ಮಡಿಕೇರಿ ಅ.18 NEWS DESK : ಪ್ರಸಕ್ತ (2025-26) ಸಾಲಿಗೆ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ 2025-26ನೇ ಸಾಲಿನಲ್ಲಿ ರೈತರ ಮಕ್ಕಳಿಗೆ 3 ತಿಂಗಳ ಜೇನುಗಾರಿಕೆ ತರಬೇತಿ ಕಾರ್ಯಕ್ರಮವು 2025 ರ ನವೆಂಬರ್, 04 ರಿಂದ 2026 ರ ಫೆಬ್ರವರಿ, 03 ರವರೆಗೆ (ಪುರುಷ ಅಭ್ಯರ್ಥಿಗಳು ಮಾತ್ರ) ನಡೆಯಲಿದೆ. ಈ ಸಂಬಂಧ ಕೊಡಗು ಜಿಲ್ಲೆಯಿಂದ ಒಂದು ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅವಕಾಶವಿದ್ದು, (ಸಾಮಾನ್ಯ ವರ್ಗ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅ.23 ರಿಂದ 27 ರವರೆಗೆ ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ (ರಾಜ್ಯ ವಲಯ), ಮಡಿಕೇರಿ/ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರ ಅಥವಾ ಇಲಾಖಾ ವೆಬ್ಸೈಟ್: https://horticulturedir.karnataka.gov.in ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಅಕ್ಟೋಬರ್, 30 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್ಎಸ್ಎಲ್ಸಿ ಅಂಕಪಟ್ಟಿ, ತಂದೆ/ ತಾಯಿ/ ಪೋಷಕರ ಹೆಸರಿನಲ್ಲಿರುವ ಜಮೀನಿನ ಪಹಣಿ(ಖಖಿಅ), ತಂದೆ/ ತಾಯಿಯವರ ಒಪ್ಪಿಗೆ ಪತ್ರ ಇತ್ಯಾದಿ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ಈ ಕಚೇರಿಗೆ ಖುದ್ದು ಸಲ್ಲಿಸಬೇಕು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು(ರಾಜ್ಯವಲಯ) ತಿಳಿಸಿದ್ದಾರೆ.










