Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂಗಿಗೆ ತುಪ್ಪ ಸವರುವುದನ್ನು ಬಿಡಿ, ರಸ್ತೆಗಳ ಅಭಿವೃದ್ಧಿಗೆ ರೂ.1000 ಕೋಟಿ ಕೊಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ಸುಂಟಿಕೊಪ್ಪ ಮಾಲಯಾಳಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  •  *ದೆಹಲಿಯ ತಲ್ ಸೈನಿಕ್ ಶಿಬಿರಕ್ಕೆ ಕೊಡಗು ವಿದ್ಯಾಲಯದ ಎನ್.ಸಿ.ಸಿ ಕೆಡೆಟ್ ಆಯ್ಕೆ*
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಉದ್ಘಾಟನೆ : ಕಲಾ ಪ್ರತಿಭೆಗಳು ಸಮಾಜದ ಬೆಳವಣಿಗೆಗೆ ಅತ್ಯಗತ್ಯ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಉದ್ಘಾಟನೆ : ಕಲಾ ಪ್ರತಿಭೆಗಳು ಸಮಾಜದ ಬೆಳವಣಿಗೆಗೆ ಅತ್ಯಗತ್ಯ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*

ನವೆಂಬರ್ 4, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.4 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ನಡೆದ ಕಲಾ ಪ್ರತಿಭೋತ್ಸವದಲ್ಲಿ ಜಿಲ್ಲೆಯ ವಿವಿಧೆಡೆಯಿಂದ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಒಂದು ಕಡೆ ಶಾಸ್ತ್ರೀಯ ನೃತ್ಯ, ಮತ್ತೊಂದು ಕಡೆ ಜನಪದ ಗೀತೆ, ಇನ್ನೊಂದು ಕಡೆ ಚಿತ್ರಕಲೆ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಹೀಗೆ ಕಲಾ ಪ್ರತಿಭೋತ್ಸವದಲ್ಲಿ ನೂರಾರು ವಿದ್ಯಾರ್ಥಿಗಳು ಲವಲವಿಕೆಯಿಂದ ಪಾಲ್ಗೊಂಡಿದ್ದು ಕಂಡುಬಂದಿತು.  ನಗರದ ಗಾಂಧಿ ಭವನದಲ್ಲಿ ನಡೆದ ಕಲಾ ಪ್ರತಿಭೋತ್ಸವದಲ್ಲಿ ಬಾಲಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆ ಹೀಗೆ ಸಮೂಹ ಸ್ಪರ್ಧೆಗಳು ನಡೆದಿದ್ದು ವಿಶೇಷವಾಗಿತ್ತು. :: ಬಾಲ ಪ್ರತಿಭೆ ::  ಶಾಸ್ತ್ರೀಯ ನೃತ್ಯ, ಜನಪದ ಗೀತೆ, ಚಿತ್ರಕಲೆ, ಕರ್ನಾಟಕ/ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ/ಹಿಂದೂಸ್ತಾನಿ ವಾದ್ಯ ಸಂಗೀತ, ಸುಗಮ ಸಂಗೀತ. :: ಕಿಶೋರ ಪ್ರತಿಭೆ :: ಚಿತ್ರಕಲೆ, ಕರ್ನಾಟಕ/ ಹಿಂದೂಸ್ತಾನಿ ಸಂಗೀತ, ಶಾಸ್ತ್ರೀಯ ನೃತ್ಯ, ಜನಪದ ಗೀತೆ, ಕರ್ನಾಟಕ/ ಹಿಂದೂಸ್ತಾನಿ ವಾದ್ಯ ಸಂಗೀತ  ಮತ್ತು ಸುಗಮ ಸಂಗೀತ :: ಯುವ ಪ್ರತಿಭೆ :: ಚಿತ್ರಕಲೆ, ಕರ್ನಾಟಕ/ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ನನ್ನ ಮೆಚ್ಚಿನ ಸಾಹಿತಿ ಆಶುಭಾಷಣ, ಶಾಸ್ತ್ರೀಯ ನೃತ್ಯ, ನಾಟಕ(ಸಮೂಹ ಸ್ಪರ್ಧೆ), ಕರ್ನಾಟಕ/ಹಿಂದೂಸ್ತಾನಿ ವಾದ್ಯ ಸಂಗೀತ ಹಾಗೂ ಸುಗಮ ಸಂಗೀತ ಮತ್ತಿತರ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಲಾಗಿತ್ತು.  ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಮಕ್ಕಳು ಮತ್ತು ಯುವಜನರ ಕಲಾಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾ ನೈಪುಣ್ಯ ವೃದ್ಧಿಗೊಳಿಸುವಂತೆ ಪ್ರೋತ್ಸಾಹಿಸಲು ಕಲಾ ಪ್ರತಿಭೋತ್ಸವ ರೂಪಿಸಲಾಗಿದೆ ಎಂದರು.  ಮಕ್ಕಳ ಆತ್ಮವಿಶ್ವಾಸ ವೃದ್ಧಿಸುವ ಮತ್ತು ಕಲಾವಿದರನ್ನು ಪ್ರೇರೇಪಿಸುವುದು ಇದರ ಉದ್ದೇಶವಾಗಿದೆ. ಕಲಾ ಪ್ರತಿಭೆಗಳು ಸಮಾಜದ ವಿಜ್ಞಾನ, ತಂತ್ರಜ್ಞಾನ, ಕ್ರೀಡೆ ಮುಂತಾದವು ಬೆಳವಣಿಗೆಗೆ ಅತ್ಯಗತ್ಯ ಎಂದರು. ಕಲಾಪ್ರತಿಭೋತ್ಸವದಿಂದ ವಿದ್ಯಾರ್ಥಿಗಳಿಗೆ ಕಲೆ, ಸಂಗೀತ, ನೃತ್ಯ ಹಾಗೂ ಅನೇಕ ಪ್ರತಿಭೆಗಳನ್ನು ಬೆಳೆಸಲು ಸಾಧ್ಯ ಎಂದು ಹೇಳಿದರು. ಕೊಡಗು ಜಿಲ್ಲೆಯ ಮಕ್ಕಳಲ್ಲಿ ಅಸಾಮಾನ್ಯ ಪ್ರತಿಭೆಗಳು ಅಡಗಿವೆ. ತಮ್ಮ ಕಲೆಗಳ ಮೂಲಕ ಜಿಲ್ಲೆಯ ಗೌರವವನ್ನು ಹೆಚ್ಚಿಸುತ್ತಿದ್ದಾರೆ. ಸೋಲು ಅಥವಾ ಗೆಲುವು ಮುಖ್ಯವಲ್ಲ. ಪಾಲ್ಗೊಳ್ಳುವುದು ಮತ್ತು ಧೈರ್ಯದಿಂದ ಪ್ರದರ್ಶಿಸುವುದು ಅತ್ಯಂತ ಮುಖ್ಯ ಎಂದರು. ಕೊಡುಗು ಜಿಲ್ಲೆಯಲ್ಲಿ ಮತ್ತಷ್ಟು ಪ್ರತಿಭಾವಂತರು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬೆಳಗಲಿ ಎಂದು ಆಶಿಸಿದರು.  ಕೊಡಗು ಜಾನಪದ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಬಿ.ಜಿ.ಅನಂತಶಯನ ಅವರು ಮಾತನಾಡಿ ಗುರಿ ಇಟ್ಟುಕೊಂಡರೆ ಜೀವನದಲ್ಲಿ ಮುಂದೆ ಸಾಗಲು ಸಾಧ್ಯ. ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು. ಪ್ರತಿಯೊಬ್ಬರಲ್ಲಿಯೂ ಒಂದೊಂದು ರೀತಿಯ ಪ್ರತಿಭೆ ಇದ್ದು, ಇಂತಹ ಕಲಾ ಪ್ರತಿಭೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ತಮ್ಮಲ್ಲಿರುವ ಕಲೆಗಳ ಪ್ರದರ್ಶನಕ್ಕೆ ಅವಕಾಶವಿದೆ. ಆ ನಿಟ್ಟಿನಲ್ಲಿ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ಬಿ.ಜಿ.ಅನಂತಶಯನ ಅವರು ಹೇಳಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಚಿದಾನಂದ ಕುಮಾರ್ ಅವರು ಮಾತನಾಡಿ ಕೊಡಗು ಜಿಲ್ಲೆಯ ಮಕ್ಕಳಲ್ಲಿ ಪ್ರತಿಭೆಗಳನ್ನು ಅನಾವರಣಗೊಳಿಸಲು ಈ ವೇದಿಕೆಯು ಉತ್ತಮ ಅವಕಾಶವಾಗಿದೆ ಎಂದು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಮುನೀರ್ ಅಹಮ್ಮದ್ ಅವರು ಮಾತನಾಡಿ ಪ್ರತಿಭಾ ಉತ್ಸವಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಮಹತ್ವವಾಗಿದೆ ಎಂದು ಹೇಳಿದರು.  ಶಾಲಾ ಶಿಕ್ಷಣ ಇಲಾಖೆಯ ಕೆ.ಆರ್.ಬಿಂದು ಅವರು ಮಾತನಾಡಿ ಯಾವುದೇ ಪ್ರತಿಭೆ  ಸ್ಪರ್ಧೆಗಳಲ್ಲಿ ಭಾಗವಹಿಸಿದರೆ ಗೆದ್ದರೆ ಪ್ರಶಸ್ತಿ ಹಾಗೂ ಸೋತರೆ ಅನುಭವ ಸಿಗುತ್ತೆ ಎಂಬ ಮನಸ್ಥಿತಿಯೊಂದಿಗೆ ಪಾಲ್ಗೊಳ್ಳಬೇಕು ಎಂದು ಸಲಹೆ ಮಾಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಸ್ವಾಗತಿಸಿದರು. ಬಿ.ಸಿ.ಶಂಕರಯ್ಯ ನಾಡಗೀತೆ ಹಾಡಿದರು. ಅನಿತಾ ನಿರೂಪಿಸಿದರು. ಮಣಜೂರು ಮಂಜುನಾಥ್ ವಂದಿಸಿದರು. ವಿದ್ಯಾರ್ಥಿಗಳು, ಪೆÇೀಷಕರು ಇತರರು ಇದ್ದರು.

