ಮಡಿಕೇರಿ ನ.10 NEWS DESK : ಸಮರ್ಥ ಕನ್ನಡಿಗರು ಸಂಸ್ಥೆ ವತಿಯಿಂದ ಮಡಿಕೇರಿಯಲ್ಲಿ ನಡೆದ ಛದ್ಮವೇಷ ಸ್ಪರ್ಧೆಯಲ್ಲಿ ಸ್ಮೃತಿ ಎಸ್.ಭಾರಧ್ವಜ್ ದ್ವಿತೀಯ ಬಹುಮಾನ ಗೆದ್ದಿದ್ದಾಳೆ. 4 ರಿಂದ 7 ವರ್ಷದೊಳಗಿನ ವಿಭಾಗದಲ್ಲಿ ಸ್ಮೃತಿ ಎಸ್.ಭಾರಧ್ವಜ್ ಮಹಿಷ ಮರ್ದಿನಿಯಾಗಿ ಕಾಣಿಸಿಕೊಂಡು ತೀರ್ಪುಗಾರರ ಮೆಚ್ಚುಗೆಗೆ ಪಾತ್ರಳಾದಳು. ಈಕೆ ಪೊನ್ನಂಪೇಟೆ ಸಮೀಪದ ಬೇಗೂರು ಶ್ರೀ ಪೂಳೆಮಾಡು ಈಶ್ವರ ದೇವಸ್ಥಾನದ ಅರ್ಚಕರಾದ ಸುಂದರೇಶ ಭಾರಧ್ವ್ವಜ್ ಹಾಗೂ ಆಶಿಕಾ ದಂಪತಿಯ ಪುತ್ರಿ.











