Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಮೀಕ್ಷೆ ವಿಸ್ತರಣೆಯ ನೆಪದಲ್ಲಿ ಒತ್ತಡ : ಅಂಗನವಾಡಿ ಕಾರ್ಯಕರ್ತರ ಸಂಘಟನೆ ಆರೋಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಮೀಕ್ಷೆ ವಿಸ್ತರಣೆಯ ನೆಪದಲ್ಲಿ ಒತ್ತಡ : ಅಂಗನವಾಡಿ ಕಾರ್ಯಕರ್ತರ ಸಂಘಟನೆ ಆರೋಪ*

ಅಕ್ಟೋಬರ್ 20, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಅ.20 NEWS DESK : ಸಮೀಕ್ಷೆ ವಿಸ್ತರಣೆಯ ನೆಪದಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ಸಲ್ಲದ ಒತ್ತಡ ಹೇರುತ್ತಿರುವುದನ್ನು ಜಿಲ್ಲಾ ಅಂಗನವಾಡಿ ಕಾರ್ಯಕರ್ತರ ಸಂಘಟನೆ ಖಂಡಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಅಂಗನವಾಡಿ ಕಾರ್ಯಕರ್ತರ ಅಧ್ಯಕ್ಷೆ ಸುಮಿತ್ರ ಸಮೀಕ್ಷೆಯಿಂದ ಕಾರ್ಯಕರ್ತರಿಗೆ ಆಗುತ್ತಿರುವ ಮಾನಸಿಕ ಒತ್ತಡದ ಬಗ್ಗೆ ಅಳಲು ತೋಡಿಕೊಂಡರು. ಪ್ರತಿ ಬಾರಿಯೂ ಅಂಗನವಾಡಿ ಕಾರ್ಯಕರ್ತರು ಸರ್ಕಾರದ ಒಂದಲ್ಲ ಒಂದು ಯೋಜನೆಗಳ ಬಗ್ಗೆ ಜನರಿಗೆ ತಲುಪಿಸುವ ಮತ್ತು ಸರ್ವೆ ಕಾರ್ಯ ಮಾಡುವ ವ್ಯವಸ್ಥೆಯನ್ನು ಪೂರಕವಾಗಿ ನಡೆಸುತ್ತಿದ್ದಾರೆ. ತಮ್ಮ ಹಲವಾರು ಜವಾಬ್ದಾರಿಯುತ ಕರ್ತವ್ಯಗಳ ನಡುವೆ ಇತರ ವ್ಯವಸ್ಥೆಗಳ ಬಗ್ಗೆಯು ಗಮನಹರಿಸಲಾಗುತ್ತಿದೆ ಆದರೂ, ಕಾರ್ಯಕರ್ತರ ಸಂಕಷ್ಟಗಳಿಗೆ ಪರಿಹಾರ ಸಿಗುತ್ತಿಲ್ಲ ಎಂದು ಆರೋಪಿಸಿದರು. ತೀವ್ರ ನಿಧಾನ ಗತಿ ಸಮೀಕ್ಷೆಯಿಂದ ಪ್ರಮಾಣವನ್ನು ಗುರಿಯತ್ತ ಸಾಗಿಸುವ ನಿಟ್ಟಿನಲ್ಲಿ ವಿಸ್ತರಣೆಗೊಂಡ ಸಮೀಕ್ಷೆಗೆ ಸರ್ಕಾರದ ಆದೇಶವಿಲ್ಲದಿದ್ದರೂ, ಅಂಗನವಾಡಿ ಕಾರ್ಯಕರ್ತರನ್ನ ಒತ್ತಾಯ ಪೂರಕವಾಗಿ ಸಮೀಕ್ಷೆ ನಡೆಸಲು ಹೇಳುತ್ತಿರುವುದು ಖಂಡನೀಯ ಎಂದರು. ಮೇಲಾಧಿಕಾರಿಗಳ ಸೂಚನೆಯನ್ನು ಉಲ್ಲೇಖಿಸಿ ಪೊನ್ನಂಪೇಟೆ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಇಲಾಖಾಧಿಕಾರಿ ಕಾರ್ಯಕರ್ತರ ಮೇಲೆ ಒತ್ತಡ ಹೇರುತ್ತಿದ್ದಾರೆ. ಕಳೆದ ಒಂದು ತಿಂಗಳನಿಂದ ಸಮೀಕ್ಷೆ ನಡೆಯುತ್ತಿದ್ದು 19 ರಂದು ಶಿಕ್ಷಕರನ್ನು ಸಮೀಕ್ಷೆ ಕಾರ್ಯದಿಂದ ಬಿಡುಗಡೆಗೊಳಿಸಿ ಇತರ ಸಿಬ್ಬಂದಿಗಳಿಂದ ಸಮೀಕ್ಷೆ ಪೂರ್ಣಗೊಳಿಸುವ ಆದೇಶವನ್ನು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ನೀಡಿದ್ದಾರೆ. ಆದರೆ ಎಲ್ಲಿಯೂ ಮುಖ್ಯಮಂತ್ರಿಗಳು ಅಂಗನವಾಡಿ ಕಾರ್ಯಕರ್ತರನ್ನ ಬಳಸಿಕೊಳ್ಳುವಂತೆ ಆದೇಶ ನೀಡಿರುವುದಿಲ್ಲ. ಆದರೂ, ಮೇಲಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗೆ ಕಾರ್ಯಕರ್ತರನ್ನು ಸಮೀಕ್ಷೆಗೆ ಬಳಸಿಕೊಳ್ಳುವಂತೆ ಒತ್ತಡ ಹೇರುತ್ತಿದ್ದಾರೆ. ಈ ನಡೆಯಿಂದ ಮಾನಸಿಕವಾಗಿ ಕಾರ್ಯಕರ್ತರು ಕುಗ್ಗಿ ಹೋಗುತ್ತಿದ್ದಾರೆ ಎಂದು ತಮ್ಮ ಅಳಲನ್ನು ತೋಡಿಕೊಂಡರು. ನಮ್ಮದಲ್ಲದ ತಪ್ಪಿಗೆ ಯಾಕೆ ಶಿಕ್ಷೆ, ಹಿಂದುಳಿದ ವರ್ಗಗಳ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ ಶುರುವಾಗಿ ಸರಿ ಸುಮಾರು ತಿಂಗಳಾಯಿತು. ಕೊನೆ ಎರಡು ದಿನಗಳಲ್ಲಿ ಅಂಗನವಾಡಿ ಮಕ್ಕಳನ್ನು ಸೇರ್ಪಡೆ ಮಾಡಬೇಕು ಅನ್ನೋ ಉದ್ದೇಶದಿಂದ ಅಂಗನವಾಡಿ ಶಿಕ್ಷಕರಿಗೆ ತೊಂದರೆ ನೀಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಯಾವುದೇ ಗೌರವ ಸಂಭಾವನೆ ಇಲ್ಲದೆ ರಜಾ ದಿನಗಳಲ್ಲಿಯೂ ಕೆಲಸ ಮಾಡಿ ಎಂದರೆ ಅದನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಈ ಮೊದಲೇ ಅಂಗನವಾಡಿ ಶಿಕ್ಷಕರಿಗೆ ಸಮೀಕ್ಷೆ ಜವಾಬ್ದಾರಿ ನೀಡಿದ್ದರೆ ಎಲ್ಲ ಕಾರ್ಯವನ್ನು ಮುಗಿಸುತ್ತಿದ್ದವು. ಕೊನೆಗಳಿಗೆಯ ದಿನಗಳಲ್ಲಿ ಅಂಗನವಾಡಿ ಕಾರ್ಯಕರ್ತರು ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಮೌಖಿಕವಾಗಿ ಹೇಳುತ್ತಿರುವುದು ಎಷ್ಟರಮಟ್ಟಿಗೆ ನ್ಯಾಯ ಪರವಾಗಿದೆ. ಈ ವ್ಯವಸ್ಥೆಯ ಬಗ್ಗೆ ತೀವ್ರ ಆಕ್ಷೇಪವಿದೆ ಎಂದು ಹೇಳಿದರು. ದೊಡ್ಡ ಮೊತ್ತದ ವೇತನ ಪಡೆದುಕೊಳ್ಳುವ ಶಿಕ್ಷಕರು ಸಮೀಕ್ಷೆಗೆ ಒಂದು ಮನೆಗೆ ನೂರು ರೂಪಾಯಿಯಂತೆ ಮತ್ತು ಗೌರವಧನವಾಗಿ ಐದು ಸಾವಿರ ರೂಪಾಯಿ ಪಡೆದುಕೊಂಡಿದ್ದಾರೆ. ಆದರೆ, ಅಂಗಾರವಾಡಿ ಶಿಕ್ಷಕರಿಗೆ ಗೌರವಧನವನ್ನು ನೀಡದೆ ಉಚಿತವಾಗಿ ದುಡಿಸಿಕೊಳ್ಳುವ ಅಧಿಕಾರಿಗಳ ಚಿಂತನೆ ಪಡುತ್ತಿರುವುದು ಶೋಷಣೆಯಾಗಿದೆ ಎಂದು ಆರೋಪಿಸಿದರು. ಆರು ವರ್ಷದ ಒಳಗಿನ ಮಕ್ಕಳ ಮಾಹಿತಿ ನೀಡಬೇಕೆಂದು ತಿಳಿಸಲಾಗಿದೆ. ಅವುಗಳ ಮಾಹಿತಿಯನ್ನು ಪೂರ್ಣ ಪ್ರಮಾಣದಲ್ಲಿ ಒದಗಿಸಿಕೊಡುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇವೆ. ಆದರೆ ಶಿಕ್ಷಕರು ಉಳಿಸಿದ ಸಮೀಕ್ಷೆಯನ್ನು ಪೂರ್ಣಗೊಳಿಸಲು ಕಷ್ಟವಾಗಲಿದೆ ಎಂದು ಹೇಳಿದರು. ಈ ವಿಚಾರವಾಗಿ ಅಧಿಕಾರಿಗಳು ವಿನಾಕಾರಣವಿಲ್ಲದೆ ನಮಗೆ ತೊಂದರೆ ನೀಡುತ್ತಿದ್ದಾರೆ. ಹೀಗೆ ಮುಂದುವರೆದರೆ ನಾವು ಪ್ರತಿಭಟನೆಯ ಹಾದಿ ತುಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಒಂದು ಪಕ್ಷ ಸಮೀಕ್ಷೆ ನಡೆಸಲು ಸರ್ಕಾರ ನಮಗೆ ಗೌರವ ಸಂಭಾವನೆ ಮತ್ತು ಮನೆಗೆ ಇಂತಿಷ್ಟು ಎಂದು ಹಣ ನಿಗದಿಪಡಿಸಿದರೆ ಸಮೀಕ್ಷೆಗೆ ಸಹಕಾರ ನೀಡುವ ಆಲೋಚನೆ ಮಾಡುತ್ತೇವೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ, ಕಾರ್ಯದರ್ಶಿ ನಳಿನಾಕ್ಷಿ, ಕೋಶಾಧಿಕಾರಿ ರಾಜೇಶ್ವರಿ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.