

ವಿರಾಜಪೇಟೆ ನ.4 NEWS DESK : ಗೋಣಿಕೊಪ್ಪ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕಾವೇರಿ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಭಾರದ ಗುಂಡು ಎಸೆತ ಸ್ಪರ್ಧೆಯಲ್ಲಿ ಗೋಣಿಕೊಪ್ಪ ಕಾವೇರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮನೆಯಪಂಡ ಶಿಪ್ರಾ ಕಾಳಪ್ಪ ಚಿನ್ನದ ಪದಕದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಅಲ್ಲದೆ, ಮೈಸೂರಿನಲ್ಲಿ ನಡೆದ 5ನೇ ಮುಕ್ತ ಕರಾಟೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಇವರು ವಿರಾಜಪೇಟೆಯ ಮನೆಯಪಂಡ ಎನ್.ಕಾಳಪ್ಪ, ಪುರಸಭೆ ಅಧ್ಯಕ್ಷೆ ದೇಚಮ್ಮ ದಂಪತಿ ಪುತ್ರಿ.