 

 

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂಗಿಗೆ ತುಪ್ಪ ಸವರುವುದನ್ನು ಬಿಡಿ, ರಸ್ತೆಗಳ ಅಭಿವೃದ್ಧಿಗೆ ರೂ.1000 ಕೋಟಿ ಕೊಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 31, 2026

*ಸುಂಟಿಕೊಪ್ಪ ಮಾಲಯಾಳಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

ಆಗಷ್ಟ್ 31, 2026

 *ದೆಹಲಿಯ ತಲ್ ಸೈನಿಕ್ ಶಿಬಿರಕ್ಕೆ ಕೊಡಗು ವಿದ್ಯಾಲಯದ ಎನ್.ಸಿ.ಸಿ ಕೆಡೆಟ್ ಆಯ್ಕೆ*

ಆಗಷ್ಟ್ 31, 2026

*ಸುಂಟಿಕೊಪ್ಪ ಮಾಲಯಾಳಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

ಆಗಷ್ಟ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಆ.31: ಸುಂಟಿಕೊಪ್ಪ ಮಾಲಯಾಳಿ ಸಮಾಜದ 2026-27ನೇ ಸಾಲಿನ ಅಧ್ಯಕ್ಷರಾಗಿ ಕೆ.ಕೆ. ವಾಸುದೇವ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕೆ.ಕೆ.…

 *ದೆಹಲಿಯ ತಲ್ ಸೈನಿಕ್ ಶಿಬಿರಕ್ಕೆ ಕೊಡಗು ವಿದ್ಯಾಲಯದ ಎನ್.ಸಿ.ಸಿ ಕೆಡೆಟ್ ಆಯ್ಕೆ*

ಆಗಷ್ಟ್ 31, 2026

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.