Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಓದು ಮುಂದುವರಿಸಲು ಕಷ್ಟವಾದ ಕುಟುಂಬಗಳು ಹಿಂಜರಿಕೆಯಿಲ್ಲದೆ ಸಹಾಯ ಕೇಳಬೇಕು : ನಾನು ಸಹಾಯ ಮಾಡುತ್ತೇನೆ : ಶಾಸಕ ಡಾ.ಮಂತರ್‌ಗೌಡ ಭರವಸೆ*
ಇತ್ತೀಚಿನ ಸುದ್ದಿಗಳು

*ಓದು ಮುಂದುವರಿಸಲು ಕಷ್ಟವಾದ ಕುಟುಂಬಗಳು ಹಿಂಜರಿಕೆಯಿಲ್ಲದೆ ಸಹಾಯ ಕೇಳಬೇಕು : ನಾನು ಸಹಾಯ ಮಾಡುತ್ತೇನೆ : ಶಾಸಕ ಡಾ.ಮಂತರ್‌ಗೌಡ ಭರವಸೆ*

November 2, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಸೋಮವಾರಪೇಟೆ NEWS DESK ನ.2 : ವಿದ್ಯೆ ಎಂಬುವುದು ಅಪೂರ್ವ ಸಂಪತ್ತು, ವಿದ್ಯಾದಾನ ಮಹಾನ್ ಕಾರ್ಯ, ಓದು ಮುಂದುವರಿಸಲು ಕಷ್ಟವಾದ ಕುಟುಂಬಗಳು ಹಿಂಜರಿಕೆಯಿಲ್ಲದೆ ಸಹಾಯ ಕೇಳಬೇಕು, ನಾನು ಸಹಾಯ ಮಾಡುತ್ತೇನೆ ಎಂದು ಶಾಸಕ ಡಾ.ಮಂತರ್‌ಗೌಡ ಭರವಸೆ ನೀಡಿದ್ದಾರೆ.
ಸೋಮವಾರಪೇಟೆ ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ ನೂತನ ಕೊಠಡಿಗಳನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಮಕ್ಕಳು ಓದಲೇಬೇಕು. ವಿದ್ಯೆಯೇ ನಮ್ಮನ್ನು ಉನ್ನತ ಸ್ಥಾನಕ್ಕೆ ತಲುಪಿಸುತ್ತದೆ. ಕಲಿತ ವಿದ್ಯೆಯನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದ ಅವರು, ಇತ್ತೀಚಿನ ವರ್ಷಗಳಲ್ಲಿ ಅತೀ ಹೆಚ್ಚು ರ‍್ಯಾಂಕ್‌ಗಳನ್ನು ಗ್ರಾಮೀಣ ಮಕ್ಕಳು ಪಡೆಯುತ್ತಿದ್ದಾರೆ ಎಂಬುದೇ ನಮಗೆ ಹೆಮ್ಮೆ ಎನಿಸುತ್ತದೆ. ಮಕ್ಕಳ ಕಲಿಕೆಗೆ ಪೋಷಕರು, ಶಿಕ್ಷಕರು ಪ್ರೋತ್ಸಾಹ ನೀಡುವುದು ಅವರ ಜವಾಬ್ದಾರಿಯಾಗಿದೆ. ಓದು ಮುಂದುವರಿಸಲು ಕಷ್ಟವಾದ ಕುಟುಂಬಗಳು ಹಿಂಜರಿಕೆಯಿಲ್ಲದೆ ಸಹಾಯ ಕೇಳಬೇಕು. ನಾನು ಕೂಡ ಎಲ್ಲಾ ಸಂದರ್ಭದಲ್ಲೂ ಸಹಾಯ ಮಾಡುತ್ತೇನೆ. ಸಂಘ-ಸAಸ್ಥೆಗಳು, ದಾನಿಗಳು ಕೂಡ ಶಿಕ್ಷಣ ಮುಂದುವರಿಸಲು ಅವಶ್ಕಕತೆಯಿದ್ದವರಿಗೆ ಸಹಾಯ ಮಾಡುತ್ತಾರೆ ಎಂದು ಹೇಳಿದರು. ಒಕ್ಕಲಿಗ ರೈತಾಪಿ ಕುಟುಂಬಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಭಾಗದಲ್ಲಿ ವಾಸವಾಗಿದ್ದಾರೆ. ಪ್ರತಿ ಕುಟುಂಬಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಲೇಬೇಕು. ಈ ನಿಟ್ಟಿನಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದವರು ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಹೆಸರಿನಲ್ಲಿ ಆಂಗ್ಲಮಾಧ್ಯಮದಲ್ಲಿ ಶಾಲಾ, ಕಾಲೇಜು ತೆರೆದು, ವಿದ್ಯಾದಾನ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎ.