮದ್ ಶ್ಲಾಘಿಸಿದ್ದಾರೆ. :: ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ :: ಸ್ವಚ್ಚ ಕೊಡಗು – ಸುಂದರ ಕೊಡಗು ಅಭಿಯಾನ ಯಶಸ್ವಿಯಾದ ಸಂಬಂಧಿತ ಜಿಲ್ಲಾಧಿಕಾರಿ ವೆಂಕಟರಾಜಾ ಅವರು ಈ ಯಶಸ್ವಿಗೆ ಕಾರಣರಾ ಕೊಡಗಿನ ಸವ೯ ಜನತೆಯನ್ನು ಶ್ಲಾಘಿಸಿದ್ದಾರೆ. ಇಂಥ ಅಭಿಯಾನವನ್ನು ಕೆಲವೇ ದಿನಗಳಲ್ಲಿ ಆಯೋಜಿಸಿ ಜಿಲ್ಲೆಯಲ್ಲಿ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಿದ ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ನ ಸವ೯ ಸದಸ್ಯರ ಶ್ರಮವನ್ನೂ ಜಿಲ್ಲಾಧಿಕಾರಿ ಅಭಿನಂದಿಸಿದ್ದಾರೆ.









