Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಗ್ರಾಮಸಭೆ
ಇತ್ತೀಚಿನ ಸುದ್ದಿಗಳು

ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಗ್ರಾಮಸಭೆ

November 13, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link
ಸುಂಟಿಕೊಪ್ಪ,ನ.13 NEWS DESK : ಬಡಾವಣೆಗಳಿಗೆ ಮೂಲಭೂತ ಸೌಕರ್ಯಗಳು, ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಬೇಕೆಂಬ ಸಲಹೆ, ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಮಾರ್ಪಡುಗೊಳ್ಳಬೇಕು, ಪೈಸಾರಿ ಜಾಗಗಳು ಪಂಚಾಯಿತಿ ಸುರ್ಪದಿಗೆ ಒಳಪಟ್ಟು ಬಡವರಿಗೆ ಸೂರು ಹಂಚಿಕೆಗೊಳ್ಳಬೇಕೆಂದು ಗ್ರಾಮಸಭೆಯಲ್ಲಿ ಗ್ರಾಮಸ್ಥರ ಹಕ್ಕೊತ್ತಾಯ ಕೇಳಿ ಬಂತು. ಸುಂಟಿಕೊಪ್ಪ ಗ್ರೇಡ್  1 ಗ್ರಾಮ ಪಂಚಾಯಿತಿ 2025-26ನೇ ಸಾಲಿನ ಗ್ರಾಮಸಭೆಯ ಅಧ್ಯಕ್ಷತೆಯನ್ನು  ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ವಹಿಸಿದ್ದರು. ಶ್ರೀ ಮಂಜುನಾಥಯ್ಯ ಮಿನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ  ನಡೆಸಲಾದ ಸಭೆಯಲ್ಲಿ  ಕಳೆದ ಬಾರಿ ಗ್ರಾಮಸಭೆಯಲ್ಲಿ ಚರ್ಚಿಸಲಾದ ವಿಚಾರಗಳನ್ನು ಅನುಷ್ಠಾನಗೊಳಿಸಲಾಗಿದೆ. ಇದರ ಮಾಹಿತಿ ಗಂಭೀರ ವಿಚಾರಗಳ ಬಗ್ಗೆ ಕ್ರಮ ಕೈಗೊಳ್ಳದಿರುವ ಬಗ್ಗೆ ಗ್ರಾಮಸ್ಥರಾದ ಸೂಪಿ, ಇಬ್ರಾಹಿಂ, ಕೆ.ಎ.ಲತೀಫ್, ರಜಾಕ್ , ದಿನೇಶ್ , ಉದಯಕುಮಾರ್ ಡೆವಿಡ್  ಜನ್ಸಾನ್, ಮಮತ ಸೇರಿದಂತೆ ಮತ್ತಷ್ಟು ಗ್ರಾಮಸ್ಥರು ವರದಿಯ ಬಗ್ಗೆ ಅಸಾಮಾದಾನ ವ್ಯಕ್ತಪಡಿಸಿದರು.  