ಮಡಿಕೇರಿ ಅ.22 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅನುದಾನದಲ್ಲಿ ಬೇಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಡಮಕ್ಕಿ-ಬೂದಿಮಾಳ ರಸ್ತೆಗೆ ರೂ.15 ಲಕ್ಷ ಅನುದಾನದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದೆ. ಇದರಲ್ಲಿ ರೂ.10 ಲಕ್ಷ ಹಾಗು ರೂ.5 ಲಕ್ಷ ಅನುದಾನದಲ್ಲಿ 2 ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದೆ. ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಅನುದಾನ ಒದಗಿಸಿದ ಶಾಸಕ ಎ.ಎಸ್ ಪೊನ್ನಣ್ಣ ಹಾಗೂ ಇದಕ್ಕೆ ಸಹಕರಿಸಿದ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಗ್ಯಾರೆಂಟಿ ಯೋಜನೆ ಸದಸ್ಯ ಟಿ.ಕೆ.ಹರೀಶ ಮತ್ತು ಟಿ.ಪಿ.ಪುರುಷೋತ್ತಮ , ಪಿ.ಬಿ.ಸುರೇಶ್, ಶಶಿ, ರವಿ, ಹರೀಶ, ಮನೋಹರ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಹೆಗ್ಗಳ-ಎಡಮಕ್ಕಿ-ಬೂದಿಮಾಳ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು.











