
ಮಡಿಕೇರಿ ನ.1 NEWS DESK : ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಜಿಲ್ಲಾ ಮಟ್ಟದ ಆಟೋಟ ಹಾಗೂ ಕ್ರೀಡಾಸ್ಪರ್ಧೆಗಳಲ್ಲಿ ಸ್ಪರ್ದಿಸಿದ್ದ ಮಡಿಕೇರಿಯ ಸಂತ ಜೋಸೆಫರ ಕಾಲೇಜಿನ ಈ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ಕೆ.ಯು.ಪ್ರಜ್ಞಾ-ಟ್ರಿಪಲ್ ಜಂಪ್, ಐಝಾನ್ ವಸಿಂ – ಟೇಬಲ್ ಟೆನಿಸ್ ಮತ್ತು ಅದಿತ್ರೀ ಕೆದಂಬಾಡಿ ಚೇತನ್ – ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ವಿದ್ಯಾರ್ಥಿ ವೃಂದ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಶುಭ ಹಾರೈಸಿದ್ದಾರೆ.