ಆರ್.ಮುತ್ತಣ್ಣ ಮಾತನಾಡಿ, 2005ನೇ ಇಸವಿ ಯಲ್ಲಿ ಎಲ್‌ಕೆಜಿ ಯಿಂದ ಪ್ರಾರಂಭವಾದ ವಿದ್ಯಾಸಂಸ್ಥೆ ಇವತ್ತು ದೊಡ್ಡದಾಗಿ ಬೆಳೆದಿದೆ. ಕಳೆದ 9 ವರ್ಷಗಳಿಂದ ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 100ರಷ್ಟು ಫಲಿತಾಂಶ ಪಡೆಯಲಾಗಿದೆ. ಪ್ರಸಕ್ತ ವರ್ಷ ಜಿಲ್ಲಾ ಮಟ್ಟದಲ್ಲಿ ಮೂರು ರ‍್ಯಾಂಕ್‌ಗಳು ನಮ್ಮ ಕುವೆಂಪು ವಿದ್ಯಾಸಂಸ್ಥೆಗೆ ಸಿಕ್ಕಿದೆ. ಪಿಯುಸಿ ವಿಭಾಗದ ವಿಜ್ಞಾನ ವಿಭಾಗದಲ್ಲೂ ಶೇ.100ರಷ್ಟು ಫಲಿತಾಂಶ ಸಿಕ್ಕಿದೆ ಎಂದು ಹೇಳಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸಿ.ಎಸ್.ಆದ್ವಿ,( ರಾಜ್ಯಕ್ಕೆ 3ನೇ ರ‍್ಯಾಂಕ್) ಕೆ.ಸಿ.ಪಂಚಮಿ(ರಾಜ್ಯಕ್ಕೆ 4ನೇ ರ‍್ಯಾಂಕ್), ಕೆ.ಎಸ್.ತೇಜಸ್ವಿನಿ( ರಾಜ್ಯಕ್ಕೆ 5ನೇ ರ‍್ಯಾಂಕ್) ಹಾಗು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಪಡೆದ ಮಹಮ್ಮದ್ ಇರ್ಮಾನ್, ಎಸ್.ವೈ. ಹಿಮಾನಿ, ವೈ.ಎಸ್.ಧನ್ಯ, ವಾಣಿಜ್ಯ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಪಡೆದ ಕೆ.ಎಂ.ಸೃಷ್ಟಿ, ಎಂ.ಡಿ.ಖುಷಿ, ಡಿ.ಎಸ್.ಸ್ನೇಹ ಅವರುಗಳನ್ನು ಅಭಿನಂಧಿಸಲಾಯಿತು. ಇದೇ ಸಂದರ್ಭ ದಾನಿಗಳನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಬೆಂಗಳೂರಿನ ಉದ್ಯಮಿಗಳಾದ ಕೆ.ಟಿ.ಬೆಳ್ಳಿಗೌಡ, ಮಂಜೂರು ತಮ್ಮಣಿ, ಸಂಘದ ಉಪಾಧ್ಯಕ್ಷ ಎಸ್.ಬಿ.ಭರತ್ ಕುಮಾರ್, ಗೌರವ ಕಾರ್ಯದರ್ಶಿ ಎನ್.ಬಿ.ಗಣಪತಿ, ಖಜಾಂಚಿ ಜಿ.ಪಿ.ಲಿಂಗರಾಜು, ವಿದ್ಯಾಸಂಸ್ಥೆಯ ಭಾತ್ಮೀದಾರರಾದ ಕೆ.ಎಂ.ಜಗದೀಶ್, ಸಮುದಾಯಭವನ ಉಸ್ತುವಾರಿ ಕೆ.ಟಿ.ಪರಮೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ ಮತ್ತು ಸಂಘದ ನಿರ್ದೇಶಕರುಗಳು, ವಿಶೇಷ ಅಹ್ವಾನಿತರಾದ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ, ಪ್ರಗತಿಪರ ಮಹಿಳಾ ವೇದಿಕೆ ಅಧ್ಯಕ್ಷೆ ಚಂದ್ರಿಕಾ ಕುಮಾರ್, ನಗರ ಗೌಡ ಒಕ್ಕೂಟದ ಅಧ್ಯಕ್ಷ ಎಂ.ಎಂ.ಪ್ರಕಾಶ್ ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕೊಡವರು ಅಂದ್ರೆ ಹಾಕಿ : ಹಾಕಿ ಅಂದ್ರೆ ಕೊಡವರು : ಸಿಎಂ ಶ್ಲಾಘನೆ : ಚೇನಂಡ ಕೊಡವ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ : ಸಿ.ಎಂ ಘೋಷಣೆ*
Next Article *ಶಾಸಕ ಎ.ಮಂಜು ಜನ್ಮ ದಿನಾಚರಣೆ : ಶಾಸಕ ಡಾ.ಮಂತರ್ ಗೌಡ ನೇತೃತ್ವದಲ್ಲಿ ಸಂಭ್ರಮದ ಕಾರ್ಯಕ್ರಮ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.