
ವಿರಾಜಪೇಟೆ ನ.1 NEWS DESK : ಮೈಸೂರಿನ ಟೆರೆಷಿಯನ್ ಕಾಲೇಜಿನಲ್ಲಿ ಮೈಸೂರಿನ ವಿ.ಎನ್. ಯೋಧ ಮಾರ್ಷಲ್ ಆರ್ಟ್ಸ್ ಅಕಾಡೆಮಿ ವತಿಯಿಂದ ನಡೆಸಲಾದ ಐದನೇ ರಾಷ್ಟ್ರೀಯ ಮುಕ್ತ ಕರಾಟೆ ಪಂದ್ಯಾಳಿಯಲ್ಲಿ ವಿರಾಜಪೇಟೆಯ ಆರ್ಜಿ ಗ್ರಾಮದ ಪೆರುಂಬಾಡಿಯ ಜೆನ್ ಸಿಟೋರಿಯೋ ಸ್ಕೂಲ್ ಆಫ್ ಇಂಡಿಯಾ ಕರಾಟೆ ಶಾಲೆಯ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಬಾಲಕರ ಕುಮಿತೆ ವಿಭಾಗದಲ್ಲಿ ಧೃತಿಕ್ ಡಿ., ಕಾರ್ತಿಕ್ ಕೆ.ಹೆಚ್. ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಪ್ರಜನ್ ಎಸ್.ಬಿ, ಗಗನ್ ಎಸ್., ಕೃಶಾಂಕ್ ಎಂ.ಎಸ್., ಪರಿಣಿತ್ ಎ.ಟಿ, ಕೃತಿಕ್ ಎಂ.ದ್ವಿತೀಯ ಸ್ಥಾನಗಳಿಸಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ. ಡೆನಿಸ್ ಪಿ.ಎಲ್., ಅನುರಾಗ ಟಿ.ಎಸ್ ತೃತೀಯ ಸ್ಥಾನ ಗಳಿಸಿ ಕಂಚಿನ ಪದಕ ಪಡೆದುಕೊಂಡಿದ್ದಾರೆ. ಬಾಲಕಿಯರ ಕುಮಿತ್ತೆ ವಿಭಾಗದಲ್ಲಿ ಧನುಶ್ರೀ ಆರ್. ನಿರಂಜನ ಎಂ.ಎಚ್. ದ್ವಿತೀಯ ಸ್ಥಾನ ಗಳಿಸಿ ಬೆಳ್ಳಿ ಪದಕ ಪಡೆದುಕೊಂಡರೆ, ಬಿಂದ್ಯಾ ತೃತೀಯ ಸ್ಥಾನ ಗಳಿಸಿ ಕಂಚಿನ ಪದಕ ಪಡೆದುಕೊಂಡಿದ್ದಾರೆ. ಸೋಹಾನ್, ಆದರ್ಶ್, ಸಮೀತ್, ಗಾನವಿ ಹರಿzಹಿವರುಗಳು ಸಮಾಧಾನಕರ ಬಹುಮಾನ ಪಡೆದುಕೊಂಡಿದ್ದಾರೆ. ಇವರಿಗೆ ಸೆನ್ಸಾಯಿ ಶಿವಪ್ಪ ಅವರು ತರಬೇತಿ ನೀಡಿದ್ದಾರೆ.









