
ಮಡಿಕೇರಿ ಅ.21 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲೆಯ ಹಿರಿಯ ನಾಗರಿಕರಿಗೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕವಿಗೋಷ್ಠಿ ಏರ್ಪಡಿಸಿದೆ. ಕನ್ನಡ ಭಾಷೆ, ಸಾಹಿತ್ಯದ ಬಗ್ಗೆ ಅಪಾರವಾಗಿ ಅನುಭವಿರುವ ಹಿರಿಯ ನಾಗರಿಕರು ಕವಿಗೋಷ್ಠಿಯಲ್ಲಿ ಭಾಗವಹಿಸಬಹುದಾಗಿದೆ. ಅವರು ತಮ್ಮ ಸ್ವರಚಿತ ಕವನವನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡತಕ್ಕದ್ದು. ಕವನಗಳನ್ನು ಪರಿಶೀಲಿಸಿ ಆಯ್ಕೆಗೊಳಿಸಲು ಸಮಿತಿ ರಚಿಸಲಾಗುವುದು. ಕವನ 16 ಗೆರೆಗಳನ್ನು ಮೀರಿರಬಾರದು. ಒಬ್ಬರು ಒಂದು ಕವನವನ್ನು ಮಾತ್ರ ಕಳುಹಿಸಬಹುದು ಕನ್ನಡ ಭಾಷೆಯ ಚುಟುಕು ಕವನ(4 ಸಾಲಿನ ಗರಿಷ್ಠ 4 ಕವನ) ಗಳನ್ನೂ ಕಳುಹಿಸಬಹುದು. ಲಕೊಟೆಯ ಮೇಲೆ *ರಾಜ್ಯೋತ್ಸವ ಹಿರಿಯರ ಕವಿಗೋಷ್ಠಿ*ಗೆ ಎಂದು ಬರೆಯತಕ್ಕದ್ದು. ಕೊಡಗು ಜಿಲ್ಲೆಯ ಹಿರಿಯ ನಾಗರಿಕರಿಗೆ ಮಾತ್ರ ಅವಕಾಶ. ಕವನಗಳನ್ನು ಕಳುಹಿಸಲು ಕಡೆಯ ದಿನಾಂಕ 05.11.2025. ಈ ಕೆಳಗಿನ ಮೊಬೈಲ್ ಗಳಿಗೆ ವಾಟ್ಸಪ್ ಮೂಲಕವೂ ಕಳುಹಿಸಬಹುದು. ಕವನದ ಜೊತೆಗೆ ಆಧಾರ್ ಕಾರ್ಡ್ ಅಥವಾ ಹಿರಿಯ ನಾಗರಿಕ ದೃಢೀಕರಣ ಪತ್ರದ ನಕಲನ್ನು ಕಳುಹಿಸಿತಕ್ಕದ್ದು.
ಕಳುಹಿಸಬೇಕಾದ ವಿಳಾಸ :
ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್ ಸಂಖ್ಯೆ
ಕೇಶವ ಕಾಮತ್-94483 46276,
ಮುನೀರ್ ಅಹ್ಮದ್-9113208330.
ರೇವತಿ ರಮೇಶ್- 9663254829
ಇಲ್ಲಿಗೆ ದಿನಾಂಕ 05.11.2025 ರ ಒಳಗಾಗಿ ತಲುಪಿಸಬೇಕೆಂದು ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