ಇಬ್ರಾಹಿಂ ಮಾತನಾಡಿ ಪ್ರತಿ ಗ್ರಾಮಸಭೆಯಲ್ಲಿ ನಾವು ಹೇಳುವುದು ನೀವು ಬರೆದುಕೊಳ್ಳುವುದು ಮತ್ತು ಸಭೆಯಲ್ಲಿ ಓದುವುದಕ್ಕೆ  ಮಾತ್ರ ಸೀಮಿತವಾಗಿದೆ ಯಾವ ಯಾವ ಬೇಡಿಕೆಗಳು ಈಡೇರಿಕೆಗೆಯಾಗಿದೆ ಎಂಬುದನ್ನು ಓದಿ ಎಂಬುದನ್ನು ಆಗ್ರಹಿಸಿದರು. ಗದ್ದೆಹಳ್ಳ ನಿವಾಸಿಗಳಾದ ರುಕ್ಸಾನ, ರಜಾಕ್ ಮತ್ತು ಪಟ್ಟೆಮನೆ ಉದಯಕುಮಾರ್ ಮಾತನಾಡಿ, ಸುಂಟಿಕೊಪ್ಪ ಪಟ್ಟಣದ ತ್ಯಾಜ್ಯನೀರು ಮತ್ತು ಮಳೆಗಾಲದಲ್ಲಿ ಪ್ರವಾಹದ ನೀರು ಕೃಷಿ ಮತ್ತು ಮನೆಗಳಿಗೆ ನುಗ್ಗುತ್ತಿದ್ದು, ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಬೇಕು. ಕೆಲವು ಕಡೆಗಳಲ್ಲಿ ಅಪೂರ್ಣ ಕಾಮಗಾರಿ ನಿರ್ವಹಿಸುವುದರಿಂದ ಸಮಸ್ಯೆ ಹೆಚ್ಚಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಎಸ್ ಐ ದೇವಾಲಯದ ಧರ್ಮಗುರುಗಳಾದ ಮಧುಕಿರಣ್, ವಿಲಿಯಂ ಮತ್ತು ರತ್ನಕುಮಾರ್ ಮಾತನಾಡಿ ಕೊಡವ ಸಮಾಜದ ಸಭಾಂಗಣದಲ್ಲಿ ನಿಯಮ ಮೀರಿ ತಡ ರಾತ್ರಿಯ ವರೆಗೂ ಡಿಜೆ ಮತ್ತು ಧ್ವನಿವರ್ಧಕಗಳನ್ನು ಬಳಕೆ ಮಾಡುತ್ತಿದ್ದು ಜನವಸತಿ ಪ್ರದೇಶವಾಗಿದ್ದು ಚರ್ಚ್ ಮತ್ತು ಮಸೀದಿಗಳಿದ್ದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ರಿದೆ. ಸಂಬಂಧಿಸಿದ ಇಲಾಖೆಗಳಿಗೆ ಸೂಚನೆ ಕೊಟ್ಟು ಈ ಬಗ್ಗೆ ಸೂಕ್ತ ಕ್ರಮಕ್ಕೆ ಸೂಚಿಸಲಾಗುವುದು. ಸಮಗ್ರ ವರದಿ ಬಂದ ಬಳಿಕ ಕಾರ್ಯನಿರ್ವಹಣಾಧಿಕಾರಿಯನ್ಮು ಕರೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದೆಂದು ಸಭೆಯ ನೊಡಲ್ ಅಧಿಕಾರಿ ಸಿದ್ದೇಗೌಡ ಮಾಹಿತಿ ನೀಡಿದರು. ಪಟ್ಟಣದ ಕಸ ವಿಲೇವಾರಿ ಬಗ್ಗೆ ಸಭೆಯಲ್ಲಿ ತೀವ್ರ ಚರ್ಚೆ ನಡೆದು ಪಂಚಾಯಿತಿ ಯ ಕಸವಿಲೆವಾರಿ ಬಗ್ಗೆ ಅಸಾಮಾದಾನ ವ್ಯಕ್ತವಾಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಮಾತನಾಡಿ ಸುಂಟಿಕೊಪ್ಪ ದಲ್ಲಿ ಒಣಕಸ ವಿಲೇವಾರಿ ಘಟಕ ಮಾತ್ರ ಇದ್ದು ಹಸಿ ಕಸವನ್ನು