ಮಡಿಕೇರಿ ನ.6 NEWS DESK : ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ 49ನೇ ವರ್ಷದ ದಸರಾ ಮಹೋತ್ಸವದ ಶೋಭಾಯಾತ್ರೆಯಲ್ಲಿದ್ದ ಮೂರ್ತಿಗಳ ಶಾಂತಿಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. ನಗರದ ಶ್ರೀ ಕೋಟೆ ಮಹಾಗಣಪತಿ ದೇವಾಲಯದ ಆವರಣದಲ್ಲಿ ಸಂಜೆ ಶಾಂತಿಪೂಜೆ, ರಂಗಪೂಜೆ ಮತ್ತು ದೀಪಾರಾಧನೆ ನೆರವೇರಿತು. ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪೂಜೆ ಪ್ರಾರ್ಥನೆ ನೆರವೇರಿಸಿದರು. ಇದೇ ಸಂದರ್ಭ ದಶ ದೇವಾಲಯದ ಎಲ್ಲಾ ಅಧ್ಯಕ್ಷರುಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯು ಮುಂದಿನ ವರ್ಷ 50ನೇ ವರ್ಷದ ದಸರಾ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದು, ಸರ್ವರು ಸಹಕಾರ ನೀಡಬೇಕೆಂದು ಸಮಿತಿಯ ಅಧ್ಯಕ್ಷ ವಿಘ್ನೇಶ್ ಸಿ.ಯು ಮನವಿ ಮಾಡಿದರು.











