ಮಡಿಕೇರಿ ನ.6 NEWS DESK : ವಿರಾಜಪೇಟೆಯ ಬಾಳುಗೋಡು ಕೊಡವ ಸಮಾಜದಲ್ಲಿ ಆಯೋಜನೆಗೊಂಡ, ಅಂತರ ಕೊಡವ ಸಮಾಜ ಹಾಕಿ ಕ್ರೀಡಾ ಮತ್ತು ವಿವಿಧ ಸಾಂಸ್ಕೃತಿಕ ಪೈಪೋಟಿ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ವಿಶೇಷವಾಗಿ ಕೋವಿಯಲ್ಲಿ ಗುರಿಗೆ ತಾಗಿಸುವ ಸ್ಪರ್ಧೆ ಯಲ್ಲಿ ಶಾಸಕರು ಭಾಗಿಯಾಗಿ ಬಂದೂಕಿನಿಂದ ಗುಂಡು ಹಾರಿಸಿ ಗುರಿಗೆ ತಾಗಿಸಿ ಎಲ್ಲರ ಗಮನ ಸೆಳೆದರು. ಈ ಕಾರ್ಯಕ್ರಮದಲ್ಲಿ, ಕೊಡಗು ಮೈಸೂರು ಸಂಸದ ಯದುವೀರ್ ಒಡೆಯರ್, ರಾಜ್ಯ ಕ್ರೀಡಾ ಪ್ರಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಬಾಳುಗೋಡು ಕೊಡವ ಸಮಾಜದ ಅಧ್ಯಕ್ಷರು ವಿಷ್ಣು ಕಾರ್ಯಪ್ಪ, ಎಲ್ಲಾ ಕೊಡವ ಸಮಾಜದ ಅಧ್ಯಕ್ಷರುಗಳು ಪ್ರಮುಖರು ಹಾಗೂ ಆಹ್ವಾನಿತ ಅತಿಥಿ ಗಣ್ಯರು ಉಪಸ್ಥಿತರಿದ್ದರು. ತಾವು ಶಾಸಕರಾಗಿ ಆಯ್ಕೆಯಾಗುವ ಮೊದಲೇ ಬಾಳುಗೋಡು ಕೊಡವ ಸಮಾಜದವರ ಮನವಿ ಮೇರೆಗೆ ವೈಯುಕ್ತಿಕವಾಗಿ ಅನೇಕ ಬಾರಿ ಸಮಾಜದ ಅಭಿವೃದ್ಧಿಗೆ ಸಹಾಯ ಮಾಡಿದ್ದರು. ಶಾಸಕರಾಗಿ ಆಯ್ಕೆಯಾದ ಬಳಿಕ, ಬಾಳುಗೋಡು ಕೊಡವ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಅದರಲ್ಲೂ ವಿಶೇಷವಾಗಿ ಮೈದಾನ, ತಡೆಗೋಡೆ ಹಾಗೂ ಅಲ್ಲಿಯ ವಿವಿಧ ಕಟ್ಟಡಗಳ ಅಭಿವೃದ್ಧಿ ಹೀಗೆ ಹತ್ತು ಹಲವು ಕಾಮಗಾರಿಗಳಿಗೆ ವಿಶೇಷ ಅನುದಾನಗಳನ್ನು ಒದಗಿಸಿದನ್ನು ಇಲ್ಲಿ ಸ್ಮರಿಸಬಹುದು.