ಆಯಾ ಮನೆಯವರೇ ವಿಲೇವಾರಿಗೊಳಿಸಬೇಕೆಂಬ ಮಾರ್ಗಸೂಚಿ ಇದೆ. ಕಸ ವಿಲೇವಾರಿ ಯಲ್ಲಿ ಜನರ ಸಹಕಾರವು ಬೇಕೆಂದು ಮನವಿ ಮಾಡಿದರು. ಗ್ರಾಮಸಭೆಯಲ್ಲಿ ಖಾಸಗಿ ಬಡಾವಣೆಯಲ್ಲಿ ಮನೆಗಳು ಹಾಗೂ ಮಳಿಗೆಗಳು ನಿರ್ಮಾಣಗೊಂಡಿದ್ದು, ಮುಖ್ಯವಾಗಿ ಮನೆಗಳಿಗೆ ನೀರು ಸೌಲಭ್ಯ ಒದಗಿಸಲು ಮೀನಾಮೇಷ, ಪಂಚಾಯಿತಿಯಿಂದ ಮೀನು ಮಾಂಸ ಮಳಿಗೆಗಳು ಖಾಸಗಿ ವ್ಯಕ್ತಿಯ ಜಾಗದಲ್ಲಿ ನಿರ್ಮಿಸಿದ್ದು ಪಂಚಾಯಿತಿ ಯ ಸಾರ್ವಜನಿಕ ರ ಹಣವನ್ನು ಪೋಲು ಮಾಡಲಾಗಿದೆ ಎಂದು ಕೆ.ಎ.ಲತೀಫ್ ಮತ್ತು ದಿನೇಶ್ ದಾಖಲೆ ಸಹಿತ ಆರೋಪ ಮಾಡಿದ್ದರು. ಇದನ್ನು ಪಂಚಾಯಿತಿ ಅಧ್ಯಕ್ಷ, ಸದಸ್ಯರು ಮತ್ತು ಪಿಡಿಓ ಅಲ್ಲಗೆಳೆಯಲು ಮುಂದದಾಗ ದಿನೇಶ್ ತಮ್ಮ ಬಳಿಯಿದ್ದ ನಕ್ಷೆಯನ್ನು ಮತ್ತು ಅಧಿಕೃತ ದಾಖಲೆಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಪಾರ್ವತಮ್ಮ ಬಡಾವಣೆ ಮಮತ ಮಾತನಾಡಿ ನೀರಿನ ಮತ್ತು ಮೂಲಭೂತ ಸೌಲಭ್ಯ ದ ಬಗ್ಗೆ ಖಾಸಗಿ ಲೋಟಸ್ ಬಡಾವಣೆ ಮತ್ತು ಪಾರ್ವತಮ್ಮ ಬಡಾವಣೆ ನಡುವೆ ತಾರತಮ್ಯ ಮತ್ತು ಮಲತಾಯಿ ಧೋರಣೆ ಅನುಸರಿಸುತ್ತಿದ್ದು ಪಂಚಾಯಿತಿ ಆಡಳಿತ ಮಂಡಳಿ ಸರ್ವಸದಸ್ಯರ ನಡುವೆ ಒಗ್ಗಟ್ಟಿನ ಕೊರತೆ ಎದ್ದು ಕಾಣುತ್ತಿದೆ ಹಾಲಿ ಆಡಳಿತ ಮಂಡಳಿಯು ಹಿಂದಿನ ಆಡಳಿತ ಮಂಡಳಿಯ ಬಗ್ಗೆ ಆರೋಪ ಮಾಡುತ್ತಿದ್ದು, ಮುಂದಿನ ಆಡಳಿತ ಮಂಡಳಿ ಹಾಲಿ ಆಡಳಿತ ಮಂಡಳಿಯ ಬಗ್ಗೆ ಆರೋಪ ಮಾಡಿದರೆ ನಿಮ ಉತ್ತರವೇನು ಎಂದು ಪ್ರಶ್ನಿಸಿದರಲ್ಲದೆ ಆಡಳಿತ ಮಂಡಳಿಗಳ ಆರೋಪ ಪ್ರತ್ಯಾರೊಪದ ಬಗ್ಗೆ ಜನಸಾಮಾನ್ಯರು ಹೈರಾಣು ಆಗುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಪಂಚಾಯಿತಿ ಅದ್ಯಕ್ಷ ಪಿ.ಆರ್.ಸುನಿಲ್ ಕುಮಾರ್  ಮಾಲೀಕರಿಗೆ ನೋಟಿಸ್ ನೀಡಲಾಗಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.  