ಅಂಬಾಲಾ ಅ.29 NEWS DESK : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರಿಯಾಣದ ಅಂಬಾಲಾ ವಾಯುಪಡೆ ನೆಲೆಯಿಂದ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ವಾಯುಪಡೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಕೂಡ ಉಪಸ್ಥಿತರಿದ್ದರು. 2023 ರಲ್ಲಿ, ರಾಷ್ಟ್ರಪತಿ ಮುರ್ಮು ಅವರು ಅಸ್ಸಾಂನ ತೇಜ್ಪುರ ವಾಯುಪಡೆ ನಿಲ್ದಾಣದಲ್ಲಿ ಭಾರತೀಯ ವಾಯುಪಡೆಯ ಸುಖೋಯ್-30MKI ಫೈಟರ್ ಜೆಟ್ನಲ್ಲಿ ಹಾರಾಟ ನಡೆಸಿದ್ದರು. ಬ್ರಹ್ಮಪುತ್ರ ನದಿ ಮತ್ತು ತೇಜ್ಪುರ ಕಣಿವೆಯ ಮೇಲೆ ಹಾರಾಟ ನಡೆಸಿದ್ದರು, ನಂತರ ಸುರಕ್ಷಿತವಾಗಿ ನೆಲೆಗೆ ಮರಳಿದ್ದರು. ಈ ಬಾರಿ ಅಂಬಾಲಾ ವಾಯುನೆಲೆಯ ಸುತ್ತಲೂ ಅವರು ಹಾರಾಟ ನಡೆಸಲಿದ್ದಾರೆ. ಅವರು ಫೈಟರ್ ಪ್ಲೇಟ್ ಸೂಟ್ ಧರಿಸಿ ವಿಮಾನದಲ್ಲಿ ಕುಳಿತಿದ್ದು ಎಲ್ಲರ ಗಮನ ಸೆಳೆದಿತ್ತು.











