
ಮಡಿಕೇರಿ ನ.1 NEWS DESK : ಮಡಿಕೇರಿ ತಾಲ್ಲೂಕು ಚೆಟ್ಟಿಮನಿ ಭಾಗದಲ್ಲಿ ಪೂವ್ವಲಮಾನಿ ಭಾಗದಲ್ಲಿ ಆಯೋಜಿಸಿದ 4ನೇ ವರ್ಷದ ಶಾರದ ಪೂಜಾ ಹಾಗೂ ಕಿರು ಕ್ರೀಡಾಕೂಟವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಪೂವ್ವಲಮಾನಿಯ ನಾಗರಿಕ ಸೇವಾ ಸಮಿತಿಯವರು ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ಶಾರದ ಪೂಜೆಯ ಪ್ರಸಾದ ಸ್ವೀಕರಿಸಿದ ಬಳಿಕ, ಕಿರು ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಕುಂದಚೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ದಿನೇಶ್, ಸುರೇಂದ್ರ, ಚೆಟ್ಟಿಮನಿ ವಲಯ ಅಧ್ಯಕ್ಷರು ಕೀರ್ತಿ ಉತ್ತಪ್ಪ, ಕುಂದಚೇರಿ ಗ್ರಾಮ ಪಂಚಾಯಿತಿ ಸದಸ್ಯರು ಹ್ಯಾರೀಶ್, ಸುನಿಲ್ ಪತ್ ರಾವ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.