ಕೆ.ಎ.ಲತೀಫ್ ಮಾತನಾಡಿ ಪಂಚಾಯಿತಿ ವ್ಯಾಪ್ತಿಯ ಲ್ಲಿ ಸಾಕಷ್ಟು  ಪ್ರಮಾಣದಲ್ಲಿ ಪೈಸಾರಿ ಇವುಗಳಲ್ಲಿ ಕೆಲವು ಅತಿಕ್ರಮಣಕ್ಕೆ ಒಳಗೊಂಡಿದೆ ಅನಧಿಕೃತ ಕಟ್ಟಡಗಳು ನಿರ್ಮಾಣಗೊಂಡಿದೆ. ಇವುಗಳಿಗೆ ಪಂಚಾಯಿತಿ ವತಿಯಿಂದ ಮೂಲಭೂತ ಸೌಲಭ್ಯ ಹೊಂದಿಕೊಳ್ಳಲು ಆದೇಶ ಪ್ರತಿ ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿ ಪಿ.ಆರ್.ಸುನಿಲ್ ಕುಮಾರ್ ಗ್ರಾಮ ಪಂಚಾಯಿತಿ ವತಿಯಿಂದ ಕಂದಾಯ ಇಲಾಖೆಗೆ ಮಾಹಿತಿಯನ್ನು ನೀಡಿ ಲತೀಫ್ ಅವರು ನೀಡಿದ ಮಾಹಿತಿ ನೀಡಿದರು. ಈ ಸಭೆಯಲ್ಲಿ ನೋಡಲ್ ಅಧಿಕಾರಿಯಾಗಿ ತೋಟಗಾರಿಕಾ ಇಲಾಖೆಯ  ಉಪನಿರ್ದೇಶಕ ಸಿದ್ದೇಗೌಡ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ  ಶಿವಮ್ಮ ಮಹೇಶ್, ಸದಸ್ಯರುಗಳಾದ ಪ್ರಸಾದ್ ಕುಟ್ಟಪ್ಪ, ಕೆ.ಎಂ.ಆಲಿಕುಟ್ಟಿ, ಶಬ್ಬೀರ್, ಮಂಜುನಾಥ್, ಬಿ.ಎಂ.ಸುರೇಶ್, ಪಿ.ಎಫ್.ಸಬಾಸ್ಟಿನ್, ಸೋಮನಾಥ್, ಶಾಂತಿ, ಗೀತಾ, ಮಂಜುಳ, ನಾಗರತ್ನ, ವಸಂತಿ, ರಫೀಕ್ ಖಾನ್, ಜಿನಾಸುದ್ದೀನ್, ಸೆಲಿನಾ ಜೆಫ್ರಿ  ಪ್ರಾರ್ಥಿಸಿ, ಡಿ.ಎಂ.ಮಂಜುನಾಥ್ ನಿರೂಪಿಸಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಲೆಕ್ಕಾಪರಿಶೋಧಕಿ ಚಂದ್ರಕಲಾ ಮತ್ತು ಗಣಕ ಯಂತ್ರ ಸಿಬ್ಬಂದಿ ಸಂದ್ಯಾ  ಹಿಂದಿನ ಗ್ರಾಮಸಭೆ ಹಾಗೂ ವಾರ್ಡ್ ಸಭೆ ವರದಿ ವಾಚಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಸೋಮವಾರಪೇಟೆ : ಫ್ಲೆಕ್ಸ್ ಗಳನ್ನು ತೆರವುಗೊಳಿಸಲು ಮಂಡಲ ಬಿಜೆಪಿ ಆಗ್ರಹ*
Next Article *ಸಂಸದರ ಬ್ಯಾಡ್ಮಿಂಟನ್‌ ಪಂದ್ಯಾವಳಿ ಪೋಸ್ಟರ್‌ ಬಿಡುಗಡೆ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.