

ಸುಂಟಿಕೊಪ್ಪ ನ.12 NEWS DESK : ಎಷ್ಟೇ ದೊಡ್ಡ ಪದವಿಗಳನ್ನು ಪಡೆದುಕೊಂಡರೇ ದೊಡ್ಡವರಾಗುವುದಿಲ್ಲ. ಜೀವನದಲ್ಲಿ ಸಂಸ್ಕಾರ ಹಾಗೂ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ನಡೆದುಕೊಳ್ಳುವವರೇ ನಿಜವಾದ ಪದವಿಧರರು ಎಂದು ಕನ್ನಡ ಭಾರತಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಸತೀಶ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾನ್ಬೈಲ್ ತಲಾಕಾವೇರಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸಂಘದ ಸದಸ್ಯರಿಗೆ ಮಂಜಿಕೆರೆ ಸಮುದಾಯ ಭವನದಲ್ಲಿ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಪೋಷಕರೆ ಶಿಕ್ಷಕರು. ಮಕ್ಕಳು 14 ವರ್ಷದವರೆಗೆ ಪೋಷಕರನ್ನು ಅನುಸರಿಸಿಕೊಂಡು ಮುನ್ನಡೆಯುತ್ತಾರೆ ಆ ಸಂದರ್ಭದಲ್ಲಿ ಪೋಷಕರು ಮನೆಗಳಲ್ಲಿ ಅನ್ಯೋನ್ಯತೆ, ಉತ್ತಮ ವಾತವರಣವನ್ನು ನಿರ್ಮಿಸಿಕೊಡಲ್ಲಿ ಮಾತ್ರ ಮಕ್ಕಳಿಂದ ಭವಿಷ್ಯವನ್ನು ಎದುರು ನೋಡಬಹುದಾಗಿದೆ. ಮನೆಯೇ ಮೊದಲ ಗುರುವಾಗಿದ್ದು ಶಿಕ್ಷಕರಲ್ಲಾವೆಂದು ಅವರು ಬಣ್ಣಿಸಿದರು. ಮಕ್ಕಳು ಪ್ರೌಢಶಾಲೆಯನ್ನು ಮುಗಿಸಿ ಪದವಿ ಕಾಲೇಜುಗಳಿಗೆ ಸೇರಿಸುವ ಮುನ್ನ ಪೋಷಕರು ಮಕ್ಕಳೊಂದಿಗೆ ಚರ್ಚಿಸಿ ಮಕ್ಕಳ ಆಸಕ್ತಿ ಮತ್ತು ಅಭಿರುಚಿಯ ಬಗ್ಗೆ ಆರಿತು ಅಂತಹ ಶಿಕ್ಷಣಗಳಿಗೆ ಪ್ರೋತ್ಸಾಹಿಸಬೇಕು ಇದಿರಂದ ಮಕ್ಕಳು ಸಂಪನ್ಮೂಲ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯವೆಂದು ಅವರು ನುಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಕಾನ್ಬೈಲ್ ಒಕ್ಕೂಟದ ಉಪಾಧ್ಯಕ್ಷೆ ಗೀತಾ, ಮಾಜಿ ಅಧ್ಯಕ್ಷೆ ಖತ್ತೀಜ, ಸೇವಾ ಪ್ರತಿನಿಧಿ ಯಶೋಧ ಇದ್ದರು. ಈ ಸಂದರ್ಭ ಕನ್ನಿಕಾ, ಧೃತಿ, ಭೂಮಿಕ, ಭಗವತಿ ಮತ್ತು ಶ್ರೀನಿಧಿ ಸಂಘದ ಪದಾಧಿಕಾರಿಗಳು ಮಾಹಿತಿ ಕಾರ್ಯಗಾರದಲ್ಲಿ ಪಾಲ್ಗೊಂಡಿದ್ದರು.











